ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 16 MAY 2023
SHIMOGA : ಬಸ್ ಮತ್ತು ಬೈಕ್ ಮಧ್ಯೆ ಡಿಕ್ಕಿಯಾಗಿ ಬೈಕ್ ಸವಾರ ಗಾಯಗೊಂಡಿದ್ದಾರೆ. ಇದರಿಂದ ರೊಚ್ಚಿಗೆದ್ದ ಬೈಕ್ ಸವಾರನ ಕಡೆಯವರು ಬಸ್ಸಿನ ಗಾಜಿಗೆ (Glass Break) ಕಲ್ಲು ತೂರಿದ್ದಾರೆ.

ಶಿವಮೊಗ್ಗದ ಮಹಾವೀರ ವೃತ್ತದಲ್ಲಿ ಘಟನೆ ಸಂಭವಿಸಿದೆ. ಗೋಪಿ ಸರ್ಕಲ್ ಕಡೆಯಿಂದ ಶಾಂತಿ ನಗರ ಕಡೆಗೆ ತೆರಳುತ್ತಿದ್ದ ಸಿಟಿ ಬಸ್, ಜಿಲ್ಲಾಧಿಕಾರಿ ಕಚೇರಿ ಕಡೆಯಿಂದ ತೆರಳುತ್ತಿದ್ದ ಹೋಂಡಾ ಆಕ್ಟೀವಾ ಬೈಕ್ ಡಿಕ್ಕಿಯಾಗಿವೆ. ಮಹಾವೀರ ಸರ್ಕಲ್ನ ಸಿಗ್ನಲ್ನಲ್ಲಿ ಅಪಘಾತವಾಗಿದೆ.
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ
ಬಸ್ ಗ್ಲಾಸ್ ಪೀಸ್ ಪೀಸ್
ಗಾಯಾಳುವನ್ನು ಕೂಡಲೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ವೇಳೆ ಬೈಕ್ ಸವಾರನ ಕಡೆಯವರು ರೊಚ್ಚಿಗೆದ್ದು ಸಿಟಿ ಬಸ್ಸಿನ ಗ್ಲಾಸ್ಗೆ ಕಲ್ಲು ತೂರಿದ್ದಾರೆ. ಗಾಜು (Glass Break) ಪುಡಿ ಪುಡಿಯಾಗಿದೆ. ಚಾಲಕನ ಮೇಲೆಯೂ ಹಲ್ಲೆಯಾಗಿದೆ ಎಂದು ಆರೋಪಿಸಲಾಗಿದೆ. ಇದರಿಂದ ಮಹಾವೀರ ವೃತ್ತದಲ್ಲಿ ಕೆಲಕಾಲ ಗೊಂದಲದ ಸ್ಥಿತಿ ನಿರ್ಮಾಣವಾಗಿತ್ತು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಯುವತಿ ಕಿಡ್ನಾಪ್ ಕೇಸ್ಗೆ ಟ್ವಿಸ್ಟ್, ಹುಬ್ಬಳ್ಳಿಯಲ್ಲಿ ಸಿಕ್ಕ ಯುವತಿ ವಿಚಾರಣೆ ವೇಳೆ ಹೇಳಿದ್ದೇನು? ಮುಂದೇನಾಯ್ತು?
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು





