SHIMOGA : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ನಿರುದ್ಯೋಗಿ (Unemployed) ಯುವಕರಿಗೆ ‘ಯುವನಿಧಿ’ ಅಡಿ ನಿರುದ್ಯೋಗ ಭತ್ಯೆ ಘೋಷಿಸಿರುವುದಕ್ಕೆ ಶಿವಮೊಗ್ಗದಲ್ಲಿ NSUI ಸಂಘಟನೆ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು. ಪಟಾಕಿ ಸಿಡಿಸಿ, ಸಿಹಿ ಹಂಚಿ ಘೋಷಣೆ ಕೂಗಿದರು.
ಶಿವಮೊಗ್ಗ ಮಹಾವೀರ ವೃತ್ತದಲ್ಲಿ ಎನ್.ಎಸ್.ಯು.ಐ ಸಂಘಟನೆ ವತಿಯಿಂದ ಸಂಭ್ರಮಾಚರಣೆ ನಡೆಯಿತು.
ತಾಂಡವವಾಡುತ್ತಿದೆ ನಿರುದ್ಯೋಗ
ಬಿಜೆಪಿ ಸರ್ಕಾರ ಬಂದ ಮೇಲೆ ನಿರುದ್ಯೋಗ ತಾಂಡವವಾಡುತ್ತಿದೆ. ವಿದ್ಯಾವಂತರು ನಿರುದ್ಯೋಗದಿಂದ ಭ್ರಮನಿರಸನಗೊಂಡಿದ್ದಾರೆ. ಅವರಲ್ಲಿ ಭರವಸೆ ಮೂಡಿಸುವ ನಿಟ್ಟಿನಲ್ಲಿ ರಾಹುಲ್ ಗಾಂಧಿ ಅವರು ಯುವನಿಧಿ ಅಡಿ ನಿರುದ್ಯೋಗ ಭತ್ಯೆ ಘೋಷಿಸಿದ್ದಾರೆ. ನಿರುದ್ಯೋಗಿ ಪದವೀಧರರಿಗೆ ಮಾಸಿಕ 3 ಸಾವಿರ, ನಿರುದ್ಯೋಗಿ ಡಿಪ್ಲೊಮಾ ಪದವೀಧರರಿಗೆ ಮಾಸಿಕ 1500 ರೂ.ಗಳ ನಿರುದ್ಯೋಗ ಭತ್ಯೆ ನೀಡಲಾಗುತ್ತದೆ.ಹೆಚ್.ಎಸ್.ಸುಂದರೇಶ್, ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ
ಕಾಂಗ್ರೆಸ್ ಪಕ್ಷ ಈಗಾಗಲೇ ರಾಜ್ಯದ ಜನತೆಗೆ ಮೂರು ಗ್ಯಾರಂಟಿಗಳನ್ನು ನೀಡಿದೆ. ಮನೆಯೊಡತಿಗೆ ಮಾಸಿಕ 2 ಸಾವಿರ ರೂ. ಭತ್ಯೆ, ಪ್ರತಿ ವ್ಯಕ್ತಿಗೆ ತಲಾ 10 ಕೆ.ಜಿ. ಅಕ್ಕಿ, ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವ ಗ್ಯಾರಂಟಿ ನೀಡಿದೆ. ಈಗ ನಾಲ್ಕನೇ ಗ್ಯಾರಂಟಿಯಾಗಿ ನಿರುದ್ಯೋಗಿ (Unemployed) ಪದವೀಧರರಿಗೆ ಮಾಸಿಕ 1500 ಮತ್ತು 3000 ರೂ.ಗಳ ನಿರುದ್ಯೋಗ ಭತ್ಯೆಯ ಗ್ಯಾರಂಟಿ ನೀಡುತ್ತಿದೆ. ಕಾಂಗ್ರೆಸ್ ಎಂದಿಗೂ ಜನಪರ, ಯುವಪರ ಪಕ್ಷವಾಗಿದೆ ಎಂದರು.ಕೆ.ಬಿ.ಪ್ರಸನ್ನ ಕುಮಾರ್, ಮಾಜಿ ಶಾಸಕ
ಕಾಂಗ್ರೆಸ್ ಜನಪರವಾಗಿರುವ ಪಕ್ಷ. ಕಾಂಗ್ರೆಸ್ ಆಡಳಿತ ನಡೆಸಿದಾಗ ಎಂದೂ ಜನವಿರೋಧಿಯಾಗಿ ನಡೆದುಕೊಂಡಿಲ್ಲ. ಈ ಹಿಂದೆ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಬಹುತೇಕ ಭರವಸೆಗಳನ್ನು ಈಡೇರಿಸಿತ್ತು. ಈಗ ನಿರುದ್ಯೋಗಿ ಯುವಕರಿಗೆ ಆಸರೆಯಾಗಲಿ ಯುವನಿಧಿ ಯೋಜನೆಯನ್ನು ಘೋಷಿಸಲಾಗಿದೆ.ಆರ್.ಪ್ರಸನ್ನ ಕುಮಾರ್, ವಿಧಾನ ಪರಿಷತ್ ಮಾಜಿ ಸದಸ್ಯ
ಎನ್.ಎಸ್.ಯು.ಐ ಜಿಲ್ಲಾಧ್ಯಕ್ಷ ವಿಜಯ್ ಕುಮಾರ್, ಕಾಂಗ್ರೆಸ್ ಮುಖಂಡರಾದ ಎನ್.ರಮೇಶ್, ಎಸ್.ಪಿ. ದಿನೇಶ್, ವಿಜಯಕುಮಾರ್, ಜಿ.ಪಲ್ಲವಿ, ವಿಶ್ವನಾಥ್ ಕಾಶಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ದೀಪಕ್ ಸಿಂಗ್, ಕಲೀಮ್ ಪಾಷಾ, ಹರ್ಷಿತ್, ಕಾಟಿಕೆರೆ ರವಿ, ಅಬ್ದುಲ್, ವರುಣ್ ವಿ ಪಂಡಿತ್, ಕುಮಾರ್, ಟೋಫಿಕ್, ಅಭಿ, ಚಂದ್ರ ಜಿ ರಾವ್, ಚರಣ್, ಕೆ.ಚೇತನ್, ಸಿ.ಜಿ. ಮಧುಸೂದನ್ ಸೇರಿದಂತೆ ಹಲವರಿದ್ದರು.
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ