SHIMOGA NEWS, 24 SEPTEMBER 2024 : ಮೂಡ ಹಗರಣ ಸಂಬಂಧ ಮುಖ್ಯಮಂತ್ರಿ ವಿರುದ್ಧ ತನಿಖೆಗೆ ಹೈಕೋರ್ಟ್ ಅಸ್ತು ಅಂದಿದೆ. ಈ ಹಿನ್ನೆಲೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ಕೂಡಲೆ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ (Prostest) ನಡೆಸಲಾಯಿತು.
ಗೋಪಿ ಸರ್ಕಲ್ನ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು, ರಾಜ್ಯ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಪಕ್ಷದ ವಿರುದ್ಧ ಘೋಷಣೆ ಕೂಗಿದರು.
» ಸರ್ಕಲ್ ಮಧ್ಯೆ ಕುಳಿತ ಎಂಪಿ
ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಸಂಸದ ಬಿ.ವೈ.ರಾಘವೇಂದ್ರ, ಗೋಪಿ ಸರ್ಕಲ್ನಲ್ಲಿ ಕಾರ್ಯಕರ್ತರೊಂದಿಗೆ ರಸ್ತೆ ಮೇಲೆ ಕುಳಿತು ಘೋಷಣೆ ಕೂಗಿದರು. ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಸೇರಿ ಹಲವರು ಅವರೊಂದಿಗೆ ರಸ್ತೆ ಮೇಲೆ ಕುಳಿತು ಪ್ರತಿಭಟಿಸಿದರು.
» ನಮ್ಮ ಹೋರಾಟಕ್ಕೆ ನ್ಯಾಯ ಸಿಕ್ಕಿದೆ
ಇದೇ ವೇಳೆ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಕಾಂಗ್ರೆಸ್ನ ಡಿಎನ್ಎನಲ್ಲಿಯೆ ಭ್ರಷ್ಟಾಚಾರವಿದೆ. ಕೇಂದ್ರದಲ್ಲಿ 2ಜಿ ಹಗರಣ, ರಫೇಲ್, ಬೋಫೋರ್ಸ್ ಸೇರಿ ಹಗರಣಗಳ ಸರಮಾಲೆಯೇ ಇದೆ. ಹಾಗಾಗಿಯೇ ಅವರನ್ನು ಕಾಂಗ್ರೆಸ್ ಪಕ್ಷವನ್ನು ಜನರು ವಿರೋಧ ಪಕ್ಷದ ಸ್ಥಾನದಲ್ಲಿ ಕೂರಿಸಿದೆ. ಮೂಡ ಹಗರಣ ಸಂಬಂಧ ಬಿಜೆಪಿ ಹೋರಾಟ ಮಾಡಿದರೂ ಮೊಂಡುತನ ಪ್ರದರ್ಶಿಸಿದ್ದರು. ರಾಜ್ಯಪಾಲರ ವಿರುದ್ಧವೆ ಮಾತನಾಡಿದರು. ಈ ಹಿಂದೆ ಸಿದ್ದರಾಮಯ್ಯ ಅವರ ವಿರುದ್ಧ ಹೂಬ್ಲೆಟ್ ವಾಚ್ ಹಗರಣ ಕೇಳಿ ಬಂದಿತ್ತು. ಅಗ ನಾವೇ ವಾಚ್ ಬಿಚ್ಚಿಸಿದ್ದೆವು. ಎಲ್ಲರಿಗು ಒಂದೇ ಕಾನೂನು. ನಮ್ಮ ಹೋರಾಟಕ್ಕೆ ಈಗ ನ್ಯಾಯ ಸಿಕ್ಕಿದೆ ಎಂದರು.
ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್.ಅರುಣ್, ಧನಂಜಯ ಸರ್ಜಿ, ಮೋಹನ್ ರೆಡ್ಡಿ, ದೀನದಯಾಳು, ನಾಗರಾಜ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಇದನ್ನೂ ಓದಿ » ಶಿವಮೊಗ್ಗದಿಂದ ದೆಹಲಿಗೆ ವಿಮಾನ, ಮುಂಬೈಗೆ ಯಾಕೆ ಸಿಕ್ತಿಲ್ಲ ಕ್ಲಿಯರೆನ್ಸ್? ಸಂಸದರು ಹೇಳಿದ್ದೇನು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200