ಶಿವಮೊಗ್ಗ ಫುಡ್ ಕೋರ್ಟ್’ನಲ್ಲಿ ನೈಟ್ ಕರ್ಫ್ಯೂ ಉಲ್ಲಂಘನೆ, ಒಬ್ಬನ ವಿರುದ್ಧ ಕೇಸ್

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA CRIME NEWS | 14 ಜನವರಿ 2022

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ನೈಟ್ ಕರ್ಫ್ಯೂ ಅದೇಶ ಉಲ್ಲಂಘಿಸಿ, ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪ ಸಂಬಂಧ ಯುವಕನೊಬ್ಬನ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.

AVvXsEjubsOilkhgq8SzYrg6f IdYVyFT33nAzTObPTO7g2mSz1bI1BgniDqmB4x0HK8nFq9AA8jkGiIzpjJBFT6QW sE542jUkz81YOwNkKrn9VhvNWib4U auKCyVAbPTmJGqoC1JFWnN355YeV 7vd8h okX5bUuHGgBqiG1kMPmUapD4rPa2q sp LbzqQ=s926

ಶಶಿಕುಮಾರ್ (26) ಎಂಬಾತನ ವಿರುದ್ಧ ಕರ್ನಾಟಕ ಸಾಂಕ್ರಾಮಿಕ ಕಾಯಿಲೆ ಕಾಯ್ದೆ ಅಡಿ ಕೇಸ್ ದಾಖಲು ಮಾಡಲಾಗಿದೆ.

ಏನಿದು ಪ್ರಕರಣ?

ನೈಟ್ ಕರ್ಫ್ಯೂ ಹಿನ್ನೆಲೆ, ಪೊಲೀಸರು, ರಾತ್ರಿ 10 ಗಂಟೆ ಬಳಿಕ ಶಿವಮೊಗ್ಗದ ಸವಳಂಗ ರಸ್ತೆಯ ಫುಡ್ ಕೋರ್ಟ್ ಬಂದ್ ಮಾಡಿಸುತ್ತಿದ್ದರು. ಈ ಸಂದರ್ಭ ಫುಡ್ ಕೋರ್ಟ್’ನಲ್ಲಿದ್ದ ಶಶಿಕುಮಾರ್, ತಾನು ಊಟ ಮಾಡಬೇಕಿದ್ದು, ಹೊಟೇಲ್’ಗಳನ್ನು ಯಾಕೆ ಬಂದ್ ಮಾಡಿಸುತ್ತಿದ್ದೀರ ಎಂದು ಪ್ರಶ್ನಿಸಿದ್ದಾನೆ. ಅಲ್ಲದೆ ಇಬ್ಬರು ಕಾನ್ಸ್’ಟೇಬಲ್’ಗಳ ಮೇಲೆ ಹಲ್ಲೆ ಮಾಡಿ, ಯುನಿಫಾರಂ ಹರಿದಿದ್ದಾನೆ ಎಂದು ಆರೋಪಿಸಲಾಗಿದೆ.

ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪಿಎಸ್ಐ ಸತೀಶ್ ನಾಯ್ಕ್ ಅವರು, ಶಶಿಕುಮಾರನನ್ನು ವಶಕ್ಕೆ ಪಡೆದಿದ್ದಾರೆ. ಆತನ ವಿರುದ್ದ ಕರ್ನಾಟಕ ಸಾಂಕ್ರಾಮಿಕ ಕಾಯಿಲೆ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಿದ್ದಾರೆ.

ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ABOUT ME DECEMBER REPORT

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment