SHIVAMOGGA LIVE NEWS | 19 JANUARY 2023
SHIMOGA | ರೈತರಿಗೆ ಪರಿಹಾರ ನೀಡಲು ವಿಳಂಬ ಮಾಡಿದ ತುಂಗಾ ಮೇಲ್ದಂಡೆ ಯೋಜನೆಯ ವಿಶೇಷ ಭೂ ಸ್ವಾಧೀನಾಧಿಕಾರಿ ಕಚೇರಿಯ ಕಂಪ್ಯೂಟರ್, ಪೀಠೋಪಕರಣಗಳನ್ನು ಜಪ್ತಿ (Seize) ಮಾಡಲಾಗಿದೆ. ನ್ಯಾಯಾಲಯದ ಆದೇಶದ ಹಿನ್ನೆಲೆ ಜಪ್ತಿ ಕಾರ್ಯ ನಡೆಸಲಾಯಿತು.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:

ಶಿವಮೊಗ್ಗ ತಾಲೂಕು ಕಚೇರಿ ಕಟ್ಟಡದಲ್ಲಿ ತುಂಗಾ ಮೇಲ್ದಂಡೆ ಯೋಜನೆಯ ವಿಶೇಷ ಭೂ ಸ್ವಾಧೀನಾಧಿಕಾರಿ ಕಚೇರಿ ಇದೆ. ಇಲ್ಲಿನ 5 ಕುರ್ಚಿ, 5 ಕಂಪ್ಯೂಟರ್, 2 ಟೇಬಲ್ ಜಪ್ತಿ (Seize) ಮಾಡಲಾಗಿದೆ.
ಜಪ್ತಿಗೆ ಕಾರಣವೇನು?
ತುಂಗಾ ಮೇಲ್ದಂಡೆ ಯೋಜನೆಗಾಗಿ 1997ರಲ್ಲಿ ರೈತರಿಂದ ಜಮೀನು ಪಡೆಯಲಾಗಿತ್ತು. ಎಕರೆಗೆ 3 ಲಕ್ಷ ರೂ. ನೀಡುವುದಾಗಿ ಆಗ ತಿಳಿಸಲಾಗಿತ್ತು. ಆದರೆ ಹಲವು ರೈತರಿಗೆ ಪರಿಹಾರ ನೀಡಿಲ್ಲ. ಗಾಡಿಕೊಪ್ಪದ ವೆಂಕಟೇಶ್ ಅವರು ಸರ್ವೆ ನಂಬರ್ 75ರಲ್ಲಿ 5 ಎಕರೆ ಜಮೀನನ್ನು ಯೋಜನೆಗಾಗಿ ಬಿಟ್ಟು ಕೊಟ್ಟಿದ್ದರು.
‘ನೀರಾವರಿ ಇಲಾಖೆ ಅರ್ಧದಷ್ಟು ಜನರಿಗೆ ಪರಿಹಾರ ನೀಡಿಲ್ಲ. ಪರಿಹಾರ ವಿಳಂಬ ಮಾಡಿದ್ದರಿಂದ ಹೊಸ ದರದಂತೆ ಪರಿಹಾರ ನೀಡಬೇಕು ಎಂದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದೆವು. ಹೆಚ್ಚಿನ ಪರಿಹಾರ ನೀಡಬೇಕು ಎಂದು ನ್ಯಾಯಾಲಯ ಆದೇಶಿಸಿದ್ದರೂ ಅಧಿಕಾರಿಗಳು ವಿಳಂಬ ಮಾಡಿದ್ದಾರೆ’ ಎಂದು ಗಾಡಿಕೊಪ್ಪದ ವೆಂಕಟೇಶ್ ಅವರು ಆರೋಪಿಸಿದರು.

ಹೈಕೋರ್ಟಿಗೆ ಮೇಲ್ಮನವಿ
‘ವೆಂಕಟೇಶ್ ಅವರ ಪ್ರಕರಣದಲ್ಲಿ ಪ್ರತಿ ಚದರ ಅಡಿಗೆ 105 ರೂ. ನಂತೆ ಒಟ್ಟು 2.40 ಕೋಟಿ ರೂ. ಪರಿಹಾರ ನೀಡುವಂತೆ ಜಪ್ತಿ ಆದೇಶದಲ್ಲಿ ತಿಳಿಸಲಾಗಿದೆ. ಈ ಮೊತ್ತ ಹೆಚ್ಚಾಗಿದೆ ಎಂದು ಕಚೇರಿಯಿಂದ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಾಗಿದೆ. ತಡೆಯಾಜ್ಞೆ ಪ್ರತಿ ಸಿಕ್ಕಿಲ್ಲ. ನೀರಾವರಿ ನಿಗಮ ಹಣ ಬಿಡುಗಡೆ ಮಾಡಿದಲ್ಲಿ ಅದನ್ನು ನ್ಯಾಯಾಲಯಕ್ಕೆ ಜಮೆ ಮಾಡಲಿದ್ದೇವೆ’ ಎಂದು ವಿಶೇಷ ಭೂಸ್ವಾಧೀನಾಧಿಕಾರಿ ಕಚೇರಿಯ ಉಸ್ತುವಾರಿ ವ್ಯವಸ್ಥಾಪಕ ಸತೀಶ್ ತಿಳಿಸಿದರು.

ಪರಿಹಾರ ವಿತರಣೆ ವಿಳಂಬ ಮಾಡಿದರಿಂದ ಪೀಠೋಪಕರಣ, ಕಂಪ್ಯೂಟರ್ ಗಳ ಜಪ್ತಿಗೆ ನ್ಯಾಯಾಲಯ ಆದೇಶಿಸಿತ್ತು. ನ್ಯಾಯಾಲಯದ ಅಧಿಕಾರಿಗಳು ತುಂಗಾ ಮೇಲ್ದಂಡೆ ಯೋಜನೆ ಭೂ ಸ್ವಾಧೀನಾಧಿಕಾರಿಗಳ ಕಚೇರಿಯ ಪೀಠೋಪಕರಣ, ಕಂಪ್ಯೂಟರ್ ಗಳನ್ನು ವಶಕ್ಕೆ ಪಡೆದರು.
ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಯ ದಿನಾಂಕ ಫೈನಲ್, ಕಾಮಗಾರಿ ಪರಿಶೀಲಿಸಿದ ಮಾಜಿ ಸಿಎಂ
LATEST NEWS
- ರಾಜ್ಯವನ್ನೇ ಬೆಚ್ಚಿಬೀಳಿಸಿದ ಶಿವಮೊಗ್ಗದ ಡ್ರೈವರ್, 19 ಅಕೌಂಟ್, 25 ATM ಕಾರ್ಡ್, ₹55 ಕೋಟಿ ನಷ್ಟ, ಏನಿದು ಕೇಸ್?

- ಭದ್ರಾವತಿಯಲ್ಲಿ ಸಬ್ ಇನ್ಸ್ಪೆಕ್ಟರ್ಗಳ ಕಾಲಿನ ಮೂಳೆ, ಕೈ ಬೆರಳು ಕಟ್, ಆರೋಪಿ ಕಾಲಿಗೆ ಗುಂಡೇಟು

- ಶಿವಮೊಗ್ಗ ಜಿಲ್ಲೆಯಲ್ಲಿ ಮೈ ಸುಡುವ ಬಿಸಿಲಿನ ಜೊತೆಗೆ ಮೈ ನಡುಗಿಸುವ ಚಳಿ, ಇವತ್ತಿನ ಹವಾಮಾನ ವರದಿ

- ಶಿವಮೊಗ್ಗ ತಾಲೂಕಿನ ಹಲವೆಡೆ ಫೆಬ್ರವರಿ 8, 9 ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ನಂಜಪ್ಪ ಆಸ್ಪತ್ರೆಯಲ್ಲಿ ನಡುರಾತ್ರಿ ಚಿರತೆಗೆ ಸ್ಕ್ಯಾನಿಂಗ್, ಏನಿದು? ಹೇಗೆ ನಡೆಯಿತು ಪ್ರಕ್ರಿಯೆ?

About The Editor
ನಿತಿನ್ ಆರ್.ಕೈದೊಟ್ಲು

CLICK HERE TO JOIN SHIVAMOGGA LIVE WHATSAPP GROUP



