Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಸಿದ್ದರಾಮಯ್ಯ ಪಾದ ಪೂಜೆಗೆ ರೆಡಿ, ಶಿವಮೊಗ್ಗ MLA ಸವಾಲು, ಇಲ್ಲಿದೆ ಸುದ್ದಿಗೋಷ್ಠಿಯ ಪ್ರಮುಖ 5 ಪಾಯಿಂಟ್‌

ಸಿದ್ದರಾಮಯ್ಯ ಪಾದ ಪೂಜೆಗೆ ರೆಡಿ, ಶಿವಮೊಗ್ಗ MLA ಸವಾಲು, ಇಲ್ಲಿದೆ ಸುದ್ದಿಗೋಷ್ಠಿಯ ಪ್ರಮುಖ 5 ಪಾಯಿಂಟ್‌

20/08/2024 11:24 AM
ನಿತಿನ್‌ ಕೈದೊಟ್ಲು

SHIMOGA, 20 AUGUST 2024 : ಸಿದ್ದರಾಮಯ್ಯ ಅವರು ಈ ರಾಜ್ಯದ ಕಳಂಕಿತ ಮುಖ್ಯಮಂತ್ರಿ (Chief Minister). ಅವರು ಕಳಂಕಿತರಲ್ಲ ಎಂಬ ಆದೇಶ ಬಂದರೆ ಪಾದಪೂಜೆ ಮಾಡುತ್ತೇವೆ ಎಂದು ಶಿವಮೊಗ್ಗ ಶಾಸಕ ಎಸ್‌.ಎನ್.ಚನ್ನಬಸಪ್ಪ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಶಾಸಕರು ಏನೆಲ್ಲ ಹೇಳಿದರು.

» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

ಇಲ್ಲಿದೆ ಐದು ಪ್ರಮುಖಾಂಶ

mla channabasappa

ಕಾಂಗ್ರೆಸ್‌ ನಾಯಕತ್ವ ರಾಜ್ಯಪಾಲರನ್ನು ಗುರಿಯಾಗಿಸಿಕೊಂಡಿದೆ. ರಾಜ್ಯಪಾಲರಿಗೆ ಅಪಮಾನ ಮಾಡುತ್ತಿದೆ. ರಾಜ್ಯಪಾಲರ ಕುರಿತು ಸಚಿವ ಕೃಷ್ಣ ಬೈರೇಗೌಡ ಅವರ ಹೇಳಿಕೆಯಿಂದ ಅವರ ಮೇಲಿದ್ದ ಗೌರವ ತಗ್ಗಿದೆ. ಕಾಂಗ್ರೆಸ್‌ ನಾಯಕ ಐವಾನ್‌ ಡಿಸೋಜ ಬಾಂಗ್ಲಾದೇಶದಲ್ಲಿ ಆದ ಸ್ಥಿತಿ ಇಲ್ಲಿ ಆಗುತ್ತದೆ ಎಂಬ ಹೇಳಿಕೆ ನೀಡಿದ್ದು ಖಂಡನಾರ್ಹ. ಕೂಡಲೆ ಅವರನ್ನು ಬಂಧಿಸಬೇಕು. ಹೋರಾಟಕ್ಕೆ ಅಭ್ಯಂತರವಿಲ್ಲ. ಆದರೆ ರಾಜ್ಯಪಾಲರ ಹುದ್ದೆಗೆ ಅಗೌರವ ತರುವುದು ಸರಿಯಲ್ಲ.

ಇದನ್ನೂ ಓದಿ ⇒ ಮಘ ಮಳೆಗೆ ಕೋಡಿ ಬಿತ್ತು ಅಬ್ಬಲಗೆರೆ ಕೆರೆ, ಬೊಮ್ಮನಕಟ್ಟೆಯಲ್ಲಿ ಹಾನಿ, ಆನಂದಪುರದಲ್ಲಿ ಕೊಚ್ಚಿ ಹೋದ ಸಸಿ

mla channabasappa

ತಪ್ಪು ಮಾಡಿಲ್ಲ ಅಂದರೆ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್‌ನವರಿಗೆ ಭಯವೇಕೆ. ತನಿಖೆ ಎದುರಿಸಲು ಸಿದ್ದರಾಗಿ. ವಿಧಾನಸಭೆಯಲ್ಲಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಪಲಾಯನ ಮಾಡಿದ್ದರು. ಹಾಗಾಗಿ ಅವರು ಕಳಂಕಿತ ಸಿಎಂ ಎಂಬ ಭಾವನೆ ನಮಗೆ ಮೂಡುತ್ತಿದೆ. ಆದ್ದರಿಂದ ಅವರು ತಕ್ಷಣ ರಾಜೀನಾಮೆ ನೀಡಬೇಕು. ರಾಜ್ಯಪಾಲರ ನಿರ್ಧಾರ ಸರಿ ಇದೆ. ನಿಮಗೆ ಪ್ರತಿಜ್ಞಾ ವಿಧಿ ಬೋಧಿಸಲು ರಾಜ್ಯಪಾಲರಿಗೆ ಅವಕಾಶವಿದೆ. ಹಾಗೆಯೇ ಕಿತ್ತೊಯಲು ಕೂಡ ಅಧಿಕಾರವಿದೆ. ನೀವು ಕಳಂಕಿತರಲ್ಲ ಎಂದು ಸಾಬೀತಾದರೆ ಪಾದ ಪೂಜೆ ಮಾಡುತ್ತೇವೆ.

ಇದನ್ನೂ ಓದಿ ⇒ ರೀಲ್ಸ್‌ ಮಾಡಿದರೆ ಅಂಗಡಿಗೆ ಹೆಚ್ಚಾಗ್ತಾರೆ ಗ್ರಾಹಕರು, ಇಲ್ಲಿದೆ ಶಿವಮೊಗ್ಗ ಜಿಲ್ಲೆಯ ಬೆಸ್ಟ್‌ ಉದಾಹರಣೆಗಳು

mla channabasappa

ಸಿದ್ದರಾಮಯ್ಯ ತಮ್ಮನ್ನು ಹಿಂದುಳಿದ ವರ್ಗದ ಚಾಂಪಿಯನ್‌ ಎಂದು ಬಿಂಬಿಸಿಕೊಳ್ಳುತ್ತಾರೆ. ಆದರೆ ಹಿಂದುಳಿದ ವರ್ಗದವರಿಗೆ ವಂಚಿಸುತ್ತಿದ್ದಾರೆ. ಬಿಜೆಪಿ ಸರ್ಕಾರ 1193 ಸಮುದಾಯ ಭವನ ನಿರ್ಮಾಣಕ್ಕೆ ಅನುಮತಿ ನೀಡಿತ್ತು. ಸಿದ್ದರಾಮಯ್ಯ ಸರ್ಕಾರ ಇದನ್ನು ರದ್ದುಗೊಳಿಸಿದೆ. ಅಲ್ಲದೆ ವಿವಿಧ ಸಮುದಾಯಗಳಿಗೆ ನೀಡಿದ್ದ ಸುಮಾರು 300 ಕೋಟಿ ರೂ. ಹಣ ಹಿಂಪಡೆಯಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲೇ 99 ಸಮುದಾಯ ಭವನಗಳಿಗೆ ನೀಡಿದ್ದ ಹಣ ಹಿಂಪಡೆಯಲಾಗಿದೆ. ಈ ಪೈಕಿ ಶಿವಮೊಗ್ಗ ನಗರದ 31 ಸಮುದಾಯ ಭವನಗಳು ರದ್ದಾಗಿದೆ. ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್‌ ಕೊಡುತ್ತಿಲ್ಲ. ವಿವಿಧ ಯೋಜನೆಗಳ ಫಲಾನುಭವಿಗಳ ಆಯ್ಕೆಗೆ ಮಿತಿ ವಿಧಿಸಲಾಗುತ್ತಿದೆ. ಇದು ಅನಾಗರಿಕ ವರ್ತನೆ.

ಇದನ್ನೂ ಓದಿ ⇒ ಶಿವಮೊಗ್ಗದ ಶಿವಪ್ಪನಾಯಕ ಪ್ರತಿಮೆ ಮುಂದೆ ರಾತ್ರೋರಾತ್ರಿ ಪ್ರತ್ಯಕ್ಷವಾಗುತ್ತೆ ಫಲಕ, ಇದನ್ನು ಹಾಕೋದ್ಯಾರು ಗೊತ್ತಾ?

mla channabasappa

ವಾಲ್ಮೀಕಿ ನಿಗಮದ 187 ಕೋಟಿ ರೂ. ಹಣವನ್ನು ದುರುಪಯೋಗವಾಗಿದೆ. ಸರ್ಕಾರದ ಹಣ ಮತ್ತೊಂದು ರಾಜ್ಯದ ಚುನಾವಣೆಗೆ ಬಳಕೆಯಾಗಿದೆ. ಸಿದ್ದರಾಮಯ್ಯ ಅವರ ಮೂಗಿನಡಿಯೇ ಇವೆಲ್ಲ ಆಗಿದೆ. ಈಗ ನ್ಯಾಯಾಲಯ ಆದೇಶ ಪ್ರಕಟಿಸುವ ಮುನ್ನ ಸಿದ್ದರಾಮಯ್ಯ ಅವರು ತೀರ್ಮಾನಕ್ಕೆ ಬರುವುದು ಒಳ್ಳೆಯದು. ಅವರ ಮಾನಸಿಕತೆ ಅರ್ಥ ಮಾಡಿಕೊಂಡೆ ನ್ಯಾಯಾಧೀಶರು ಹತ್ತು ದಿನದ ಕಾಲವಕಾಶ ನೀಡಿರಬಹುದು ಎಂಬುದು ನನ್ನ ಭಾವನೆ. ಆದ್ದರಿಂದ ಸಿದ್ದರಾಮಯ್ಯ ಕೂಡಲೆ ರಾಜನಾಮೆ ನೀಡಲಿ.

ಇದನ್ನೂ ಓದಿ ⇒ ಶಿವಮೊಗ್ಗ ಸಿಟಿಯ 15 ಕಿ.ಮೀ ವ್ಯಾಪ್ತಿಯಲ್ಲಿವೆ 10 ಪ್ರಮುಖ ಪಿಕ್ನಿಕ್‌ ತಾಣಗಳು, ಇಲ್ಲಿದೆ ಲಿಸ್ಟ್‌

mla channabasappa

ಎಲ್ಲ ರಾಷ್ಟ್ರೀಯ ಹಬ್ಬಗಳನ್ನು ನಾವು ನೆಹರು ಕ್ರೀಡಾಂಗಣದಲ್ಲಿ ಮಾಡುತ್ತಿದ್ದೆವು. ಆಗ ಸುಮಾರು 25 ಸಾವಿರ ಮಕ್ಕಳು, ಪೋಷಕರು ಭಾಗವಹಿಸುತ್ತಿದ್ದರು. ನೆಹರು ಸ್ಟೇಡಿಯಂ ಅಭಿವೃದ್ಧಿ ಸೇರಿ ಅನೇಕ ಕಾರಣಗಳಿಂದ ರಾಷ್ಟ್ರೀಯ ಹಬ್ಬಗಳು ಇಲ್ಲಿಂದ ಸ್ಥಳಾಂತರವಾಯಿತು. ಆಗ ಕೆಲವೇ ಸಾವಿರ ಜನರು ಭಾಗವಹಿಸುತ್ತಿದ್ದಾರೆ. ಮೊನ್ನೆ ಸ್ವಾತಂತ್ರ್ಯೋತ್ಸವ ಸಂದರ್ಭ ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಮಾತನಾಡಿದಾಗ ಪೂರಕವಾಗಿ ಸ್ಪಂದಿಸಿದರು. ಫ್ರೀಡಂ ಪಾರ್ಕ್‌ನಲ್ಲಾದರು ರಾಷ್ಟ್ರೀಯ ಹಬ್ಬಗಳನ್ನ ಮಾಡಿದರೆ ಹೆಚ್ಚು ಜನರು ಭಾಗವಹಿಸಬಹುದು ಎಂಬುದು ನಮ್ಮ ಅಭಿಪ್ರಾಯ. ಇನ್ನಷ್ಟೆ ನಿರ್ಧಾರವಾಗಬೇಕಿದೆ.

ಇದನ್ನೂ ಓದಿ ⇒ ಶಿವಮೊಗ್ಗದಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ, ನೇಣು ಬಿಗಿದು ಆತ್ಮಹತ್ಯೆಯ ಸವಾಲೊಡ್ಡಿದ ಮುಖಂಡ

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಜಗದೀಶ್‌, ಬಿಜೆಪಿ ನಗರ ಅಧ್ಯಕ್ಷ ಮೋಹನ್‌ ರೆಡ್ಡಿ, ಪ್ರಧಾನ ಕಾರ್ಯದರ್ಶಿ ಮಂಜುನಾಥ್‌ ನವುಲೆ, ಎನ್‌.ಜೆ.ನಾಗರಾಜ್‌ ಇದ್ದರು.

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article abbalagere-lake-and-basavanaganguru-school. ಮಘ ಮಳೆಗೆ ಕೋಡಿ ಬಿತ್ತು ಅಬ್ಬಲಗೆರೆ ಕೆರೆ, ಬೊಮ್ಮನಕಟ್ಟೆಯಲ್ಲಿ ಹಾನಿ, ಆನಂದಪುರದಲ್ಲಿ ಕೊಚ್ಚಿ ಹೋದ ಸಸಿ
Next Article Police-Van-Jeep-at-Shimoga-Nehru-Road ವೇಶ್ಯಾವಾಟಿಕೆ ಆರೋಪ, ಶಿವಮೊಗ್ಗದಲ್ಲಿ ಸ್ಪಾ ಮೇಲೆ ಪೊಲೀಸ್‌ ದಾಳಿ

ಇದನ್ನೂ ಓದಿ

Police-Van-Jeep-at-Shimoga-Nehru-Road
CRIME DIARYSHIVAMOGGA CITY

ಶಿವಮೊಗ್ಗದ ವ್ಯಕ್ತಿಗೆ ಬೆಂಗಳೂರಿನ ಫೈನಾನ್ಸ್‌ ಸಂಸ್ಥೆಯಿಂದ ಬಂತು ಫೋನ್‌, ಆಮೇಲೆ ಕಾದಿತ್ತು ಬಿಗ್‌ ಶಾಕ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/07/2025
Shimoga-Central-Jail-Prison
CRIME DIARYSHIVAMOGGA CITY

ಶಿವಮೊಗ್ಗ ಜೈಲಿನ ಖೈದಿಯ ಹೊಟ್ಟೆಯೊಳಗೆ ಮೊಬೈಲ್‌ ಫೋನ್‌ ಪತ್ತೆ..!

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/07/2025
Pawan-Kumar-Bhat-padayathre-to-mantralaya.
SHIVAMOGGA CITY

ಶಿವಮೊಗ್ಗದಿಂದ ಮಂತ್ರಾಲಯಕ್ಕೆ ಬರಿಗಾಲಲ್ಲಿ ನಡಿಗೆ ಆರಂಭಿಸಿದ ಅರ್ಚಕ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
11/07/2025
power cut mescom ELECTRICITY
SHIVAMOGGA CITY

ಶಿವಮೊಗ್ಗ ತಾಲೂಕಿನ ವಿವಿಧೆಡೆ ನಾಳೆ ಇಡೀ ದಿನ ಕರೆಂಟ್‌ ಇರಲ್ಲ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
11/07/2025
Tipper-collides-with-police-chowki-at-Amir-Ahmed-Circle
SHIVAMOGGA CITY

ಶಿವಮೊಗ್ಗದಲ್ಲಿ ಲಾರಿ ಡಿಕ್ಕಿಯಾಗಿ ಪೊಲೀಸ್‌ ಚೌಕಿ ನಜ್ಜುಗುಜ್ಜು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
11/07/2025
Murder-at-Bommanakatte-E-Block-in-Shimoga.
CRIME DIARYSHIVAMOGGA CITY

BREAKING NEWS – ಶಿವಮೊಗ್ಗದಲ್ಲಿ ಯುವಕನ ಕೊಲೆ, ಸ್ಥಳಕ್ಕೆ ಪೊಲೀಸರು ದೌಡು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
11/07/2025
Previous Next

ಶಿವಮೊಗ್ಗ ಲೈವ್ ಗ್ರೂಪ್ ಸೇರಲು ಕ್ಲಿಕ್ ಮಾಡಿ

🟢 shivamoggalive.com

whatsapp-logo
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?