ಶಿವಮೊಗ್ಗದ ಬೈಕ್ ಸವಾರರೆ ಎಚ್ಚರ.. ಎಚ್ಚರ.. ಬೆಳಗ್ಗೆಯಿಂದ ಈ ರಸ್ತೆಯಲ್ಲಿ ಜಾರಿ ಬಿದ್ದಿವೆ ಹತ್ತಾರು ಬೈಕ್‌ಗಳು, ಎಲ್ಲಿ? ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

147011183 1327318294296254 3834645892722110036 o.jpg? nc cat=105&ccb=3& nc sid=8bfeb9& nc ohc=ZNUWIDTXgPcAX9FSFBC& nc ht=scontent.fixe1 2

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 FEBRUARY 2021

ಮರವೊಂದರಿಂದ ರಸ್ತೆ ಮೇಲೆ ಬಿದ್ದ ದ್ರವದಿಂದಾಗಿ ದ್ವಿಚಕ್ರ ವಾಹನ ಸವಾರರು ಜಾರಿ ಬೀಳುತ್ತಿದ್ದಾರೆ. ಬೆಳಗ್ಗೆಯಿಂದ ಹಲವರು ಈ ರಸ್ತೆಯಲ್ಲಿ ಜಾರಿಬಿದ್ದು, ಸಣ್ಣಪುಟ್ಟ ಗಾಯಗಳಾಗಿವೆ. ವಾಹನಗಳಿಗೂ ಹಾನಿ ಉಂಟಾಗಿದೆ.

ಶಿವಮೊಗ್ಗ ನಗರದ ಕುವೆಂಪು ರಸ್ತೆಯಲ್ಲಿ ಘಟನೆ ಸಂಭವಿಸಿದೆ. ನಂಜಪ್ಪ ಆಸ್ಪತ್ರೆ ಮುಂಭಾಗದಲ್ಲಿ ಇರುವ ಬೃಹತ್ ಮರದಿಂದ ಜೆಲ್ ರೂಪದ ದ್ರವ ರಸ್ತೆ ಮೇಲೆ ಬಿದ್ದಿದೆ. ರಸ್ತೆಯಲ್ಲಿ ಜಾರುವಂತೆ ಮಾಡುತ್ತಿದೆ. ಕುವೆಂಪು ರಸ್ತೆ, ದುರ್ಗಿಗುಡಿ, ಅಚ್ಚುತರಾವ್ ಲೇಔಟ್‍ ಕಡೆಯಿಂದ ಬರುವ ವಾಹನಗಳು ಸೇರುವ ಜಾಗದಲ್ಲಿ ಈ ಮರ ಇದೆ.

ರಾತ್ರಿ ಬಿದ್ದ ಮಳೆಯೇ ಕಾರಣ

ಶಿವಮೊಗ್ಗದಲ್ಲಿ ರಾತ್ರಿ ಮಳೆಯಾಗಿದೆ. ಮಳೆಯಿಂದಾಗಿ ಮರದಿಂದ ಸೋರಿಕೆಯಾದ ಜೆಲ್ ರೂಪದ ದ್ರವ ರಸ್ತೆ ಮೇಲೆ ಬಿದ್ದಿದೆ. ಬೆಳಗ್ಗೆ ನೆಹರೂ ಸ್ಟೇಡಿಯಂ ಕೊಡೆಗೆ ಹೊರಟವರು, ಕೆಲಸ ನಿಮಿತ್ತ ತೆರಳುತ್ತಿದ್ದ ದ್ವಿಚಕ್ರ ವಾಹನ ಸವಾರರು ಅಲ್ಲಿ ಜಾರಿ ಬಿದ್ದಿದ್ದಾರೆ.

ಆಯಿಲ್ ಸೋರಿಕೆ ಅಂದುಕೊಂಡರು

ಆರಂಭದಲ್ಲಿ ಯಾವುದೋ ವಾಹನದಿಂದ ಆಯಿಲ್ ಸೋರಿಕೆ ಎಂದು ಭಾವಿಸಲಾಗಿತ್ತು. ಆದ್ದರಿಂದ ಸ್ಥಳೀಯರೇ ದ್ವಿಚಕ್ರ ವಾಹನ ಸವಾರರು ಬರುತ್ತಿದ್ದಂತೆ, ತಡೆದು, ನಿಧಾನಕ್ಕೆ ಚಲಿಸುವಂತೆ ಸೂಚಿಸುತ್ತಿದ್ದರು. ಸಮೀಪದಲ್ಲಿದ್ದ ಬ್ಯಾರಿಕೇಡ್‍ಗಳನ್ನು ಎಳೆದು ತಂದು ನಡು ರಸ್ತೆಯಲ್ಲಿ ಇರಿಸಿ ಎಚ್ಚರಿಸುತ್ತಿದ್ದರು.

ದೌಡಾಯಿಸಿದ ಪಾಲಿಕೆ ಸಿಬ್ಬಂದಿಗಳು

ವಿಚಾರ ತಿಳಿಯುತ್ತಿದ್ದಂತೆ ಮಹಾನಗರ ಪಾಲಿಕೆ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿದರು. ರಸ್ತೆಯಲ್ಲಿ ಸ್ವಚ್ಛತಾ ಕಾರ್ಯ ನಡೆಸಿದರು. ಇದರಿಂದ ದ್ವಿಚಕ್ರ ವಾಹನ ಸವಾರರ ಆತಂಕ ನಿವಾರಣೆಯಾದಂತೆ ಆಗಿದೆ. ಶಿವಮೊಗ್ಗದ ಪ್ರಮುಖ ರಸ್ತೆಗಳಲ್ಲಿ ಒಂದಾಗಿರುವ ಕುವೆಂಪು ರಸ್ತೆಯಲ್ಲಿ ಬೆಳಗ್ಗೆಯಿಂದ ನಿರಂತರ ವಾಹನ ದಟ್ಟಣೆ ಇರುತ್ತದೆ.

ಪ್ರತಿ ದಿನ ಹನಿ ಬೀಳುತ್ತಿತ್ತು

ಈ ಮರದಿಂದ ನಿರಂತರ ಹನಿ ಬೀಳುತ್ತಿತ್ತು. ಹತ್ತಾರು ವರ್ಷದಿಂದ ಈ ರೀತಿ ಹನಿ ಬೀಳುತ್ತಿದೆ. ವಾಹನ ಸವಾರರಿಗೆ ಮಳೆ ಶುರುವಾಯ್ತೋ, ಯಾರಾದರೂ ಉಗುಳಿದರೋ ಅನ್ನುವ ಸಂಶಯ ಮೂಡಿಸುತ್ತಿತ್ತು.

VIDEO REPORT

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 19, 2021

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

Leave a Comment