ಬಿಜೆಪಿ ಟಿಕೆಟ್ ಬರ್ತಾ ಇದೆ.. ಬರ್ತಾ ಇದೆ.. ಬರ್ತಾ ಇದೆ.. ಅಭ್ಯರ್ಥಿ ಆಯ್ಕೆ ವಿಚಾರ ಟ್ರೋಲ್, ಎಲ್ಲೆಡೆ ವೈರಲ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 19 APRIL 2023

SHIMOGA : ನಾಮಪತ್ರ ಸಲ್ಲಿಸಲು ಇನ್ನೆರಡೆ ದಿನ ಬಾಕಿ. ಆದರೆ ಶಿವಮೊಗ್ಗ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಪ್ರಕಟಿಸದಿರುವುದು ಟ್ರೋಲ್‍ಗೆ (trolled) ಒಳಗಾಗಿದೆ. ನಾನಾ ಬಗೆಯ ಟ್ರೋಲ್‍ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಬಿಜೆಪಿ ಮುಖಂಡರನ್ನು ಮುಜುಗರಕ್ಕೀಡು ಮಾಡಿದೆ.

BJP-Ticket-matter-trolled-in-Shimoga

ಸಾಲು ಸಾಲು ಟ್ರೋಲ್‍ಗಳು

ಹಾಸ್ಯ ನಟ ಸಾಧು ಕೋಕಿಲಾ ಅವರ ‘ಬರ್ತಾ ಇದೆ.. ಬರ್ತಾ ಇದೆ.. ಬರ್ತಾ ಇದೆ..’ ಕಾಮಿಡಿಯನ್ನು ಬಿಜೆಪಿ ಟಿಕೆಟ್ ವಿಚಾರಕ್ಕೆ ಬಳಸಿಕೊಂಡು ಟ್ರೋಲ್ (trolled)  ಮಾಡಲಾಗುತ್ತಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಾಟ್ಸಪ್ ಗ್ರೂಪುಗಳು, ಸ್ಟೇಟಸ್‍ನಲ್ಲಿಯು ರಾರಾಜಿಸುತ್ತಿದೆ.

ಇನ್ನು, ‘ಪಕ್ಷನಿಷ್ಠೆಯ ಕಾರಣಕ್ಕೆ ಈಶ್ವರಪ್ಪ ಅವರಿಗೆ ಮತ್ತೆ ಟಿಕಟ್ ಕೊಡುತ್ತಾರಂತೆ’, ‘ಇಡೀ ಶಿವಮೊಗ್ಗದಲ್ಲಿ ಎಲ್ಲಾ ಕಡೆ ಕೇಳಿ ಬರುತ್ತಿರುವ ಪ್ರಶ್ನೆ ಒಂದೇ, ಟಿಕೆಟ್ ಯಾರಿಗೆ?’, ‘ನಾಮಪತ್ರ ಸಲ್ಲಿಸಲು ಉಳಿದಿರೋದು ಎರಡೆ ದಿನ. ಹಾಗಾಗಿ ಅಫಿಡವಿಟ್ ಮಾಡಿಸಲಾಗದೆ ಬಿಜೆಪಿ ಅಭ್ಯರ್ಥಿಯನ್ನೇ ಹಾಕುತ್ತಿಲ್ಲ’, ‘ಕಾಂಗ್ರೆಸ್ ಜೊತೆಗೆ ಬಿಜೆಪಿ ಒಳ ಒಪ್ಪಂದ ಮಾಡಿಕೊಂಡಿದೆಯಂತೆ’ ಎಂದೆಲ್ಲ ಟ್ರೋಲ್ ಆಗುತ್ತಿದೆ.

shivamogga live news whatsappa number

ಲೇವಡಿ ಮಾಡುತ್ತಿದ್ದರು ಈಶ್ವರಪ್ಪ

ಮುಂಚೆ ಉಳಿದೆಲ್ಲ ಪಕ್ಷಗಳಿಗಿಂತಲು ಮೊದಲು ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸುತ್ತಿತ್ತು. ಆಗೆಲ್ಲ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಉಳಿದ ಪಕ್ಷಗಳನ್ನು ಲೇವಡಿ ಮಾಡುತ್ತಿದ್ದರು. ಅಭ್ಯರ್ಥಿಗಳನ್ನು ಪ್ರಕಟಿಸಲಾಗದಿದ್ದವರು ಇನ್ನು ಚುನಾವಣೆಯನ್ನು ಗೆಲ್ಲುತ್ತಾರೆಯೇ ಎಂದು ಟೀಕಿಸುತ್ತಿದ್ದರು. ಆದರೆ ಈ ಬಾರಿ ಅವರದ್ದೇ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹೆಸರು ಪ್ರಕಟಿಸಲು ವಿಳಂಬವಾಗಿದೆ. ನಾಮಪತ್ರ ಸಲ್ಲಿಸಲು ಇನ್ನೆರಡೆ ದಿನ ಬಾಕಿ ಇದ್ದಾಗಲೂ ಅಭ್ಯರ್ಥಿ ಯಾರು ಅನ್ನುವದು ಕಾರ್ಯಕರ್ತರಿಗೇ ಗೊಂದಲವಾಗಿದೆ.

ಸಂಭಾವ್ಯರ ಪಟ್ಟಿ ಬೆಳೆಯುತ್ತಲೇ ಇದೆ

ಬಿಜೆಪಿಯಲ್ಲಿ ಸಂಭಾವ್ಯವರ ಪಟ್ಟಿ ದಿನೇ ದಿನೆ ಬೆಳೆಯುತ್ತಲೆ ಇದೆ. ಈಶ್ವರಪ್ಪ ಪುತ್ರ ಕೆ.ಈ.ಕಾಂತೇಶ್, ಸೂಡಾ ಮಾಜಿ ಅಧ್ಯಕ್ಷ ಎಸ್.ಎಸ್.ಜ್ಯೋತಿ ಪ್ರಕಾಶ್, ಮಕ್ಕಳ ತಜ್ಞ ಡಾ.ಧನಂಜಯ ಸರ್ಜಿ, ಬಿಜೆಪಿ ಮುಖಂಡ ಎಸ್.ದತ್ತಾತ್ರಿ, ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಹರಿಕೃಷ್ಣ, ದಂತ ವೈದ್ಯ ಡಾ.ರವಿಕಿರಣ್, ಕಾರ್ಪೊರೇಟರ್ ಎಸ್‍.ಎನ್.ಚನ್ನಬಸಪ್ಪ ಸೇರಿದಂತೆ ಹಲವು ಹೆಸರುಗಳು ಕೇಳಿ ಬರುತ್ತಿದೆ. ಈಶ್ವರಪ್ಪ ಅವರಿಗೇ ಪುನಃ ಟಿಕೆಟ್ ಘೋಷಣೆಯಾಗಲಿದೆ ಎಂದು ಹೇಳಲಾಗುತ್ತಿದೆ. ಹೀಗೆ ಸಂಭಾವ್ಯರ ಪಟ್ಟಿ ದೊಡ್ಡದಾಗುತ್ತಲೆ ಇದೆ.

160423 SN Channabasappa poster goes viral

ನಾಮಪತ್ರ ಸಲ್ಲಿಸುವ ದಿನಾಂಕ ಪ್ರಕಟಿಸಿದ್ದರು..!

ಪಾಲಿಕೆ ಸದಸ್ಯ ಎಸ್.ಎನ್.ಚನ್ನಬಸಪ್ಪ ಅವರು ಬಿಜೆಪಿ ಅಭ್ಯರ್ಥಿ ಎಂಬ ಪೋಸ್ಟರ್ ವೈರಲ್ ಆಗಿತ್ತು. ಏ.18ರಂದು ಚನ್ನಬಸಪ್ಪ ಅವರು ನಾಮಪತ್ರ ಸಲ್ಲಿಸಲಿದ್ದಾರೆ. ಬಿಜೆಪಿ ಕಾರ್ಯಕರ್ತರು ದೊಡ್ಡ ಸಂಖ್ಯೆಯಲ್ಲಿ ಸೇರಬೇಕು ಎಂಬ ಸಂದೇಶಗಳು ಹರಿದಾಡಿದವು. ಕೊನೆಗೆ ಇದು ಸುಳ್ಳು ಸಂದೇಶ ಎಂದು ಬಿಜೆಪಿ ಮುಖಂಡರು ಸ್ಪಷ್ಟನೆ ನೀಡಬೇಕಾದ ಅನಿವಾರ್ಯತೆ ಎದುರಾಯಿತು.

ಒಟ್ಟಿನಲ್ಲಿ ಶಿವಮೊಗ್ಗ ಬಿಜೆಪಿ ಅಭ್ಯರ್ಥಿ ಕುರಿತ ವಿಷಯ ಟ್ರೋಲಿಗರಿಗೆ ಆಹಾರವಾಗಿದೆ. ದಿನಕ್ಕೊಂದು ಹೊಸ ಬಗೆಯ ಟ್ರೋಲ್‍ಗಳು ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಳ್ಳುವಂತಾಗಿದೆ. ಜನರಿಗೆ ಮನರಂಜನೆಯಾಗಿದೆ.

[su_divider text=”Shivamogga Live | Whatsapp7411700200″ divider_color=”#000000″ link_color=”#000000″]

[su_animate type=”bounceInUp”][su_button url=”https://chat.whatsapp.com/Gw9Vd0MvljO9kI4k7LDRmj” target=”blank” style=”glass” background=”#0003ab” color=”#ffffff” size=”6″ radius=”0″ icon=”https://shivamoggalive.com/wp-content/uploads/2022/11/Whatspp-Logo.png”]CLICK HERE TO JOIN SHIVAMOGGA LIVE WHATSAPP GROUP[/su_button][/su_animate]

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 19, 2023

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment