| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಶಿವಮೊಗ್ಗ: ರಾಜ್ಯದ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳ 8 ಪುಟದ ಚಾರ್ಜ್ಶೀಟ್ (CHARGESHEET) ಅನ್ನು ಶಾಸಕ ಎಸ್.ಎನ್.ಚನ್ನಬಸಪ್ಪ ಬಿಡುಗಡೆ ಮಾಡಿದರು. ಬಳಿಕ ಸಾರ್ವಜನಿಕರಿಗೆ ವಿತರಿಸಿದರು. ಈ ಸಂದರ್ಭ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಜನರಿಗೆ ಮನವರಿಕೆ ಮಾಡಿದರು.
ಇದೆ ವೇಳೆ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚನ್ನಬಸಪ್ಪ, ಶೂನ್ಯ ಅಭಿವೃದ್ಧಿ, ದುರಾಡಳಿತದಿಂದ ಆಡಳಿತ ಯಂತ್ರ ಸಂಪೂರ್ಣ ಕುಸಿದಿದೆ ಎಂದು ಆರೋಪಿಸಿದರು.
![]()
ಎಂಎಲ್ಎ ಏನೆಲ್ಲ ಹೇಳಿದರು?
- ಸಾರ್ವಜನಿಕರಿಂದ ಹಣವನ್ನು ಲೂಟಿ ಮಾಡುವುದು ಹೇಗೆ? ಅವರ ಜೇಬಿಗೆ ಕತ್ತರಿ ಹಾಕುವುದು ಹೇಗೆ? ಜನರಿಗೆ ವಂಚಿಸುವುದು ಹೇಗೆ ಎಂಬುದನ್ನು ಈ ಸರ್ಕಾರ ತಿಳಿಸಿಕೊಟ್ಟಿದೆ. ಇದರ ವಿರುದ್ಧ ಬಿಜೆಪಿ ಸದನದ ಒಳಗೆ ಮತ್ತು ಹೊರಗೆ ಹೋರಾಟ ನಡೆಸುತ್ತಿದೆ.
![]()
- ಬಹುಮತ ಸಿಕ್ಕಿದೆ ಎಂದು ತಮ್ಮಿಷ್ಟದ ಬಿಲ್ ಪಾಸ್ ಮಾಡಿಕೊಳ್ಳುತ್ತಿದ್ದಾರೆ. ಇದನ್ನು ವಿರೋಧಿಸಿದ 18 ಶಾಸಕರನ್ನು ಸಸ್ಪೆಂಡ್ ಮಾಡಿದ್ದಾರೆ.
- ಮಹಿಳೆಯರಿಗೆ 2 ಸಾವಿರ ರೂ. ಕೊಡುವುದಾಗಿ ನಂಬಿಸಿ, ನೀರು, ಹಾಲು, ಪೆಟ್ರೋಲ್, ಡಿಸೇಲ್, ವಿದ್ಯುತ್, ಮೆಟ್ರೋ ರೈಲು, ಸ್ಮಾರ್ಟ್ ಮೀಟರ್ ಸೇರಿ ಎಲ್ಲದರ ದರವನ್ನು ಶೇ.3ರಿಂದ ಶೇ.900ರಷ್ಟು ಹೆಚ್ಚಳ ಮಾಡಲಾಗಿದೆ. ಇತ್ತ ಗೃಹಲಕ್ಷ್ಮಿ ಯೋಜನೆಯ 2 ಸಾವಿರ ರೂ. ಹಣ ನೀಡಲು ಸತಾಯಿಸಲಾಗುತ್ತಿದೆ.

- ಗುತ್ತಿಗೆದಾರರು ಈ ಸರ್ಕಾರವನ್ನು 60 ಪರ್ಸೆಂಟ್ ಸರ್ಕಾರ ಎಂದು ದಾಖಲೆ ಸಹಿತ ತಿಳಿಸಿದ್ದಾರೆ. ಅಬಕಾರಿ ಸಚಿವರಿಗೆ ವಾರ್ಷಿಕ 500 ಕೋಟಿ ರೂ. ಲಂಚದ ಆಡಿಯೋ ಹೊರ ಬಿದ್ದಿದೆ. ವಾಲ್ಮೀಕಿ ನಿಗಮದ ಹಗರಣ, ಮುಡಾ ಹಗರಣ, ಸ್ಮಾರ್ಟ್ ಮೀಟರ್ ಹಗರಣ ಸೇರಿದಂತೆ ನಾನಾ ಹಗರಣಗಳು ನಡೆದಿವೆ.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್, ಪ್ರಮುಖರಾದ ಜ್ಯೋತಿಪ್ರಕಾಶ್, ಶಿವರಾಜ್, ಮಾಲ್ತೇಶ್, ಚಂದ್ರಶೇಖರ್ ಸೇರಿದಂತೆ ಹಲವರು ಇದ್ದರು.

ಇದನ್ನೂ ಓದಿ » ಸಿಗಂದೂರು ಸೇತುವೆ, ತಲೆ ಮೇಲೆ ಕ್ಲಾಂಪ್ ಬಿದ್ದು ಕಾರ್ಮಿಕ ಸಾವು, ಸಂಸದ ರಾಘವೇಂದ್ರ ವಿಷಾದ
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಬಿಸ್ಕತ್ತು, ಕೇಕ್, ಪಿಜ್ಜಾ, ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ, ಯಾರೆಲ್ಲ ಭಾಗವಹಿಸಬಹುದು?
- ಕ್ರೆಡಿಟ್ ಕಾರ್ಡ್ನಿಂದ ಹಣ ಕಡಿತ, ಎಸ್ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ
- ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?
- ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
- BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್ ಆದೇಶ, ಯಾಕೆ?
- ಶಿವಮೊಗ್ಗದಲ್ಲಿ ಬಸ್ ಹತ್ತಿ ಆಧಾರ್ ಕಾರ್ಡ್ ತೋರಿಸಲು ಮುಂದಾದ ಮಹಿಳೆಗೆ ಕಾದಿತ್ತು ಶಾಕ್, ಆಗಿದ್ದೇನು?
- ಕೋಟೆ ರಸ್ತೆಯಲ್ಲಿ ಬ್ರಹ್ಮರಥೋತ್ಸವ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ, ಏನೇನೆಲ್ಲ ಪೂಜೆ ನೆರವೇರಿತು?
![]()