‘ಕಾಯ್ದೆಯಿಂದ ಪೌರತ್ವ ಹೋಗಲ್ಲ, ಮುಸ್ಲಿಮರು ಹೆದರಬೇಕಿಲ್ಲ, ಕಾಂಗ್ರೆಸ್, ಕಮ್ಯುನಿಸ್ಟರಿಂದಲೇ ಆಗ್ತಿದೆ ಗೊಂದಲ’

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 27 ಡಿಸೆಂಬರ್ 2019

ಪೌರತ್ವ ಕಾಯ್ದೆ ಕುರಿತು ಭಾರತೀಯ ಮುಸ್ಲಿಮರು ಹೆದರುವ ಅಗತ್ಯವಿಲ್ಲ. ಯಾಕೆಂದರೆ ಇದು ಪೌರತ್ವ ಕೊಡುವ ಕಾಯ್ದೆಯೇ ಹೊರತು, ಯಾರ ಪೌರತ್ವವನ್ನು ಕಸಿಯುವುದಿಲ್ಲ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ.

ಗಾಯತ್ರಿ ಮಾಂಗಲ್ಯ ಮಂದಿರದಲ್ಲಿ ಬಿಜೆಪಿ ವತಿಯಿಂದ ಆಯೋಜಿಸಿದ್ದ ಪೌರತ್ವ ತಿದ್ದುಪಡಿ ಕಾಯ್ದೆ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಬಿ.ವೈ.ರಾಘವೇಂದ್ರ, ಅಖಂಡ ಭಾರತದ ಭಾಗವಾಗಿರುವ ಪಾಕಿಸ್ತಾನ, ಅಪಘಾನಿಸ್ಥಾನ ಮತ್ತು ಬಾಂಗ್ಲಾದೇಶದ ಅಲ್ಪಸಂಖ್ಯಾತರಾಗಿರುವ ಆರು ಧರ್ಮಿಯರಿಗೆ ಪೌರತ್ವ ನೀಡಲಾಗುತ್ತದೆ. ಇದರಿಂದ ಭಾರತೀಯ ಮುಸ್ಲಿಮರು ಹೆದರುವ ಅಗತ್ಯವಿಲ್ಲ ಎಂದರು.

ಭಾರತದಲ್ಲಿ ಅಲ್ಪಸಂಖ್ಯಾತರ ಸಂಖ್ಯೆ ಎಷ್ಟಿದೆ ಗೊತ್ತಾ?

ಸ್ವಾತಂತ್ರ್ಯ ನಂತರ ಪಾಕಿಸ್ತಾನದಲ್ಲಿ ದೊಡ್ಡ ಸಂಖ್ಯೆಯಲ್ಲಿದ್ದ ಅಲ್ಪಸಂಖ್ಯಾತರ ಸಂಖ್ಯೆ ಶೇ.3ಕ್ಕೆ ಇಳಿದಿದೆ. ಆದರೆ ಭಾರತದಲ್ಲಿ ಅಲ್ಪಸಂಖ್ಯಾತರ ಸಂಖ್ಯೆ ದೊಡ್ಡ ಮಟ್ಟದಲ್ಲಿ ಏರಿಕೆಯಾಗಿದೆ. ಯಾಕೆಂದರೆ ಭಾರತದಲ್ಲಿ ಅಲ್ಪಸಂಖ್ಯಾತರಿಗೆ ರಕ್ಷಣೆ ಇದೆ. ಇಲ್ಲಿನ ಅಲ್ಪಸಂಖ್ಯಾತರು ರಾಷ್ಟ್ರಪತಿಯಾಗಿದ್ದಾರೆ. ರಾಜ್ಯಪಾಲರು, ಐಎಎಸ್, ಐಪಿಎಸ್ ಅಧಿಕಾರಿಗಳಾಗಿದ್ದಾರೆ. ಸುಪ್ರೀಂ ಕೋರ್ಟ್, ಹೈಕೋರ್ಟ್ ಜಡ್ಜ್’ಗಳಾಗಿದ್ದಾರೆ ಎಂದರು.

80307534 1011886895839397 6106841404921610240 o.jpg? nc cat=109& nc eui2=AeE5pmWFCse33ke3lEQNG4DOlAcc49cd S7eyvpQEVMcWbuTWUM2iz2v1xm4YnjQGdTU5Hg2V6sZ Vln0GAHg9Nj5kdMQptuTNAXMFLOzAFdRg& nc ohc=hTKqesNyxCcAQny0hleyy1P3W8lMctkT0L94SzZoXXutPocr9 DkxfXA& nc ht=scontent.fblr11 1

ಶಾಂತಿ ಭಂಗ ಮಾಡುತ್ತಿವೆ ಕಾಂಗ್ರೆಸ್, ಕಮ್ಯುನಿಸ್ಟ್

ಪೌರತ್ವ ಕಾಯ್ದೆಯ ಕುರಿತು ಕಾಂಗ್ರೆಸ್, ಕಮ್ಯುನಿಸ್ಟ್ ಪಕ್ಷಗಳ ನಾಯಕರು ಗೊಂದಲ ಸೃಷ್ಟಿಸಿ, ವಿದ್ಯಾರ್ಥಿಗಳನ್ನು ಪ್ರಚೋದಿಸುತ್ತಿದ್ದಾರೆ. ಗಲಭೆ ಸೃಷ್ಟಿಸಿ ಪ್ರಧಾನಿ ಮೋದಿ ಮತ್ತು ಬಿಜೆಪಿ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಪ್ರಯತ್ನಿಸುತ್ತಿದ್ದಾರೆ ಎಂದು ಸಂಸದ ರಾಘವೇಂದ್ರ ಆರೋಪಿಸಿದರು.

80345529 1011886849172735 8756446458271498240 o.jpg? nc cat=110& nc eui2=AeEGBO1ZfZIdNAUR3MR2ny8uST3Vd7XNLtRnTQW K4ShW5OLD1hnBI41hkXw6CDW66p0HJzSOkHw6VUuc0ooD5V4STt6iLt rRZc50SXSFMGNA& nc ohc=1dI2SPqymVoAQn0rKsyhZY9K kPqhKZL8bzTrsipO3ePtsi65TNEcgDmg& nc ht=scontent.fblr11 1

ಬಿಜೆಪಿ ಜಿಲ್ಲಾಧ್ಯಕ್ಷ ರುದ್ರೇಗೌಡ, ಮಾಜಿ ಸಭಾಪತಿ ಡಿ.ಹೆಚ್.ಶಂಕರಮೂರ್ತಿ, ಪ್ರಮುಖರಾದ ಎಂ.ಬಿ.ಭಾನುಪ್ರಕಾಶ್, ಗಿರೀಶ್ ಪಟೇಲ್ ಸೇರಿದಂತೆ ಹಲವರು ವೇದಿಕೆಯಲ್ಲಿದ್ದರು.

ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಉತ್ತರ ಕನ್ನಡ ಜಿಲ್ಲೆಯ ಪ್ರಮುಖರು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200

ಸುದ್ದಿಗಾಗಿ ಕರೆ ಮಾಡಿ – 9964634494

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment