ಶಿವಮೊಗ್ಗ ಲೈವ್.ಕಾಂ | SHIMOGA NEWS | 15 APRIL 2021
ಆರನೆ ವೇತನ ಆಯೋಗದ ಶಿಫಾರಸಿನಂತೆ ವೇತನ ಪರಿಷ್ಕರಣೆಗೆ ಆಗ್ರಹಿಸಿ ಶಿವಮೊಗ್ಗದಲ್ಲಿ ಕೆಎಸ್ಆರ್ಟಿಸಿ ನೌಕರರು ಮೇಣದ ಬತ್ತಿ ಹಿಡಿದು ಪ್ರತಿಭಟನೆ ನಡೆಸಿದರು.
ಶಿವಮೊಗ್ಗದ ಗೋಪಿ ಸರ್ಕಲ್ನಲ್ಲಿ ಮೇಣದ ಬತ್ತಿ ಹಿಡಿದು ನೌಕರರು ಪ್ರತಿಭಟನೆ ನಡೆಸಿದರು. ತಮ್ಮ ಹಕ್ಕೊತ್ತಾಯಗಳನ್ನು ಸರ್ಕಾರ ಈಡೇರಿಸಬೇಕು ಎಂದು ಆಗ್ರಹಿಸಿದರು.
ಗೂಢಚರ್ಯೆಗೆ ಆರೋಪ, ಆಕ್ರೋಶ
ಕೆಎಸ್ಆರ್ಟಿಸಿಯ ಸಿಬ್ಬಂದಿಯೊಬ್ಬರು ತಮ್ಮ ಪ್ರತಿಭಟನೆಯ ಗೂಢಚರ್ಯೆ ಮಾಡುತ್ತಿದ್ದಾರೆ. ಪ್ರತಿಭಟನಾನಿರತ ನೌಕರರ ಮಾತುಗಳನ್ನು ಮೊಬೈಲ್ನಲ್ಲಿ ರೆಕಾರ್ಡ್ ಮಾಡಿ, ಹಿರಿಯ ಅಧಿಕಾರಿಗಳಿಗೆ ಕಳುಹಿಸುತ್ತಿದ್ದಾರೆ. ಇವರಿಂದಾಗಿ ಹಲವು ನೌಕರರ ವರ್ಗಾವಣೆಯಾಗುತ್ತಿದೆ. ಗೂಢಚರ್ಯೆ ಮಾಡುವ ಅಗತ್ಯವೇನು ಎಂದು ನೌಕರರು ಆಕ್ರೋಶ ವ್ಯಕ್ತಪಡಿಸಿದರು.
ವಕೀಲ ಕೆ.ಪಿ.ಶ್ರೀಪಾಲ್, ದಲಿತ ಸಂಘರ್ಷ ಸಮಿತಿ ಮುಖಂಡ ಗುರುಮೂರ್ತಿ, ಬಂಜಾರ ವಿದ್ಯಾರ್ಥಿ ಸಂಘಟನೆ ಮುಖಂಡ ಗಿರೀಶ್, ಕೆಎಸ್ಆರ್ಟಿಸಿ ನೌಕರರ ಸಂಘದ ಸಂತೋಷ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.
ಪ್ರತಿಭಟನೆಯ ವಿಡಿಯೋ ರಿಪೋರ್ಟ್
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200