ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ರಾಷ್ಟ್ರೋತ್ಥಾನ ಬಳಗದಿಂದ ಇಲ್ಲಿನ ದ್ವಾರಕಾ ಕನ್ವೆನ್ಷನ್ ಹಾಲ್ನಲ್ಲಿ, ದೇಶಕ್ಕೆ ಹೇರಿದ್ದ ತುರ್ತು ಪರಿಸ್ಥಿತಿಗೆ 50 ವರ್ಷದ ಸ್ಮರಣೆ ಹಾಗೂ ಮರುಮುದ್ರಿತ ‘ಭುಗಿಲು’ ಪುಸ್ತಕವನ್ನು (Book) ವಿಧಾನ ಪರಿಷತ್ ಮಾಜಿ ಸಭಾಪತಿ ಡಿ.ಹೆಚ್.ಶಂಕರಮೂರ್ತಿ ಲೋಕಾರ್ಪಣೆ ಮಾಡಿದರು.
[su_note note_color=”#f1f1f1″ text_color=”#000000″ radius=”0″]
ಬಿ.ಎಲ್.ಸಂತೋಷ್ ಏನೆಲ್ಲ ಹೇಳಿದರು?
[su_divider top=”no” style=”dotted” divider_color=”#f1f1f1″ link_color=”#000000″ size=”3″ margin=”10″]
ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಮಾತನಾಡಿದರು. ಅವರ ಭಾಷಣದ ಐದು ಪ್ರಮುಖ ಪಾಯಿಂಟ್ ಇಲ್ಲಿದೆ.
[su_divider top=”no” style=”dotted” divider_color=”#f1f1f1″ link_color=”#000000″ size=”3″ margin=”10″]
ಮೊದಲು ಪಕ್ಷವನ್ನು ಕೈವಶ ಮಾಡಿಕೊಂಡ ಅಂದಿನ ಪಧಾನಿ ಇಂದಿರಾ ಗಾಂಧಿ, ಬಳಿಕ ಆಡಳಿತ ತನ್ನ ಸುತ್ತಲೇ ಕೇಂದ್ರಿತವಾಗುವಂತೆ ನೋಡಿಕೊಂಡರು. ಅದರ ಮುಂದಿನ ಹಂತವಾಗಿ ದೇಶವನ್ನೇ ತನ್ನ ಹಿಡಿತಕ್ಕೆ ತೆಗೆದುಕೊಳ್ಳಲು ಮುಂದಾದರು. ಇದರ ಪರಿಣಾಮ ದೇಶ ತುರ್ತು ಪರಿಸ್ಥಿತಿ ಎದುರಿಸಬೇಕಾಯಿತು.
[su_divider top=”no” style=”dotted” divider_color=”#b8b8b8″ link_color=”#000000″ size=”3″ margin=”10″]
ತುರ್ತು ಪರಿಸ್ಥಿತಿ ಹೇರುವ ಮುನ್ನವೇ ಇಂದಿರಾ ಗಾಂಧಿ ಪ್ರಜಾಪ್ರಭುತ್ವದಿಂದ ವಿಮುಖರಾದಂತೆ ಕಂಡುಬಂದಿದ್ದರು. ಕೀನ್ಯಾದಲ್ಲಿ ಅವರು ಮಾಡಿದ್ದ ಭಾಷಣದಲ್ಲಿ ಭಾರತದಲ್ಲಿ ಅನೇಕ ಪ್ರತಿಪಕ್ಷಗಳಿವೆ. ಇದು ನನಗೆ ಕಿರಿಕಿರಿ ಉಂಟು ಮಾಡುತ್ತಿದೆ ಎಂದಿದ್ದರು. ಬಾಂಗ್ಲಾದಲ್ಲಿದ್ದ ಅಧ್ಯಕ್ಷಿಯ ಆಡಳಿತವನ್ನು ಅವರು ಸ್ವಾಗತಿಸಿದ್ದರು.
[su_divider top=”no” style=”dotted” divider_color=”#b8b8b8″ link_color=”#000000″ size=”3″ margin=”10″]
ಈ ದೇಶದ ಜನ ಎಂದಿಗೂ ಬೇರೆಯವರು ತಮ್ಮ ವಿಚಾರ ಹಿಡಿದಿಟ್ಟುಕೊಳ್ಳುವುದನ್ನು ಹಾಗೂ ಸ್ವಾತಂತ್ರ್ಯಹರಣ ಮಾಡುವುದನ್ನು ಒಪ್ಪಿಕೊಳ್ಳುವುದಿಲ್ಲ ಎಂಬ ವಾಸ್ತವ ಇಂದಿರಾ ಗಾಂಧಿಗೆ ತಿಳಿದಿರಲಿಲ್ಲ. ಗಣ್ಯರಾದವರು ಮನೆಯೊಳಗೆ ಕುಳಿತಿದ್ದರೆ ಸಾಮಾನ್ಯ ಜನರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದರು.

[su_divider top=”no” style=”dotted” divider_color=”#b8b8b8″ link_color=”#000000″ size=”3″ margin=”10″]
ಈ ದೇಶಕ್ಕೆ ಇನ್ನೆಂದೂ ತುರ್ತು ಪರಿಸ್ಥಿತಿ ಎದುರಿಸುವ ಅನಿವಾರ್ಯತೆ ಬೀಳುವುದಿಲ್ಲ. ಏಕೆಂದರೆ 1975ರ ಭಾರತ, ಅಂದಿನ ಆರ್ಎಸ್ಎಸ್, ಅಂದಿನ ಎಬಿವಿಪಿ ಎಲ್ಲವೂ ಇಂದು ಬದಲಾಗಿವೆ. ಮುಖ್ಯವಾಗಿ ಕಾಂಗ್ರೆಸ್ ಕೂಡಾ ಬದಲಾಗಿದೆ. ಅಂದು ದೇಶದಲ್ಲಿ ಸರ್ವವ್ಯಾಪಿಯಾಗಿದ್ದ ಕಾಂಗ್ರೆಸ್ ಈಗ ಶಕ್ತಿ ಕಳೆದುಕೊಂಡಿದೆ ಎಂದರು.
[su_divider top=”no” style=”dotted” divider_color=”#b8b8b8″ link_color=”#000000″ size=”3″ margin=”10″]
ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಬೇರೆಯವರ ಮನೆ ಹಾಳು ಮಾಡಿದ್ದ ಕಾಂಗ್ರೆಸ್, ಈಗ ತನ್ನ ಮನೆ ಕಾಪಾಡಿಕೊಳ್ಳಲು ಪ್ರಯತ್ನ ನಡೆಸುವ ಸ್ಥಿತಿಗೆ ಬಂದಿದೆ. 75 ವರ್ಷಗಳ ಹಿಂದಿನ ಕಾಂಗ್ರೆಸ್ ಪಕ್ಷ ಈಗ ಉಳಿದಿಲ್ಲ ಎಂದು ಬಿ.ಎಲ್.ಸಂತೋಷ್ ತಿಳಿಸಿದರು.[/su_note]
ಇದನ್ನೂ ಓದಿ » ಲಿಂಗನಮಕ್ಕಿ ಜಲಾಶಯದಿಂದ ಮೊದಲ ಎಚ್ಚರಿಕೆ, ಯಾವುದೇ ಸಂದರ್ಭ ಗೇಟ್ಗಳ ಮೂಲಕ ನೀರು ಹೊರಕ್ಕೆ
[su_quote cite=”ಡಿ.ಹೆಚ್.ಶಂಕರಮೂರ್ತಿ, ಮಾಜಿ ಸಭಾಪತಿ“]ಈಗಿನ ಪೀಳಿಗೆಗೆ ದೇಶಕ್ಕೆ ಹೇರಿದ್ದ ತುರ್ತುಸ್ಥಿತಿ ಬಗ್ಗೆ ಅರಿವಿಲ್ಲ. ಅಂದು ತ್ರಿವರ್ಣಧ್ವಜ ಹಿಡಿದು ದೇಶದ ಪರ ಘೋಷಣೆ ಕೂಗಿದ್ದಕ್ಕೆ ರಾಷ್ಟ್ರದ್ರೋಹಿ ಪಟ್ಟಕಟ್ಟಿ ಜೈಲಿಗೆ ಹಾಕಿದ್ದರು. ಇದರ ಪರಿಣಾಮ ಇಂದಿರಾಗಾಂಧಿ ಅವರನ್ನು ಜನರು ಸೋಲಿಸಿದರು.[/su_quote]
[su_divider top=”no” style=”dotted” divider_color=”#b8b8b8″ link_color=”#000000″ size=”3″ margin=”10″]
[su_quote cite=”ಪ್ರಕಾಶ್ ಬೆಳವಾಡಿ, ನಟ, ಚಿಂತಕ“]ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಕಾಂಗ್ರೆಸ್ಗೆ ಆರ್ಎಸ್ಎಸ್ ವಿರುದ್ಧ ಆಕ್ರೋಶ ಇತ್ತು. ಆದರೆ, ಇಂದು ಅದೇ ಸಂಘಟನೆಯವರು ಎಲ್ಲ ರಂಗದಲ್ಲಿ ಇದ್ದಾರೆ.[/su_quote]

ರಾಷ್ಟ್ರೋತ್ಥಾನ ಬಳಗದ ಜಿಲ್ಲಾ ಘಟಕದ ಅಧ್ಯಕ್ಷ ಪಿ.ಆರ್.ಸುಧೀಂದ್ರ ಮಾತನಾಡಿದರು. ಆರ್ಎಸ್ಎಸ್ ಪ್ರಮುಖ ಪಟ್ಟಾಭಿರಾಮ್, ರಾಷ್ಟ್ರಭಕ್ತರ ಬಳಗದ ಸಂಚಾಲಕ ಕೆ.ಎಸ್.ಈಶ್ವರಪ್ಪ, ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಡಿ.ಎಸ್.ಅರುಣ್, ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಕಡಿದಾಳ್ ಗೋಪಾಲ್, ಮಾಜಿ ಶಾಸಕರಾದ ಎಸ್.ರುದ್ರೇಗೌಡ, ಕೆ.ಜಿ.ಕುಮಾರಸ್ವಾಮಿ, ಕೆ.ಬಿ.ಅಶೋಕ ನಾಯ್ಕ್, ಆರ್.ಕೆ.ಸಿದ್ರಾಮಣ್ಣ, ಮುಖಂಡರಾದ ಎಸ್.ಎಸ್.ಜ್ಯೋತಿ ಪ್ರಕಾಶ್, ಗೋವಿಂದ ನಾಯರ್ ಇದ್ದರು.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















