ಶಿವಮೊಗ್ಗದಲ್ಲಿ ಬಿಜೆಪಿಯಿಂದ ಒಂದು ಗಂಟೆಗು ಹೆಚ್ಚು ಹೊತ್ತು ರಸ್ತೆ ತಡೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ರಸ್ತೆ ಗುಂಡಿಗಳನ್ನು (Pot Holes) ಮುಚ್ಚುವಲ್ಲಿ ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಜಿಲ್ಲಾ ಬಿಜೆಪಿ ವತಿಯಿಂದ ಇವತ್ತು ರಸ್ತೆ ತಡೆ ನಡೆಸಲಾಯಿತು. ಶಿವಮೊಗ್ಗ ಬಸ್‌ ನಿಲ್ದಾಣದ ಮುಂಭಾಗದ ಅಶೋಕ ಸರ್ಕಲ್‌ನಲ್ಲಿ ಮಾನವ ಸರಪಳಿ ನಿರ್ಮಿಸಿ ಸುಮಾರು ಒಂದು ಗಂಟೆ ಪ್ರತಿಭಟನೆ ನಡೆಸಿದರು.

ರಾಜ್ಯಾದ್ಯಂತ ರಸ್ತೆಗಳಲ್ಲಿ ಗುಂಡಿಗಳಾಗಿವೆ. ಅವುಗಳನ್ನ ಮುಚ್ಚುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ ರಾಜ್ಯ ಸರ್ಕಾರದ ವಿರುದ್ಧ ಭಿತ್ತಿ ಪತ್ರಗಳನ್ನು ಪ್ರದರ್ಶಿಸಿ ಘೋಷಣೆ ಕೂಗಿದರು.

ಎಂಎಲ್‌ಎ ಹೇಳಿದ್ದೇನು?

ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಶಾಸಕ ಎಸ್.ಎನ್.ಚನ್ನಬಸಪ್ಪ, ರಾಜ್ಯದ ಕಾಂಗ್ರೆಸ್‌ ಸರ್ಕಾರ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿಲ್ಲ. ಇದರ ಹೊರತು ಹಿಂದೂ ವಿರೋಧಿ ನೀತಿಗಳನ್ನು ಮಾತ್ರ ಮಾಡುತ್ತಿದೆ. ಡಿಜೆ ಬಳಕೆ ಮಾಡಿದ್ದಕ್ಕೆ 57 ಗಣಪತಿ ಸಮಿತಿಗಳ ವಿರುದ್ಧ ಶಿವಮೊಗ್ಗದಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ. ತಲ್ವಾರ್‌ಗಳನ್ನು ಹಿಡಿದು ಓಡಾಡಿದವರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

BJP-Protest against Pot Holes-at-Ashoka-Circle-In-Shimoga
ಪ್ರತಿಭಟನೆಯಲ್ಲಿ ಶಾಸಕ ಎಸ್.ಎನ್.ಚನ್ನಬಸಪ್ಪ ಭಾಷಣ

ಇದನ್ನೂ ಓದಿ » ತೀರ್ಥಹಳ್ಳಿಯಲ್ಲಿ ಮುಂದುವರೆದ ಕಾಡಾನೆಗಳ ಹಾವಳಿ, ಎಲ್ಲೆಲ್ಲಿ ಸಂಚರಿಸಿದವು?

ಬಹು ಹೊತ್ತು ರಸ್ತೆ ತಡೆ, ಆಕ್ರೋಶ

ಅಶೋಕ ವೃತ್ತದಲ್ಲಿ ಸುಮಾರು ಒಂದು ಗಂಟೆ ರಸ್ತೆ ತಡೆ ಮಾಡಿದ್ದರಿಂದ ಸಂಚಾರ ದಟ್ಟಣೆ ಉಂಟಾಗಿತ್ತು. ವಾಹನಗಳು ಬಹು ದೂರದವರೆಗೆ ನಿಂತಿದ್ದವು. ಸಂಚಾರ ಠಾಣೆ ಪೊಲೀಸರು ಪರ್ಯಾಯ ಮಾರ್ಗದಲ್ಲಿ ವಾಹನಗಳನ್ನು ಕಳುಹಿಸಿದ್ದರಿಂದ ಸಂಚಾರ ದಟ್ಟಣೆ ಸ್ವಲ್ಪ ಕಡಿಮೆಯಾಗಿತ್ತು.

ಇನ್ನು, ಕೆಲವು ವಾಹನ ಸವಾರರು ಬಿಜೆಪಿ ಕಾರ್ಯಕರ್ತರ ಜೊತೆಗೆ ತಗಾಗೆ ತೆಗೆದಿದ್ದರು. ಶಾಸಕ ಚನ್ನಬಸಪ್ಪ ಭಾಷಣದ ಮಧ್ಯೆ, ಕೆಲವು ವಾಹನ ಸವಾರರು ಬಿಡುವಂತೆ ಕಾರ್ಯಕರ್ತರಿಗೆ ತಿಳಿಸುತ್ತಿದ್ದರು. ಅಶೋಕ ವೃತ್ತದಲ್ಲಿ ದೀರ್ಘಾವಧಿ ರಸ್ತೆ ತಡೆಗೆ ಅವಕಾಶ ನೀಡಿದ ಪೊಲೀಸರ ವಿರುದ್ಧವು ಜನರು ಆಕ್ರೋಶ ವ್ಯಕ್ತಪಡಿಸಿದರು.

BJP-Protest against Pot Hole-at-Ashoka-Circle-In-Shimoga
ರಸ್ತೆ ತಡೆ ವೇಳೆ ಬೈಕ್‌ ಸವಾರನ ಪರದಾಟ
BJP-Protest against Pot Holes-at-Ashoka-Circle-In-Shimoga
ಉಪ ಮುಖ್ಯಮಂತ್ರಿ ವಿರುದ್ಧ ಭಿತ್ತ ಪತ್ರ ಹಿಡಿದ ಬಿಜೆಪಿ ಕಾರ್ಯಕರ್ತ
Road Block Protest by Shimoga BJP Workers
ಬಿ.ಹೆಚ್‌.ರಸ್ತೆಗೆ ಅಡ್ಡಲಾಗಿ ಕುಳಿತ ಬಿಜೆಪಿ ಕಾರ್ಯಕರ್ತರು. ಹಿಂಬದಿಯಲ್ಲಿ ನಿಂತಿದ್ದ ವಾಹನಗಳು.
Road Block Protest by Shimoga BJP Workers
ರಸ್ತೆ ತಡೆಯಿಂದಾಗಿ ಸಾಗರ ರಸ್ತೆಯಲ್ಲಿ ನಿಂತಿದ್ದ ವಾಹನಗಳು.
Road Block Protest by Shimoga BJP Workers
ಎಡಚಿತ್ರ: ಬಿಜೆಪಿ ಕಾರ್ಯಕರ್ತರ ಜೊತೆಗೆ ವಾಹನ ಸವಾರರ ವಾಗ್ವಾದ. ಬಲಚಿತ್ರ: ವಾಹನದಿಂದ ಇಳಿದು ಬಸ್‌ ನಿಲ್ದಾಣಕ್ಕೆ ನಡೆದು ಸಾಗಿದ ಪ್ರಯಾಣಿಕರು.
Road Block Protest by Shimoga BJP Workers
ಪ್ರತಿಭಟನೆ ವೇಳೆ ಹಾದು ಹೋದ ಆಂಬುಲೆನ್ಸ್‌ಗಳಿಗೆ ದಾರಿ ಮಾಡಿಕೊಟ್ಟ ಬಿಜೆಪಿ ಕಾರ್ಯಕರ್ತರು.

BJP Holds protest against Pot Holes 

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 24, 2025

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment