ಶಿವಮೊಗ್ಗದಲ್ಲಿ ಬೈಕ್‌ಗೆ ಸಿಟಿ ಬಸ್‌ ಡಿಕ್ಕಿ, ರೊಚ್ಚಿಗೆದ್ದ ಜನರಿಂದ ಗ್ಲಾಸ್‌ಗೆ ಕಲ್ಲು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 16 MAY 2023

SHIMOGA : ಬಸ್‌ ಮತ್ತು ಬೈಕ್‌ ಮಧ್ಯೆ ಡಿಕ್ಕಿಯಾಗಿ ಬೈಕ್‌ ಸವಾರ ಗಾಯಗೊಂಡಿದ್ದಾರೆ. ಇದರಿಂದ ರೊಚ್ಚಿಗೆದ್ದ ಬೈಕ್‌ ಸವಾರನ ಕಡೆಯವರು ಬಸ್ಸಿನ ಗಾಜಿಗೆ (Glass Break) ಕಲ್ಲು ತೂರಿದ್ದಾರೆ.

bus-collides-with-bike-glass-break-in-Shimoga-Mahaveera-Circle

ಶಿವಮೊಗ್ಗದ ಮಹಾವೀರ ವೃತ್ತದಲ್ಲಿ ಘಟನೆ ಸಂಭವಿಸಿದೆ. ಗೋಪಿ ಸರ್ಕಲ್‌ ಕಡೆಯಿಂದ ಶಾಂತಿ ನಗರ ಕಡೆಗೆ ತೆರಳುತ್ತಿದ್ದ ಸಿಟಿ ಬಸ್‌, ಜಿಲ್ಲಾಧಿಕಾರಿ ಕಚೇರಿ ಕಡೆಯಿಂದ ತೆರಳುತ್ತಿದ್ದ ಹೋಂಡಾ ಆಕ್ಟೀವಾ ಬೈಕ್‌ ಡಿಕ್ಕಿಯಾಗಿವೆ. ಮಹಾವೀರ ಸರ್ಕಲ್‌ನ ಸಿಗ್ನಲ್‌ನಲ್ಲಿ ಅಪಘಾತವಾಗಿದೆ.

WATCH VIDEO

ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ

ಬಸ್‌ ಗ್ಲಾಸ್‌ ಪೀಸ್‌ ಪೀಸ್‌

ಗಾಯಾಳುವನ್ನು ಕೂಡಲೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ವೇಳೆ ಬೈಕ್‌ ಸವಾರನ ಕಡೆಯವರು ರೊಚ್ಚಿಗೆದ್ದು ಸಿಟಿ ಬಸ್ಸಿನ ಗ್ಲಾಸ್‌ಗೆ ಕಲ್ಲು ತೂರಿದ್ದಾರೆ. ಗಾಜು (Glass Break) ಪುಡಿ ಪುಡಿಯಾಗಿದೆ. ಚಾಲಕನ ಮೇಲೆಯೂ ಹಲ್ಲೆಯಾಗಿದೆ ಎಂದು ಆರೋಪಿಸಲಾಗಿದೆ. ಇದರಿಂದ ಮಹಾವೀರ ವೃತ್ತದಲ್ಲಿ ಕೆಲಕಾಲ ಗೊಂದಲದ ಸ್ಥಿತಿ ನಿರ್ಮಾಣವಾಗಿತ್ತು.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಯುವತಿ ಕಿಡ್ನಾಪ್‌ ಕೇಸ್‌ಗೆ ಟ್ವಿಸ್ಟ್‌, ಹುಬ್ಬಳ್ಳಿಯಲ್ಲಿ ಸಿಕ್ಕ ಯುವತಿ ವಿಚಾರಣೆ ವೇಳೆ ಹೇಳಿದ್ದೇನು? ಮುಂದೇನಾಯ್ತು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment