SHIVAMOGGA LIVE NEWS | 31 AUGUST 2023
SHIMOGA : ಫೇಸ್ಬುಕ್ನಲ್ಲಿ (Facebook) ಮಹಿಳೆಗೆ ಅವಹೇಳನ ಮಾಡಿದ ಆರೋಪ ಸಂಬಂಧ ಪ್ರಕರಣ ದಾಖಲಾಗಿರುವ ಹಿನ್ನೆಲೆ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ (Chakravarthi Sulibele) ವಿನೋಬನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದರು. ಈ ವೇಳೆ ಹಿಂದೂ ಪರ ಸಂಘಟನೆ ಕಾರ್ಯಕರ್ತರು ಠಾಣೆ ಮುಂದೆ ಜಮಾಯಿಸಿ ಘೋಷಣೆ ಕೂಗಿದರು.
ಬುಧವಾರ ರಾತ್ರಿ ಶಾಸಕ ಎಸ್.ಎನ್.ಚನ್ನಬಸಪ್ಪ ಅವರೊಂದಿಗೆ ಚಕ್ರವರ್ತಿ ಸೂಲಿಬೆಲೆ ವಿನೋಬನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದರು. ಕಾಂಗ್ರೆಸ್ ಕಾರ್ಯಕರ್ತೆ ಸೌಗಂಧಿಕ ದಾಖಲಿಸಿರುವ ದೂರಿನ ಸಂಬಂಧ ಹೇಳಿಕೆ ನೀಡಿದರು.
ಠಾಣೆ ಮುಂದೆ ಕಾರ್ಯಕರ್ತರ ದಂಡು
ಠಾಣೆಗೆ ತೆರಳಿದ ಚಕ್ರವರ್ತಿ ಸೂಲಿಬೆಲೆ ಅವರೊಂದಿಗೆ ವಿವಿಧ ಹಿಂದೂ ಪರ ಸಂಘಟನೆ ಕಾರ್ಯಕರ್ತರು ಆಗಮಿಸಿದ್ದರು. ಠಾಣೆ ಹೊರಗೆ ಜಮಾಯಿಸಿದ ಕಾರ್ಯಕರ್ತರು ರಾಜ್ಯ ಸರ್ಕಾರ, ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸುಳ್ಳು ದೂರು ದಾಖಲು ಮಾಡಿರುವುದಾಗಿ ಆರೋಪಿಸಿ ಘೋಷಣೆ ಕೂಗಿದರು.
ಇದನ್ನೂ ಓದಿ – ಚಕ್ರವರ್ತಿ ಸೂಲಿಬೆಲೆ ವಿರುದ್ಧ ಶಿವಮೊಗ್ಗದಲ್ಲಿ ಮಹಿಳೆಯಿಂದ ಠಾಣೆಗೆ ದೂರು | 3 ಫಟಾಫಟ್ ನ್ಯೂಸ್
ಯಾರೆಲ್ಲ ಏನೇನು ಹೇಳಿದರು?
ಮಾಧ್ಯಮಗಳ ಜೊತೆ ಮಾತಾಡಿದ ಚಕ್ರವರ್ತಿ ಸೂಲಿಬೆಲೆ, ಇಂತಹ ಬೆದರಿಕೆಗಳಿಗೆ ಜಗ್ಗುವುದು ಇಲ್ಲ. ಬಗ್ಗುವುದು ಇಲ್ಲ. ಇದು ದೂರು ದಾಖಲಿಸಿಕೊಳ್ಳುವ ಸಂಗತಿಯೇ ಅಲ್ಲ. ಪ್ರಿಯಾಂಕ್ ಖರ್ಗೆ ಅವರು ಠಾಣೆ ಮೆಟ್ಟಿಲು ಹತ್ತಿಸುತ್ತೇನೆ ಎಂದಿದ್ದರು. ಸುಳ್ಳು ದೂರು ಕೊಡಿಸಿ ಠಾಣೆ ಮೆಟ್ಟಿಲು ಹತ್ತಿಸಿದ್ದಾರೆ. ದೂರಿಗೆ ನನ್ನ ಹೇಳಿಕೆಯನ್ನು ದಾಖಲಿಸಿದ್ದೇನೆ ಎಂದರು.
ಶಾಸಕ ಎಸ್.ಎನ್.ಚನ್ನಬಸಪ್ಪ ಮಾತನಾಡಿ, ಚಕ್ರವರ್ತಿ ಸೂಲಿಬೆಲೆ ಅವರಿಗೆ ನೊಟೀಸ್ ಜಾರಿ ಮಾಡಿದ್ದರು. ಈ ಹಿನ್ನೆಲೆ ಠಾಣೆಗೆ ಭೇಟಿ ನೀಡಿ ಹೇಳಿಕೆ ನೀಡಿದ್ದಾರೆ. ಇದರಿಂದ ರಾಷ್ಟ್ರಭಕ್ತ ಚಕ್ರವರ್ತಿ ಸೂಲಿಬೆಲೆ ಅವರಿಗೆ ಯಾವುದೆ ಅಪಮಾನವಾಗಿಲ್ಲ. ಅದರೆ ರಾಜ್ಯ ಸರ್ಕಾರಕ್ಕೆ ಅಪಮಾನವಾಗಿದೆ. ಉರಿ ಎಂಬ ಪದವನ್ನು ಇಷ್ಟು ದೊಡ್ಡ ವಿಷಯ ಮಾಡಿಕೊಂಡಿದ್ದಾರೆ. ಕಾಂಗ್ರೆಸಿಗರು ಉರ್ಕೊಳ್ಳೋದು ಬೇಡ. ಇದು ಆಡು ಭಾಷೆ ಎಂದರು.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲೆಲ್ಲಿ ಏನೇನಾಯ್ತು? – TOP 10 NEWS | ಓದಲು ಇಲ್ಲಿ ಕ್ಲಿಕ್ ಮಾಡಿ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200