Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ವಿದ್ಯಾನಗರ ಸೇತುವೆ ಸೇರಿ 139 ಕೋಟಿಯ ಕಾಮಗಾರಿ ಉದ್ಘಾಟನೆಗೆ ಡೇಟ್‌ ಫಿಕ್ಸ್‌, ಶಿವಮೊಗ್ಗಕ್ಕೆ ಬರ್ತಿದ್ದಾರೆ ಸೆಂಟ್ರಲ್ ಮಿನಿಸ್ಟರ್

ವಿದ್ಯಾನಗರ ಸೇತುವೆ ಸೇರಿ 139 ಕೋಟಿಯ ಕಾಮಗಾರಿ ಉದ್ಘಾಟನೆಗೆ ಡೇಟ್‌ ಫಿಕ್ಸ್‌, ಶಿವಮೊಗ್ಗಕ್ಕೆ ಬರ್ತಿದ್ದಾರೆ ಸೆಂಟ್ರಲ್ ಮಿನಿಸ್ಟರ್

19/02/2024 5:50 PM
ನಿತಿನ್‌ ಕೈದೊಟ್ಲು

SHIVAMOGGA LIVE NEWS | 19 FEBRUARY 2024

 

» ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಇಲ್ಲಿ ಕ್ಲಿಕ್‌ ಮಾಡಿ

SHIMOGA : ಕೇಂದ್ರ ಭೂ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರು ಫೆ.22ರಂದು ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ. ಅಂದು 139.41 ಕೋಟಿ ರೂ. ವೆಚ್ಚದ ನಾಲ್ಕು ಕಾಮಗಾರಿಗಳ ಉದ್ಘಾಟನೆ, 2138.30 ಕೋಟಿ ರೂ. ವೆಚ್ಚದ 6 ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿ.ವೈ.ರಾಘವೇಂದ್ರ, ನಗರದ ನೆಹರು ಕ್ರೀಡಾಂಗಣದಲ್ಲಿ ಗುರುವಾರ ಮಧ್ಯಾಹ್ನ ಕಾರ್ಯಕ್ರಮ ನಡೆಯಲಿದೆ. ರಾಷ್ಟ್ರೀಯ ಹೆದ್ದಾರಿಯ ದಕ್ಷಿಣ ವಲಯಕ್ಕೆ ಸೇರಿದ ವಿವಿಧ ಜಿಲ್ಲೆಗಳ 18 ಕಾಮಗಾರಿಗಳನ್ನು ನಿತಿನ್‌ ಗಡ್ಕರಿ ಅವರು ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಪೈಕಿ ಶಿವಮೊಗ್ಗ ಜಿಲ್ಲೆಯ 4 ಕಾಮಗಾರಿಗಳ ಉದ್ಘಾಟನೆ, 6 ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ತಿಳಿಸಿದರು.

ಯಾವ್ಯಾವ ಕಾಮಗಾರಿ ಉದ್ಘಾಟನೆಯಾಗಲಿದೆ?

ಕಾಮಗಾರಿ 1 : ಬೈಂದೂರು – ರಾಣೆಬೆನ್ನೂರು ರಸ್ತೆಯ ಮಡೋಡಿ, ಮತ್ತಿಮನೆ, ನಗರ, ಆರೋಡಿ, ಕಾರಣಗಿರಿ, ಮಾವಿನಕೊಪ್ಪ, ಬ್ರಹ್ಮೇಶ್ವರ ಬಳಿ 19.77 ಕೋಟಿ ರೂ. ವೆಚ್ಚದ 7 ಕಿರು ಸೇತುವೆಗಳು.

ಕಾಮಗಾರಿ 2 : ಶಿವಮೊಗ್ಗ ವಿದ್ಯಾನಗರದಲ್ಲಿ 43.90 ಕೋಟಿ ರೂ. ವೆಚ್ಚದ ರೈಲ್ವೆ ಮೇಲ್ಸೇತುವೆ.

ಕಾಮಗಾರಿ 3 : ಶಿವಮೊಗ್ಗ ಬೈಪಾಸ್‌ ರಸ್ತೆಯಲ್ಲಿ ತುಂಗಾ ನದಿಗೆ ಅಡ್ಡಲಾಗಿ 20.12 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ನೂತನ ಸೇತುವೆ.

ಕಾಮಗಾರಿ 4 : ತೀರ್ಥಹಳ್ಳಿಯಲ್ಲಿ 55.62 ಕೋಟಿ ರೂ. ವೆಚ್ಚದಲ್ಲಿ ತುಂಗಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆ, ಬೈಪಾಸ್‌ ರಸ್ತೆ

vidyanagara bridge

ಯಾವೆಲ್ಲ ಕಾಮಗಾರಿ ಶಂಕುಸ್ಥಾಪನೆಯಾಗಲಿದೆ?

ಶಂಕುಸ್ಥಾಪನೆ 1 : ಹೊಸನಗರದ ಮಾವಿನಕೊಪ್ಪದಿಂದ ಆಡುಗೋಡಿವರೆಗೆ 313.56 ಕೋಟಿ ರೂ. ವೆಚ್ಚದಲ್ಲಿ 13.80 ಕಿ.ಮೀ ಬೈಪಾಸ್‌ ರಸ್ತೆ, ಬೆಕ್ಕೋಡಿ, ಹೊಸನಗರ ಬಳಿ ಸೇತುವೆಗಳು.

ಶಂಕುಸ್ಥಾಪನೆ 2 : ಶಿವಮೊಗ್ಗದ ಸಿಂಹಧಾಮದಿಂದ ಆನಂದಪುರದವರೆಗೆ 653 ಕೋಟಿ ರೂ. ವೆಚ್ಚದಲ್ಲಿ 4 ಪಥದ ರಸ್ತೆ ನಿರ್ಮಾಣ. ಕುಂಸಿ ಮತ್ತು ಯಡೇಹಳ್ಳಿ ರೈಲ್ವೆ ಮೇಲ್ಸೇತುವೆ. ಕುಂಸಿ, ಚೋರಡಿ, ಕೋಣೆಹೊಸೂರು, ಯಡೇಹಳ್ಳಿ, ಆನಂದಪುರ ಬೈಪಾಸ್‌ ರಸ್ತೆ ಸೇರಲಿದೆ.

ಶಂಕುಸ್ಥಾಪನೆ 3 : ಹೊಸೂರು ಮತ್ತು ತಾಳಗುಪ್ಪ ಬಳಿ 198.58 ಕೋಟಿ ರೂ. ವೆಚ್ಚದಲ್ಲಿ ರೈಲ್ವೆ ಮೇಲ್ಸೇತುವೆ ಮತ್ತು ಬೈಪಾಸ್‌ ರಸ್ತೆ ನಿರ್ಮಾಣ.

ಶಂಕುಸ್ಥಾಪನೆ 4 : ಶಿವಮೊಗ್ಗದ ಸಂದೇಶ್‌ ಮೋಟರ್ಸ್‌ನಿಂದ ಹರಕೆರೆವರೆಗೆ 39.50 ಕೋಟಿ ರೂ. ವೆಚ್ಚದಲ್ಲಿ 4 ಪಥದ ರಸ್ತೆ ನಿರ್ಮಾಣ.

BY Raghavendra Visits to Nehru Stadium

ಇದನ್ನೂ ಓದಿ – ಸರ್ಕಾರಿ ನೌಕರರ ಸಮ್ಮೇಳನಕ್ಕೆ ಶಿವಮೊಗ್ಗದಿಂದ 100 ಬಸ್, 3 ಬೇಡಿಕೆ ಸಲ್ಲಿಸಲು ಪ್ಲಾನ್, ಏನೇನು ಬೇಡಿಕೆ?

ಶಂಕುಸ್ಥಾಪನೆ 5 : ಬೈಂದೂರಿನಿಂದ ನಾಗೋಡಿವರೆಗೆ 394.95 ಕೋಟಿ ರೂ. ವೆಚ್ಚದಲ್ಲಿ ದ್ವಿಪಥದ ರಸ್ತೆ ನಿರ್ಮಾಣ.

ಶಂಕುಸ್ಥಾಪನೆ 6 : ತೀರ್ಥಹಳ್ಳಿಯ ನೆಲ್ಲಿಸರದಿಂದ ತೀರ್ಥಹಳ್ಳಿ ಪಟ್ಟಣದವರೆಗೆ 538.71 ಕೋಟಿ ರೂ. ವೆಚ್ಚದಲ್ಲಿ ನಾಲ್ಕು ಪಥದ ರಸ್ತೆ ನಿರ್ಮಾಣ.

ಕಾರ್ಯಕ್ರಮದ ಸ್ಥಳ ಪರಿಶೀಲನೆ

ಸುದ್ದಿಗೋಷ್ಠಿ ಬಳಿಕ ನೆಹರು ಕ್ರೀಡಾಂಗಣಕ್ಕೆ ತೆರಳಿದ ಸಂಸದ ಬಿ.ವೈ.ರಾಘವೇಂದ್ರ ಕಾರ್ಯಕ್ರಮದ ಸ್ಥಳ ಪರಿಶೀಲನೆ ನಡೆಸಿದರು. ಸಿದ್ಧತೆಗಳ ಕುರಿತು ಅಧಿಕಾರಿಗಳು ಮತ್ತು ಬಿಜೆಪಿ ಮುಖಂಡರ ಜೊತೆಗೆ ಚರ್ಚೆ ನಡೆಸಿದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ದೀನದಯಾಳು, ಶಿವರಾಜ್‌, ವಿನ್ಸಟ್‌ ರೊಡ್ರಿಗಸ್‌, ಮೋಹನ್‌ ರೆಡ್ಡಿ, ಮಂಜುನಾಥ್‌ ನವುಲೆ, ಕೆ.ವಿ.ಅಣ್ಣಪ್ಪ, ಚಂದ್ರಶೇಖರ್‌ ಸೇರಿದಂತೆ ಹಲವರು ಇದ್ದರು.‌

ಇದನ್ನೂ ಓದಿ – ಎಲ್ಲ ತಾಲೂಕಿನಲ್ಲೂ ಲೋಕಾಯುಕ್ತ ಸಭೆ, ಯಾವ್ಯಾವ ದಿನ? ಎಲ್ಲಿ ಸಭೆ ನಡೆಯುತ್ತೆ? ಏನೇನು ದೂರು ಸಲ್ಲಿಸಬಹುದು?

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article Online-Fraud-In-Shimoga ಖರೀದಿಸಿದ್ದು ಎರಡು ಜೀನ್ಸ್‌ ಪ್ಯಾಂಟ್‌, ಅಕೌಂಟ್‌ನಿಂದ ಖಾಲಿ ಆಗಿದ್ದು ಮೂರೂವರೆ ಲಕ್ಷ ರೂ., ಏನಿದು ಕೇಸ್‌?
Next Article ADIKE-RATE-SHIVAMOGGA-LIVE-NEWS ಅಡಿಕೆ ಧಾರಣೆ | 19 ಫೆಬ್ರವರಿ 2024 | ಶಿವಮೊಗ್ಗ ಮಾರುಕಟ್ಟೆಯಲ್ಲಿ ಇವತ್ತು ಎಷ್ಟಿದೆ ಅಡಿಕೆ ರೇಟ್?

ಇದನ್ನೂ ಓದಿ

140525 JNNCE engineering college in Shimoga
COLLEGE NEWSSHIVAMOGGA CITY

ಶಿವಮೊಗ್ಗದ JNN ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಮ್ಯಾನೇಜ್ಮೆಂಟ್‌ ಕೋಟಾದ ಸೀಟುಗಳು ಲಭ್ಯ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
14/05/2025
140525 SLV Book House Sharavathi Nagara in Shimoga city
SHIVAMOGGA CITY

ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
14/05/2025
130525 CS Shadakshari Press meet in shimoga
SHIVAMOGGA CITY

ಶಿವಮೊಗ್ಗದಲ್ಲಿ ಮೂರು ದಿನ ರಾಜ್ಯಮಟ್ಟದ ಸ್ಪರ್ಧೆಗಳು, ಭಾಗವಹಿಸ್ತಿದ್ದಾರೆ ಸಾವಿರ ಸಾವಿರ ಸರ್ಕಾರಿ ನೌಕರರು, ಹೇಗಿದೆ ವ್ಯವಸ್ಥೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
13/05/2025
BJP-President-BY-Vijayendra-Press-meet-in-shimoga.
POLITICSSHIVAMOGGA CITY

ಬಿಜೆಪಿಯಿಂದ ರಾಜ್ಯಾದ್ಯಂತ ತಿರಂಗ ಯಾತ್ರೆ, ಏನಿದು ಯಾತ್ರೆ? ಎಲ್ಲೆಲ್ಲಿ ಯಾವಾಗ ನಡೆಯುತ್ತೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
13/05/2025
120525-SN-Channabasappa-visits-kote-police-station.webp
CRIME DIARYSHIVAMOGGA CITY

ಶಿವಮೊಗ್ಗದಲ್ಲಿ ಪಾಕಿಸ್ತಾನದ ಪರ ವಾಟ್ಸಪ್ ಸ್ಟೇಟಸ್, ಬಿಜೆಪಿ ಆಕ್ರೋಶ, ಎಂಎಲ್‌ಎ ಗರಂ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/05/2025
Rambapuri-Swamiji-at-mandli-in-Shimoga-city
SHIVAMOGGA CITY

ಶಿವಮೊಗ್ಗದ ಮಂಡ್ಲಿ ದೇವಸ್ಥಾನಕ್ಕೆ ರಂಭಾಪುರ ಶ್ರೀ ಭೂಮಿ ಪೂಜೆ, ಏನೆಲ್ಲ ಆಶೀರ್ವಚನ ನೀಡಿದರು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/05/2025
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?