ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಜೂನ್ 2020
ನಡು ರಸ್ತೆಯಲ್ಲಿ ಚೀನಾ ಅಧ್ಯಕ್ಷ ಕ್ಸಿ ಜಿಂಗ್ ಪಿಂಗ್ ಪ್ರತಿಕೃತಿಯನ್ನು ಗಲ್ಲಿಗೇರಿಸಿ ಯುವ ಕಾಂಗ್ರೆಸಿಗರು ಇವತ್ತು ವಿಭಿನ್ನವಾಗಿ ಪ್ರತಿಭಟನೆ ನಡೆಸಿದ್ದಾರೆ. ಶಿವಮೊಗ್ಗದ ಶಿವಪ್ಪನಾಯಕ ಪ್ರತಿಮೆ ಮುಂಭಾಗ ವಿಭಿನ್ನವಾಗಿ ಪ್ರತಿಭಟನೆ ಮಾಡಲಾಯಿತು.
ಕರೋನ ವೈರಸ್ನಿಂದಾಗಿ ಜಗತ್ತಿನಲ್ಲಿ ಆತಂಕ ಸೃಷ್ಟಿಸಿರುವ ಚೀನಾ, ಈಗ ಕುತಂತ್ರದಿಂದ ಭಾರತೀಯ ಯೋಧರನ್ನು ಹತ್ಯೆ ಮಾಡಿದೆ. ಇದು ಚೀನಾದ ನೀಚ ಬುದ್ದಿಯನ್ನು ತೋರಿಸಿತ್ತದೆ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಪ್ರಧಾನಿ ಮೋದಿ ವಿರುದ್ಧವು ಆಕ್ರೋಶ
ಚೀನಾದ ಸೈನಿಕರು ಭಾರತದ ಗಡಿಯೊಳಗೆ ನುಸುಳಿದ್ದರು. ನಮ್ಮ ಯೋಧರನ್ನು ಹತ್ಯೆ ಮಾಡಿದ್ದರು. ಎರಡು ದಿನವಾದರೂ ಪ್ರಧಾನಿ ನರೇಂದ್ರ ಮೋದಿ ಈ ವಿಚಾರವಾಗಿ ಮಾತನಾಡದೆ ಮೌನಕ್ಕೆ ಶರಣಾಗಿದ್ದರು. ಈ ಕೂಡಲೆ ಮೌನ ಬಿಟ್ಟು ಚೀನಾದ ಮೇಲೆ ಯುದ್ಧ ಸಾರಬೇಕು ಎಂದು ಒತ್ತಾಯಿಸಿದರು.
ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಹೆಚ್.ಸಿ.ಯೋಗೇಶ್, ಕಾರ್ಪೊರೇಟರ್ ರೇಖಾ ರಂಗನಾಥ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ರಂಗನಾಥ್, ಕೆಪಿಸಿಸಿ ಕಾರ್ಯದರ್ಶಿ ದೇವೇಂದ್ರಪ್ಪ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪ್ರವೀಣ್, ನಗರಾಧ್ಯಕ್ಷ ಗಿರೀಶ್, ಕಿರಣ್, ಶರವಣ, ರಂಜಿತ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200