ಶಿವಮೊಗ್ಗದ ಲೈವ್.ಕಾಂ | SHIMOGA NEWS | 23 ಫೆಬ್ರವರಿ 2022
ಮೃತದೇಹದ ಮೆರವಣಿಗೆ ವೇಳೆ ಗಲಾಟೆಗೆ ನಾವು ಕಾರಣರಲ್ಲ. ಅಂದು ಸೆಕ್ಷನ್ 144 ಇದ್ದ ಕಾರಣ ದೊಡ್ಡ ಅನಾಹುತ ತಪ್ಪಿದೆ ಎಂದು ಸಂಸದ ಬಿ.ವೈ ರಾಘವೇಂದ್ರ ಹೇಳಿದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ರಾಘವೇಂದ್ರ ಅವರು, ಯಾರೂ ಸಹ ಜನರ ಭಾವನೆಗಳ ಜೊತೆ ಚೆಲ್ಲಾಟ ಆಡುವುದಕ್ಕೆ ಬರಲ್ಲ. ತುಂಬಾ ಸೂಕ್ಷ್ಮವಾಗಿ ಎಲ್ಲ ಅಂಶವನ್ನು ತೆಗೆದುಕೊಂಡು ಹೋಗಬೇಕಿತ್ತು. ಈ ಸಂದರ್ಭದಲ್ಲಿ ಜನರ ಆಕ್ರೋಶ ತಡೆಯಲು ಆಗಲಿಲ್ಲ ಎಂದರು.
ಹರ್ಷನ ಅಂತಿಮ ಸಂಸ್ಕಾರ ಶಾಂತಿಯುತವಾಗಿ ನಡೆಯಲು ಎಲ್ಲ ಕ್ರಮ ತೆಗೆದುಕೊಂಡಿದ್ದೆವು. ನಮ್ಮ ನಾಯಕರಾದ ಈಶ್ವರಪ್ಪ ಅವರ ನೇತೃತ್ವದಲ್ಲಿ ಎಲ್ಲರೂ ಒಟ್ಟಾಗಿ ಎಲ್ಲವನ್ನು ನೆರವೇರಿಸುವ ಕ್ರಮ ತೆಗೆದುಕೊಂಡಿದ್ದೆವು. ಪೊಲೀಸ್ ಇಲಾಖೆಯ ಜೊತೆ ಕೈ ಜೋಡಿಸುವ ಕೆಲಸ ಮಾಡಿದ್ದೆವು ಎಂದು ತಿಳಿಸಿದರು.
ಮೆರವಣಿಗೆ ಬೇಡ ಅಂದಿದ್ದರು
ಪೊಲೀಸ್ ಇಲಾಖೆ ಮೆರವಣಿಗೆ ಬೇಡ ಎಂದು ಹೇಳಿದ್ದರು. ಆದರೂ ಅದನ್ನು ಕೇಳುವ ಪರಿಸ್ಥಿತಿಯಲ್ಲಿ ಯಾರೂ ಇರಲಿಲ್ಲ. ನಾವೆಲ್ಲ ಪೊಲೀಸರಿಗೆ ಸಹಕಾರ ನೀಡಿದ್ದೇವೆ ಎಂದು ರಾಘವೇಂದ್ರ ತಿಳಿಸಿದರು.
ಹರ್ಷ ಅವರ ಮೃತದೇಹದ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದೆ. ಶಿವಮೊಗ್ಗ ಶಾಂತಿಗೆ ಹೆಸರುವಾಸಿಯಾದ ನಗರ. ಆದರೆ ಕಲ್ಲು ತೂರಾಟದಿಂದ ಕೆಟ್ಟ ಸಂದೇಶ ಹೋಗಿದೆ. ಇದಕ್ಕೆ ಮೂಲ ಕಾರಣರಾದವರನ್ನು ಬಂಧಿಸಬೇಕು. ಕಾನೂನು ರೀತಿಯಲ್ಲಿ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದರು.