SHIVAMOGGA LIVE NEWS | 30 OCTOBER 2023
SHIMOGA : ಕುರಿ ಮೇಯಸಿಲು ತೆರಳಿದ್ದಾಗ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಘಟನೆಗೆ ಲೈನ್ ಮ್ಯಾನ್ (Line Man), ಮೇಸ್ತ್ರಿ ಮತ್ತು ಸಹಾಯಕ ಇಂಜಿನಿಯರ್ ನಿರ್ಲಕ್ಷ್ಯವೇ ಕಾರಣ ಎಂದು ಪ್ರಕರಣ ದಾಖಲಾಗಿದೆ.
![]() |
ರಾಗಿಗುಡ್ಡದ ಶಾಂತಿ ನಗರದ ಚಾನಲ್ ಏರಿಯಾ ರಸ್ತೆಯಲ್ಲಿ ಗಿರೀಶ (26) ಎಂಬುವವರಿಗೆ ವಿದ್ಯುತ್ ಶಾಕ್ ಹೊಡೆದಿದೆ. ಗಿರೀಶ ಕುರಿ ಮೇಯಿಸಲು ತೆರಳಿದ್ದರು. 11 ಸಾವಿರ ಕೆ.ವಿ. ವಿದ್ಯುತ್ ಶಕ್ತಿ ಕಂಬದ ತಂತಿ ಪಕ್ಕದಲ್ಲಿಯೇ ಬಿದ್ದಿದ್ದು ಶಾಕ್ ಹೊಡೆದು, ಗಿರೀಶ್ ಮೃತಪಟ್ಟಿದ್ದಾರೆ. ಲೈನ್ ಮ್ಯಾನ್, ಮೇಸ್ತ್ರಿ ಮತ್ತು ಸಹಾಯಕ ಇಂಜಿನಿಯರ್ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಗಿರೀಶ್ ಪತ್ನಿ ಆರೋಪಿಸಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ- ಚಕ್ರಕ್ಕೆ ಸೀರೆ ಸಿಲುಕಿದೆ ಅಂದರು, ಬೈಕ್ ಸ್ಲೋ ಮಾಡ್ತಿದ್ದಂತೆ ಮಹಿಳೆಯರಿಗೆ ಶಾಕ್, 2 ತಿಂಗಳ ಬಳಿಕ ಕೇಸ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200