ಗೋಪಿ ಸರ್ಕಲ್‌ನಲ್ಲಿ ರಸ್ತೆ ಮೇಲೆ ಕುಳಿತು ಸಂಸದ ರಾಘವೇಂದ್ರ ಆಕ್ರೋಶ, ಸಿಎಂ ರಾಜೀನಾಮೆಗೆ ಪಟ್ಟು

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

SHIMOGA NEWS, 24 SEPTEMBER 2024 : ಮೂಡ ಹಗರಣ ಸಂಬಂಧ ಮುಖ್ಯಮಂತ್ರಿ ವಿರುದ್ಧ ತನಿಖೆಗೆ ಹೈಕೋರ್ಟ್‌ ಅಸ್ತು ಅಂದಿದೆ. ಈ ಹಿನ್ನೆಲೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ಕೂಡಲೆ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ (Prostest) ನಡೆಸಲಾಯಿತು.

ಗೋಪಿ ಸರ್ಕಲ್‌ನ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು, ರಾಜ್ಯ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್‌ ಪಕ್ಷದ ವಿರುದ್ಧ ಘೋಷಣೆ ಕೂಗಿದರು.

» ಸರ್ಕಲ್‌ ಮಧ್ಯೆ ಕುಳಿತ ಎಂಪಿ

by-raghavendra-protest-in-Shimoga-against-cm-siddaramaiah

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಸಂಸದ ಬಿ.ವೈ.ರಾಘವೇಂದ್ರ, ಗೋಪಿ ಸರ್ಕಲ್‌ನಲ್ಲಿ ಕಾರ್ಯಕರ್ತರೊಂದಿಗೆ ರಸ್ತೆ ಮೇಲೆ ಕುಳಿತು ಘೋಷಣೆ ಕೂಗಿದರು. ವಿಧಾನ ಪರಿಷತ್‌ ಸದಸ್ಯ ಡಾ. ಧನಂಜಯ ಸರ್ಜಿ ಸೇರಿ ಹಲವರು ಅವರೊಂದಿಗೆ ರಸ್ತೆ ಮೇಲೆ ಕುಳಿತು ಪ್ರತಿಭಟಿಸಿದರು.

» ನಮ್ಮ ಹೋರಾಟಕ್ಕೆ ನ್ಯಾಯ ಸಿಕ್ಕಿದೆ

BJP protest in Shimoga gopi circle

ಇದೇ ವೇಳೆ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಕಾಂಗ್ರೆಸ್‌ನ ಡಿಎನ್‌ಎನಲ್ಲಿಯೆ ಭ್ರಷ್ಟಾಚಾರವಿದೆ. ಕೇಂದ್ರದಲ್ಲಿ 2ಜಿ ಹಗರಣ, ರಫೇಲ್‌, ಬೋಫೋರ್ಸ್‌ ಸೇರಿ ಹಗರಣಗಳ ಸರಮಾಲೆಯೇ ಇದೆ. ಹಾಗಾಗಿಯೇ ಅವರನ್ನು ಕಾಂಗ್ರೆಸ್‌ ಪಕ್ಷವನ್ನು ಜನರು ವಿರೋಧ ಪಕ್ಷದ ಸ್ಥಾನದಲ್ಲಿ ಕೂರಿಸಿದೆ. ಮೂಡ ಹಗರಣ ಸಂಬಂಧ ಬಿಜೆಪಿ ಹೋರಾಟ ಮಾಡಿದರೂ ಮೊಂಡುತನ ಪ್ರದರ್ಶಿಸಿದ್ದರು. ರಾಜ್ಯಪಾಲರ ವಿರುದ್ಧವೆ ಮಾತನಾಡಿದರು. ಈ ಹಿಂದೆ ಸಿದ್ದರಾಮಯ್ಯ ಅವರ ವಿರುದ್ಧ ಹೂಬ್ಲೆಟ್‌ ವಾಚ್‌ ಹಗರಣ ಕೇಳಿ ಬಂದಿತ್ತು. ಅಗ ನಾವೇ ವಾಚ್‌ ಬಿಚ್ಚಿಸಿದ್ದೆವು. ಎಲ್ಲರಿಗು ಒಂದೇ ಕಾನೂನು. ನಮ್ಮ ಹೋರಾಟಕ್ಕೆ ಈಗ ನ್ಯಾಯ ಸಿಕ್ಕಿದೆ ಎಂದರು.

ವಿಧಾನ ಪರಿಷತ್‌ ಸದಸ್ಯರಾದ ಡಿ.ಎಸ್‌.ಅರುಣ್‌, ಧನಂಜಯ ಸರ್ಜಿ, ಮೋಹನ್‌ ರೆಡ್ಡಿ, ದೀನದಯಾಳು, ನಾಗರಾಜ್‌ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ » ಶಿವಮೊಗ್ಗದಿಂದ ದೆಹಲಿಗೆ ವಿಮಾನ, ಮುಂಬೈಗೆ ಯಾಕೆ ಸಿಕ್ತಿಲ್ಲ ಕ್ಲಿಯರೆನ್ಸ್?‌ ಸಂಸದರು ಹೇಳಿದ್ದೇನು?

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment