ಶಿವಮೊಗ್ಗ: ಅಬಕಾರಿ ಇಲಾಖೆಯಲ್ಲಿನ ಭ್ರಷ್ಟಾಚಾರ ಖಂಡಿಸಿ, ಸಚಿವ ಆರ್.ಬಿ.ತಿಮ್ಮಾಪುರ ರಾಜೀನಾಮೆಗೆ (Resignation) ಆಗ್ರಹಿಸಿ ಬಿಜೆಪಿ ನಗರ ಘಟಕದ ವತಿಯಿಂದ ಶಿವಪ್ಪನಾಯಕ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಕಾಂಗ್ರೆಸ್ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಿ, ಆಕ್ರೋಶ ವ್ಯಕ್ತಪಡಿಸಿದರು.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
‘ಕಾಂಗ್ರೆಸ್ನದ್ದು ಮೂರು ಸಿ ಸರ್ಕಾರʼ
ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ, ರಾಜ್ಯದ ಕಾಂಗ್ರೆಸ್ ಸರ್ಕಾರವು ಮೂರು ಸಿ ಸರ್ಕಾರ ಎಂದು ಆರೋಪಿಸಿದರು. ಇಲ್ಲಿದೆ ಡಾ. ಧನಂಜಯ ಸರ್ಜಿ ಭಾಷಣದ ಪ್ರಮುಖ 5 ಪಾಯಿಂಟ್ಸ್
1ಮೂರು ಸಿ ಸರ್ಕಾರ: ಕಾಂಗ್ರೆಸ್ ಸರ್ಕಾರವನ್ನು ಕಲೆಕ್ಷನ್ (Collection), ಕಮಿಷನ್ (sCommission) ಮತ್ತು ಕರಪ್ಷನ್ (Corruption) ಎಂಬ ಮೂರು ಸಿ ಗಳ ಸರ್ಕಾರ ಎಂದು ಟೀಕಿಸಿದರು.2ಬೆಲೆ ಏರಿಕೆ: ಆಡು ಮುಟ್ಟದ ಸೊಪ್ಪಿಲ್ಲ, ಕಾಂಗ್ರೆಸ್ ಬೆಲೆ ಏರಿಸದ ವಸ್ತುವಿಲ್ಲ ಎನ್ನುತ್ತಾ ಹಾಲು, ಮದ್ಯ, ದಿನಸಿ ಮತ್ತು ಪೆಟ್ರೋಲ್ ಬೆಲೆ ಏರಿಕೆಯ ಮೂಲಕ ಜನಸಾಮಾನ್ಯರ ಮೇಲೆ ಹೊರೆ ಹಾಕಲಾಗಿದೆ ಎಂದು ದೂರಿದರು.

ಸಚಿವರ ಮೂಗಿನಡಿಯೇ ಭ್ರಷ್ಟಾಚಾರ
ಶಾಸಕ ಎಸ್.ಎನ್.ಚನ್ನಬಸಪ್ಪ ಮಾತನಾಡಿ, ಅಬಕಾರಿ ಸಚಿವರ ಮೂಗಿನ ಕೆಳಗೆ ಭ್ರಷ್ಟಾಚಾರ ನಡೆಯುತ್ತಿದ್ದರೂ ಕ್ರಮ ಕೈಗೊಂಡಿಲ್ಲ. ಅಂದರೆ ಅದಕ್ಕೆ ಸಚಿವರ ಪ್ರೇರಣೆ ಇದೆ ಎಂದರ್ಥ. ಸಚಿವ ತಿಮ್ಮಾಪುರ ಭ್ರಷ್ಟಚಾರಕ್ಕೆ ಅವಕಾಶ ಕೊಡದಿದ್ದರೆ ಹಗರಣಗಳು ನಡೆಯಲು ಸಾಧ್ಯವಿಲ್ಲ. ಸಚಿವರ ವರ್ತನೆ ಮತ್ತು ಅಕ್ರಮಗಳಲ್ಲಿನ ಭಾಗೀದಾರಿಕೆಯಿಂದಲೇ ಇಂದು ಅಬಕಾರಿ ಇಲಾಖೆಯು ಸಂಪೂರ್ಣ ಭ್ರಷ್ಟ ಇಲಾಖೆಯಾಗಿದೆ ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್, ನಗರ ಅಧ್ಯಕ್ಷ ಮೋಹನ್ ರೆಡ್ಡಿ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ – ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು





