SHIMOGA NEWS, 23 SEPTEMBER 2024 : ಸ್ಮಾರ್ಟ್ ಸಿಟಿ ಯೋಜನೆ ಅವಾಂತರ ಒಂದೆರಡಲ್ಲ. ಈ ಯೋಜನೆ ಅಡಿ ರಸ್ತೆ ಮಧ್ಯೆ ಅಳವಡಿಸಲಾಗಿರುವ ಕೇಬಲ್ ಡೆಕ್ಗಳ ಸ್ಲ್ಯಾಬ್ಗಳು (Slab) ಪುನಃ ವಾಹನ ಸವಾರರಲ್ಲಿ ಆತಂಕ ಮೂಡಿಸುತ್ತಿವೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಶಿವಮೊಗ್ಗದ ಬಾಲರಾಜ ಅರಸ್ ರಸ್ತೆಯಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅಡಿ ಕೇಬಲ್ ಡೆಕ್ ಅಳವಡಿಸಲಾಗಿದೆ. ಇದಕ್ಕೆ ನಡುರಸ್ತೆಯಲ್ಲಿ ಸ್ಲ್ಯಾಬ್ಗಳನ್ನು ಹಾಕಲಾಗಿದೆ. ಆರು ತಿಂಗಳಿಗೊಮ್ಮೆ, ಮೂರು ತಿಂಗಳಿಗೊಮ್ಮೆ ಈ ಸ್ಲ್ಯಾಬ್ಗಳು ಮುರಿದು ಹೋಗುತ್ತಿವೆ.
ಮತ್ತೆ ಮುರಿದಿವೆ ಸ್ಲ್ಯಾಬ್ಗಳು
ಕೆಇಬಿ ಸರ್ಕಲ್ ಕಡೆಯಿಂದ ಮಹಾವೀರ ಸರ್ಕಲ್ ಕಡೆಗೆ ತೆರಳುವ ಕಡೆ ಎರಡು ಬದಿಯ ಸ್ಲ್ಯಾಬ್ಗಳು ಮುರಿದು ಬೀಳುವ ಹಂತದಲ್ಲಿವೆ. ಸ್ವಲ್ಪ ಯಾಮಾರಿದರೆ ಇಲ್ಲಿ ಅಪಘಾತ ನಿಶ್ಚಿತ.

ಈ ಮಾರ್ಗದಲ್ಲಿ ರೈಸ್ ಬೌಲ್ ಹೊಟೇಲ್ ಎದುರು ಸ್ಲ್ಯಾಬ್ ತುಂಡಾಗಿದೆ. ಇದನ್ನು ರಿಪೇರಿ ಮಾಡುವ ಬದಲು, ಬ್ಯಾರಿಕೇಡ್ಗಳನ್ನು ಅಳವಡಿಸಿ ಅಧಿಕಾರಿಗಳು ಕೈತೊಳೆದುಕೊಂಡಿದ್ದಾರೆ. ಇನ್ನು ಟ್ಯಾಂಕ್ ಮೊಹಲ್ಲಾ ರಸ್ತೆಯ ತಿರುವಿನಲ್ಲಿರುವ ಸ್ಲ್ಯಾಬ್ ಕೂಡ ಹಾನಿಯಾಗಿದೆ. ಹೆಚ್ಚು ವಾಹನ ಮತ್ತು ಜನ ಓಡಾಡುವ ರಸ್ತೆಯಲ್ಲಿ ಈ ಸ್ಲ್ಯಾಬ್ಗಳಿಂದ ತೀವ್ರ ಸಮಸ್ಯೆ ಉಂಟಾಗಿದೆ.

ಈ ಹಿಂದೆ ಬಾಲರಾಜ ಅರಸ್ ರಸ್ತೆಯಲ್ಲಿ ಸ್ಲ್ಯಾಬ್ಗಳು ಹಾನಿಯಾಗಿ ರಸ್ತೆಯ ಎರಡು ಬದಿಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯಾಗಿತ್ತು. ಈ ಕುರಿತು ಶಿವಮೊಗ್ಗ ಲೈವ್.ಕಾಂ ನಿರಂತರ ವರದಿ ಪ್ರಕಟಿಸಿದ ಬೆನ್ನಿಗೆ ರಿಪೇರಿ ಕಾರ್ಯ ನಡೆಸಲಾಗಿತ್ತು. ಆದರೆ ಈಗ ಪುನಃ ಸಮಸ್ಯೆ ತಲೆ ಎತ್ತಿದೆ.
ಇದನ್ನೂ ಓದಿ » ಹಿಂದೂ ಮಹಾಸಭಾ ಮೆರವಣಿಗೆ, ಮಫ್ತಿಯಲ್ಲಿದ್ದ ಮಹಿಳಾ ಪೊಲೀಸ್ ಮಾಂಗಲ್ಯ ಸರ ನಾಪತ್ತೆ
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು





