| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಶಿವಮೊಗ್ಗ: ನಗರದ ಕೋಟೆ ಪೊಲೀಸ್ ಠಾಣೆ ರಸ್ತೆಯಲ್ಲಿರುವ ಶ್ರೀ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಗುರುವಾರ ಬ್ರಹ್ಮರಥೋತ್ಸವ (Brahma Ratotsava) ನಡೆಯಿತು. ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿದ್ದ ಭಕ್ತರು ದೇವಿಯ ಘೋಷಣೆ ಕೂಗುತ್ತ ರಥವನ್ನು ಎಳೆದು ಪುನೀತರಾದರು.
ಬ್ರಹ್ಮರಥೋತ್ಸವ ಹಿನ್ನೆಲೆ ಕೋಟೆ ಶ್ರೀ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ (Temple) ಮೂರು ದಿನ ವಿಶೇಷ ಪೂಜೆ ನೆರವೇರಿಸಲಾಗುತ್ತಿದೆ. ಬುಧವಾರ ದೇವಸ್ಥಾನದಲ್ಲಿ ಮಹಾಗಣಪತಿ ಪೂಜೆ, ಕಲಶಸ್ಥಾಪನೆ, ಚಂಡಿಕಾ ಪಾರಾಯಣ, ದುರ್ಗಾ ಜಪ, ರಾಜಬೀದಿ ಉತ್ಸವ, ಪ್ರಾಕಾರೋತ್ಸವ ನಡೆದಿತ್ತು. ಗುರುವಾರ ಬ್ರಹ್ಮರಥೋತ್ಸವ ನಡೆಯಿತು. ಬಳಿಕ ಆಚಾರ್ಯತ್ರಯ ಭವನದಲ್ಲಿ ಗುರುಪಾದುಕಾ ಪೂಜೆ ಮತ್ತು ಪ್ರಸಾದ ವಿನಿಯೋಗ ನಡೆಸಲಾಯಿತು.
![]()
ಇದನ್ನೂ ಓದಿ » ಮಂಗಳೂರು ವಲಯ ಮಟ್ಟದ ಯುವಜನೋತ್ಸವ, ಶಿವಮೊಗ್ಗದ ಕಾಲೇಜು ಚಾಂಪಿಯನ್
ಇಂದು ತೀರ್ಥಸ್ನಾನ, ದುರ್ಗಾಹೋಮ, ಪೂರ್ಣಾಹುತಿ, ಮಹಾ ಮಂಗಳಾರತಿ ಪ್ರಸಾದ ವಿನಿಯೋಗ ನಡೆಯಲಿದೆ. ಬ್ರಹ್ಮರಥೋತ್ಸವ ಅಂಗವಾಗಿ ಕೋಟೆ ಪೊಲೀಸ್ ಠಾಣೆ ರಸ್ತೆಯಲ್ಲಿ ಅಂಗಡಿ ಮಳಿಗೆಗಳನ್ನು ಸ್ಥಾಪಿಸಲಾಗಿತ್ತು. ಮಂಡಕ್ಕಿ ಖಾರ, ತಿನಿಸುಗಳು, ಅಲಂಕಾರಿಕ ವಸ್ತುಗಳು, ನಾವೆಲ್ಟಿ ಉತ್ಪನ್ನಗಳು ಮಾರಾಟ ನಡೆಯಿತು.
ಇದನ್ನೂ ಓದಿ » ಶಿವಮೊಗ್ಗದ ಸುಗುಣಾ ಸತೀಶ್ಗೆ ಅಪರ್ಣ ನಿರೂಪಣಾ ರತ್ನ ಪ್ರಶಸ್ತಿ
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್ ಆದೇಶ, ಯಾಕೆ?
- ಶಿವಮೊಗ್ಗದಲ್ಲಿ ಬಸ್ ಹತ್ತಿ ಆಧಾರ್ ಕಾರ್ಡ್ ತೋರಿಸಲು ಮುಂದಾದ ಮಹಿಳೆಗೆ ಕಾದಿತ್ತು ಶಾಕ್, ಆಗಿದ್ದೇನು?
- ಕೋಟೆ ರಸ್ತೆಯಲ್ಲಿ ಬ್ರಹ್ಮರಥೋತ್ಸವ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ, ಏನೇನೆಲ್ಲ ಪೂಜೆ ನೆರವೇರಿತು?
- ಅಡಿಕೆ ಧಾರಣೆ | 4 ಡಿಸೆಂಬರ್ 2025 | ಯಾವ್ಯಾವ ಅಡಿಕೆಗೆ ಎಷ್ಟಿತ್ತು ರೇಟ್?
- ಶಿವಮೊಗ್ಗ ಸಿಟಿಯ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್ ಇರಲ್ಲ
- ಶಿವಮೊಗ್ಗದ ಮೊಬೈಲ್ ಅಂಗಡಿಯಿಂದ ಹೊರ ಬಂದ ಮೆಕಾನಿಕ್ಗೆ ಕಾದಿತ್ತು ಶಾಕ್
- ಶಿವಮೊಗ್ಗ ಜಿಲ್ಲೆಗೆ ಇವತ್ತೂ ಮಳೆ ಅಲರ್ಟ್, ಎಷ್ಟು ಮಳೆಯಾಗುವ ಸಾಧ್ಯತೆ ಇದೆ? ಎಲ್ಲೆಲ್ಲಿ ಹೇಗಿದೆ ವಾತಾವರಣ?
- ಶಿವಮೊಗ್ಗದಲ್ಲಿ ರೈಲ್ವೆ ಹಳಿ ಮೇಲೆ ಯುವಕನ ಮೃತದೇಹ ಪತ್ತೆ
![]()