ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 23 ಫೆಬ್ರವರಿ 2022
ಮೃತದೇಹದ ಮೆರವಣಿಗೆ ವೇಳೆ ಗಲಾಟೆಗೆ ನಾವು ಕಾರಣರಲ್ಲ. ಅಂದು ಸೆಕ್ಷನ್ 144 ಇದ್ದ ಕಾರಣ ದೊಡ್ಡ ಅನಾಹುತ ತಪ್ಪಿದೆ ಎಂದು ಸಂಸದ ಬಿ.ವೈ ರಾಘವೇಂದ್ರ ಹೇಳಿದರು.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ರಾಘವೇಂದ್ರ ಅವರು, ಯಾರೂ ಸಹ ಜನರ ಭಾವನೆಗಳ ಜೊತೆ ಚೆಲ್ಲಾಟ ಆಡುವುದಕ್ಕೆ ಬರಲ್ಲ. ತುಂಬಾ ಸೂಕ್ಷ್ಮವಾಗಿ ಎಲ್ಲ ಅಂಶವನ್ನು ತೆಗೆದುಕೊಂಡು ಹೋಗಬೇಕಿತ್ತು. ಈ ಸಂದರ್ಭದಲ್ಲಿ ಜನರ ಆಕ್ರೋಶ ತಡೆಯಲು ಆಗಲಿಲ್ಲ ಎಂದರು.
ಹರ್ಷನ ಅಂತಿಮ ಸಂಸ್ಕಾರ ಶಾಂತಿಯುತವಾಗಿ ನಡೆಯಲು ಎಲ್ಲ ಕ್ರಮ ತೆಗೆದುಕೊಂಡಿದ್ದೆವು. ನಮ್ಮ ನಾಯಕರಾದ ಈಶ್ವರಪ್ಪ ಅವರ ನೇತೃತ್ವದಲ್ಲಿ ಎಲ್ಲರೂ ಒಟ್ಟಾಗಿ ಎಲ್ಲವನ್ನು ನೆರವೇರಿಸುವ ಕ್ರಮ ತೆಗೆದುಕೊಂಡಿದ್ದೆವು. ಪೊಲೀಸ್ ಇಲಾಖೆಯ ಜೊತೆ ಕೈ ಜೋಡಿಸುವ ಕೆಲಸ ಮಾಡಿದ್ದೆವು ಎಂದು ತಿಳಿಸಿದರು.
ಮೆರವಣಿಗೆ ಬೇಡ ಅಂದಿದ್ದರು
ಪೊಲೀಸ್ ಇಲಾಖೆ ಮೆರವಣಿಗೆ ಬೇಡ ಎಂದು ಹೇಳಿದ್ದರು. ಆದರೂ ಅದನ್ನು ಕೇಳುವ ಪರಿಸ್ಥಿತಿಯಲ್ಲಿ ಯಾರೂ ಇರಲಿಲ್ಲ. ನಾವೆಲ್ಲ ಪೊಲೀಸರಿಗೆ ಸಹಕಾರ ನೀಡಿದ್ದೇವೆ ಎಂದು ರಾಘವೇಂದ್ರ ತಿಳಿಸಿದರು.
ಹರ್ಷ ಅವರ ಮೃತದೇಹದ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದೆ. ಶಿವಮೊಗ್ಗ ಶಾಂತಿಗೆ ಹೆಸರುವಾಸಿಯಾದ ನಗರ. ಆದರೆ ಕಲ್ಲು ತೂರಾಟದಿಂದ ಕೆಟ್ಟ ಸಂದೇಶ ಹೋಗಿದೆ. ಇದಕ್ಕೆ ಮೂಲ ಕಾರಣರಾದವರನ್ನು ಬಂಧಿಸಬೇಕು. ಕಾನೂನು ರೀತಿಯಲ್ಲಿ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದರು.
ಇದನ್ನೂ ಓದಿ | ‘ಹತ್ಯೆಗೂ ಮೊದಲು ಹರ್ಷಾಗೆ ವಿಡಿಯೋ ಕಾಲ್’, ಕೊನೆ ಕ್ಷಣವನ್ನು ವಿವರಿಸಿದ ಸ್ನೇಹಿತ
LATEST NEWS
- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

- ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

- ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

- ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು
















