SHIVAMOGGA LIVE NEWS | 13 DECEMBER 2022
ಶಿವಮೊಗ್ಗ : ರೈಲ್ವೆ ನಿಲ್ದಾಣದಿಂದ (railway station) ನಗರದ ವಿವಿಧೆಡೆಗೆ ಸಾರಿಗೆ ಬಸ್ ಸೇವೆ ಆರಂಭಿಸುವಂತೆ ವಿವಿಧ ಸಂಘಟನೆಗಳು ಒತ್ತಾಯಿಸಿದ್ದವು. ಈ ಕುರಿತು ಜಿಲ್ಲಾಡಳಿತ ನಿರ್ಧಾರ ಕೈಗೊಂಡಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು, ರೈಲ್ವೆ ನಿಲ್ದಾಣದಿಂದ (railway station) ನಗರದ ವಿವಿಧ ಪ್ರದೇಶಕ್ಕೆ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ಸಾರಿಗೆ ನಿಗಮದ ಬಸ್ ಗಳನ್ನು ನಿಯೋಜಿಸಲಾಗುತ್ತದೆ ಎಂದು ತಿಳಿಸಿದರು.
ಇದನ್ನೂ ಓದಿ – ಭದ್ರಾವತಿ – ಶಿವಮೊಗ್ಗ ನಡುವೆ ಕೈಕೊಟ್ಟ ಇಂಟರ್ ಸಿಟಿ ರೈಲು ಇಂಜಿನ್
ನಗರದ ಎಲ್ಲಾ ಆಟೋಗಳಿಗೆ ಮೀಟರ್ ಕಡ್ಡಾಯಗೊಳಿಸಲಾಗಿದೆ. ಈ ತಿಂಗಳ ಕೊನೆಯೊಳಗೆ ಎಲ್ಲಾ ಆಟೋಗಳಲ್ಲಿ ಮೀಟರ್ ಅಳವಡಿಸಬೇಕು. ಸಮವಸ್ತ್ರ ಕಡ್ಡಾಯವಾಗಿ ಧರಿಸಬೇಕು. ಇಲ್ಲವಾದಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200