ಶಿವಮೊಗ್ಗ: ಎಐ ಶೃಂಗಸಭೆಗೆ ಕಾಂಗ್ರೆಸ್ ಕಾರ್ಯಕರ್ತರು ನುಗ್ಗಿ ಪ್ರತಿಭಟನೆ ನಡೆಸಿರುವುದನ್ನು ಖಂಡಿಸಿ, ಶಿವಮೊಗ್ಗದಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು (BJP Yuva Morcha) ಬೃಹತ್ ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ನಾಯಕರ ನಡೆ ದೇಶದ ಮಾನ ಹರಾಜು ಹಾಕುವಂತಿದೆ ಎಂದು ಆರೋಪಿಸಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ನಗರದ ಗೋಪಿ ಸರ್ಕಲ್ನಿಂದ ಜಿಲ್ಲಾ ಕಾಂಗ್ರೆಸ್ ಕಚೇರಿಯವರೆಗೆ ಪ್ರತಿಭಟನಾ ಜಾಥಾ ನಡೆಸಿದರು.
ಬ್ಯಾರಿಕೇಡ್ ಹಾಕಿ ತಡೆದ ಪೊಲೀಸ್
ಕಾಂಗ್ರೆಸ್ ಕಚೇರಿ ಇರುವ ಇಂದಿರಾ ಗಾಂಧಿ ರಸ್ತೆಯ ಆರಂಭದಲ್ಲೇ ಪೊಲೀಸರು ಬ್ಯಾರಿಕೇಡ್ ಹಾಕಿದ್ದರು. ಅಲ್ಲಿಗೆ ಆಗಮಿಸುತ್ತಿದ್ದಂತೆ ಬಿಜೆಪಿ ಯುವ ಮೋರ್ಚ ಕಾರ್ಯಕರ್ತರನ್ನು ತಡೆದರು. ಈ ವೇಳೆ ಬ್ಯಾರಿಕೇಡ್ ಹಾರಿ ಕಾಂಗ್ರೆಸ್ ಕಚೇರಿಯತ್ತ ನಗ್ಗಲು ಯತ್ನಿಸಿದರು. ಈ ವೇಳೆ ಪೊಲೀಸರು ಬಿಜೆಪಿ ಕಾರ್ಯಕರ್ತರನ್ನ ತಡೆದು, ಎಳೆದೊಯ್ದರು.
ರಾಹುಲ್ ಗಾಂಧಿ ಪ್ರತಿಕೃತಿಗೆ ಬೆಂಕಿ ಇದೇ ವೇಳೆ ಬಿಜೆಪಿ ಕಾರ್ಯಕರ್ತರು ರಾಹುಲ್ ಗಾಂಧಿ ಪ್ರತಿಕೃತಿಯನ್ನು ತಂದು ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗಿದರು. ಈ ವೇಳೆ ಬಾಲರಾಜ ಅರಸ್ ರಸ್ತೆ ಮಧ್ಯದಲ್ಲೆ ರಾಹುಲ್ ಗಾಂಧಿ ಪ್ರತಿಕೃತಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.
ಶಿವಮೊಗ್ಗ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರುಬ್ಯಾರಿಕೇಡ್ ಹಾಕಿ ಯುವ ಮೋರ್ಚಾ ಕಾರ್ಯಕರ್ತರನ್ನು ತಡೆದ ಪೊಲೀಸರುಬಿಜೆಪಿ ಕಾರ್ಯಕರ್ತೆಯರನ್ನು ವಶಕ್ಕೆ ಪಡೆದ ಪೊಲೀಸರು. ಕಾಂಗ್ರೆಸ್ ಕಚೇರಿಯತ್ತ ನುಗ್ಗಿದ ಬಿಜೆಪಿ ಕಾರ್ಯಕರ್ತ ವಶಕ್ಕೆ.ಬ್ಯಾರಿಕೇಡ್ ಹಾರಿ ಕಾಂಗ್ರೆಸ್ ಕಚೇರಿಗೆ ನುಗ್ಗಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.ರಾಹುಲ್ ಗಾಂಧಿ ಪ್ರತಿಕೃತಿ ದಹಿಸಿದ ಬಿಜೆಪಿ ಕಾರ್ಯಕರ್ತರುಕಾಂಗ್ರೆಸ್ ಕಚೇರಿ ಮೇಲೆ ನಿಂತು ಪ್ರತಿಭಟನೆ ವೀಕ್ಷಿಸಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್.ಪ್ರಸನ್ನ ಕುಮಾರ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್.
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ