ಜಂಬೂ ಸವಾರಿ ಸಾಗುವ ಮಾರ್ಗದಲ್ಲಿ ಸಿಕ್ಕ ಸಿಕ್ಕ ಕೇಬಲ್ ಕಟ್, ದಿಢೀರ್ ಕಾರ್ಯಾಚರಣೆಯಿಂದ ಜನರಿಗೆ ಸಂಕಷ್ಟ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 9 ಅಕ್ಟೋಬರ್ 2019

Prashanth GPS copy

ಜಂಬೂ ಸವಾರಿ ಸಾಗುವ ಮಾರ್ಗದಲ್ಲಿ ಅಡೆತಡೆ ನಿವಾರಿಸುವ ನೆಪದಲ್ಲಿ ಮಹಾನಗರ ಪಾಲಿಕೆ ಮತ್ತು ಮೆಸ್ಕಾಂ ಸಿಬ್ಬಂದಿಗಳನ್ನು ಒಳಗೊಂಡ ತಂಡ, ಕೇಬಲ್’ಗಳನ್ನು ನಿರ್ದಾಕ್ಷಿಣ್ಯವಾಗಿ ಕಟ್ ಮಾಡಿದ್ದಾರೆ. ಇದರಿಂದ ಜನರು ಸಮಸ್ಯೆ ಎದುರಿಸುವಂತಾಗಿದೆ.

ಜಂಬೂ ಸವಾರಿ ಆಗಮಿಸುವ ಐದು ನಿಮಿಷ ಮೊದಲು ಪಾಲಿಕೆ ಮತ್ತು ಮೆಸ್ಕಾಂ ಸಿಬ್ಬಂದಿಗಳನ್ನು ಒಳಗೊಂಡ ತಂಡ ಕೇಬಲ್’ಗಳನ್ನು ಕಟ್ ಮಾಡುತ್ತ ಸಾಗಿತು. ಟೆಲಿಫೋನ್, ಡಿಶ್ ಮತ್ತು ಇಂಟರ್’ನೆಟ್’ನ ಒಎಫ್’ಸಿ ಕೇಬಲ್’ಗಳಿನ್ನು ತುಂಡು ಮಾಡಲಾಗಿದೆ. ಇದರಿಂದ ಹಲವೆಡೆ ಕೇಬಲ್ ಟಿವಿಗಳು ಬಂದ್ ಆಗಿವೆ. ಇಂಟರ್’ನೆಟ್ ಕೂಡ ಸ್ಥಬ್ಧವಾಗಿದೆ.

ಜಂಬೂ ಸವಾರಿಗಾಗಿ ಒಂದು ವಾರದಿಂದ ತಾಲೀಮು ನಡೆಸಲಾಗುತ್ತಿದೆ. ಈ ವೇಳೆ ಕೇಬಲ್’ಗಳನ್ನು ತೆರವುಗೊಳಿಸುವಂತೆ ಸಂಬಂಧಪಟ್ಟವರಿಗೆ ತಿಳಿಸಿದ್ದರೆ, ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳುತ್ತಿದ್ದರು. ಆದರೆ ಯಾವುದೆ ಮುನ್ಸೂಚನೆ ನೀಡದೆ, ಪಾಲಿಕೆ ಮತ್ತು ಮೆಸ್ಕಾಂ ಸಿಬ್ಬಂದಿಗಳು ದಿಢೀರ್ ಕೇಬಲ್ ಕಟ್ ಮಾಡಿದ್ದರಿಂದ ಕೇಬಲ್ ಮತ್ತು ಇಂಟರ್’ನೆಟ್ ಆಪರೇಟರ್’ಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಜನರು ಕೇಬಲ್ ಮತ್ತು ಇಂಟರ್’ನೆಟ್ ಸೇವೆಯಿಲ್ಲದ ಸಮಸ್ಯೆ ಅನುಭವಿಸುವಂತಾಗಿದೆ.  

ಇನ್ನು, ಈ ಕುರಿತು ಪ್ರತಿಕ್ರಿಯೆ ನೀಡಿರುವ ಪಾಲಿಕೆ ಉಪಮೇಯರ್ ಎಸ್.ಎನ್.ಚನ್ನಬಸಪ್ಪ, ಕೇಬಲ್’ಗಳನ್ನು ಕಟ್ ಮಾಡಿರುವುದು ತಮ್ಮ ಗಮನಕ್ಕೆ ಬಂದಿಲ್ಲ. ಮುಂದೆ ಹೀಗಾಗದಂತೆ ನೋಡಿಕೊಳ್ಳುತ್ತೇವೆ. ಬುಧವಾರವೆ ಕೇಬಲ್’ಗಳ ಮರುಜೋಡಣೆಗೆ ವ್ಯವಸ್ಥೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200

ಸುದ್ದಿಗಾಗಿ ಕರೆ ಮಾಡಿ – 9964634494

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 9, 2019

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment