| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಶಿವಮೊಗ್ಗ ಲೈವ್.ಕಾಂ | SHIMOGA | 07 ಡಿಸೆಂಬರ್ 2019
ಶಿವಮೊಗ್ಗ ಮಹಾನಗರ ಪಾಲಿಕೆಯ ಹಿಂದಿನ ಕಮಿಷನರ್ ಚಾರುಲತಾ ಸೋಮಲ್ ಅವರು ಸೇವಾ ನ್ಯೂನ್ಯತೆ ಎಸಗಿದ್ದು, 50 ಸಾವಿರ ರೂ. ಪರಿಹಾರ ನೀಡಬೇಕು ಅಂತಾ ಗ್ರಾಹಕ ವ್ಯಾಜ್ಯಗಳ ಪರಿಹಾರ ವೇದಿಕೆ ಆದೇಶ ನೀಡಿದೆ.
ಸೇವಾ ನ್ಯೂನತೆ ಏನು?
ಆಲ್ಕೊಳ ಗ್ರಾಮದ ಬಡಾವಣೆಯಲ್ಲಿರುವ ನಿವಾಸಿ ರಾಜು ಎಂಬುವವರಿಂದ ಕಸ ಸಂಗ್ರಹಕ್ಕಾಗಿ ಪಾಲಿಕೆ ವತಿಯಿಂದ ಹಣ ವಸೂಲಿ ಮಾಡಲಾಗಿದೆ. 2016, 2017ರಲ್ಲಿ ವಾರ್ಷಿಕ 600 ರೂ. ಮತ್ತು 2019ರ ಸಾಲಿಗೆ 1,200 ರೂ. ಹಣ ವಸೂಲಿ ಮಾಡಲಾಗಿದೆ. ಆದರೆ ಪಾಲಿಕೆ ವತಿಯಿಂದ ಕಸವನ್ನು ಮಾತ್ರ ತೆಗೆದುಕೊಂಡು ಹೋಗಿಲ್ಲ.
ಗಮನ ಸೆಳೆದರು ಕ್ರಮವಿಲ್ಲ
ಕಸ ಸಂಗ್ರಹಿಸದ ಕುರಿತು ರಾಜು ಅವರು 2019ರ ಏಪ್ರಿಲ್ 18 ಮತ್ತು ಆಗಸ್ಟ್ 27ರಂದು ಪಾಲಿಕೆ ಕಮಿಷನರ್ ಚಾರುಲತಾ ಸೋಮಲ್ ಅವರ ಗಮನಕ್ಕೆ ತಂದಿದ್ದರು. ಆದರೆ ಈ ಕುರಿತು ಕಮಿಷನರ್ ಅವರು ಯಾವುದೆ ಕ್ರಮ ಕೈಗೊಂಡಿರಲಿಲ್ಲ ಎಂದು ಆರೋಪಿಸಿ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ವೇದಿಕೆಗೆ ರಾಜು ಅವರು ದೂರು ನೀಡಿದ್ದರು.

ವಿಚಾರಣೆಯಲ್ಲಿ ಬೆಳಕಿಗೆ ಬಂತು ಸೇವಾ ನ್ಯೂನ್ಯತೆ
ಪ್ರಕರಣ ದಾಖಲು ಮಾಡಿಕೊಂಡು ವಿಚಾರಣೆ ನಡೆಸಿದ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ವೇದಿಕೆ, ಸೇವೆಯನ್ನು ನೀಡದೆ ಅನಧಿಕೃತವಾಗಿ ಸೇವಾಶುಲ್ಕ ವಸೂಲಿ ಮಾಡಿರುವುದು ಸೇವಾ ನ್ಯೂನ್ಯತೆಯಾಗಿದೆ. ಹಾಗಾಗೆ ಸೇವಾ ನ್ಯೂನ್ಯತೆ ಮತ್ತು ಮಾನಸಿಕ ಹಿಂಸೆಗೆ 50 ಸಾವಿರ ರೂ. ಪರಿಹಾರ ನೀಡಬೇಕು. ಆರು ವಾರದೊಳಗೆ ಪರಿಹಾರದ ಹಣ ನೀಡದಿದ್ದರೆ ಶೇ.10ರಷ್ಟು ಬಡ್ಡಿಯೊಂದಿಗೆ ಹಣ ನೀಡಬೇಕಾಗುತ್ತದೆ ಎಂದು ಆದೇಶ ಹೊರಡಿಸಿದೆ.
ವೇದಿಕೆ ಅಧ್ಯಕ್ಷರಾದ ಸಿ.ಎಂ.ಚಂಚಲ ಮತ್ತು ಸದಸ್ಯೆ ಹೆಚ್.ಮಂಜುಳಾ ತೀರ್ಪು ನೀಡಿದ್ದಾರೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | shivamoggalive@gmail.com
Alkola resident filed a case against Shimoga Mahanagara Palike Commissioner for not collecting waste from his house. Though Palike Collected amount for waste collection. Consumer court fined commissioner for negligence.
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಾಲಿವುಡ್ ನಟರ ಫೋಟೊಗಳಿಗೆ ಚಪ್ಪಲಿ ಏಟು, ಕಾರಣವೇನು?
- ಆಯನೂರು ಸೇರಿ ಹಲವೆಡೆ ಡಿ.17ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಓದಲು ಇಲ್ಲಿ ಕ್ಲಿಕ್ ಮಾಡಿ
- ಅಡಿಕೆ ಧಾರಣೆ | 16 ಡಿಸೆಂಬರ್ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?
- ತಾಳಗುಪ್ಪ – ಬೆಂಗಳೂರು ರೈಲು ಅರಸೀಕೆರೆವರೆಗೆ ಮಾತ್ರ, ಯಶವಂತಪುರ ಎಕ್ಸ್ಪ್ರೆಸ್ಗೆ ಬದಲಿ ಮಾರ್ಗ
- ಶಿವಮೊಗ್ಗದಲ್ಲಿ ಮೂರು ದಿನ ಕಣ್ಣಿನ ಉಚಿತ ತಪಾಸಣೆ, ಎಲ್ಲಿ? ಯಾರೆಲ್ಲ ಭಾಗವಹಿಸಬಹುದು?
- ಶಿವಮೊಗ್ಗದ ಬಸವನಗುಡಿ, ವಿದ್ಯಾನಗರದಲ್ಲಿ ಲೋಕಾಯುಕ್ತ ದಾಳಿ, ದಾಖಲೆಗಳ ಪರಿಶೀಲನೆ
- ಶಿವಮೊಗ್ಗದಲ್ಲಿ 300 ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ, ಇಲ್ಲಿವೆ ಸಾಲು ಸಾಲು ಫೋಟೊಗಳು
- ಇವತ್ತು ಉತ್ತರಾಷಾಢ ನಕ್ಷತ್ರ, ದ್ವಾದಶಿ, ರಾಶಿ ಫಲ ಹೇಗಿದೆ? – ಓದಲು ಇಲ್ಲಿ ಕ್ಲಿಕ್ ಮಾಡಿ
![]()