ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA, 1 AUGUST 2024 : ಅಪಾಯದ ಸ್ಥಿತಿಯಲ್ಲಿರುವ ಮರಗಳ (tree) ರೆಂಬೆ, ಕೊಂಬೆಗಳನ್ನು ಶೀಘ್ರ ತೆರವು ಮಾಡಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅರಣ್ಯ ಇಲಾಖೆ, ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಬಿರುಗಾಳಿ, ಮಳೆಗೆ ದುರ್ಬಲ ಮರಗಳು ಬಿದ್ದು ಪ್ರಾಣ ಹಾನಿ ಉಂಟಾಗಬಹುದು. ಈ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬಂದಿವೆ. ದೈತ್ಯ ಮತ್ತು ದುರ್ಬಲ ಮರಗಳ ಸ್ಥಿತಿ ಗಮನಿಸಿ, ಕೂಡಲೇ ಕ್ರಮ ಕೈಗೊಳ್ಳಬೇಕು. ಈಗಾಗಲೇ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 112 ಮರಗಳು ಹಾಗೂ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ 1200 ಮರಗಳನ್ನು ಗುರುತಿಸಲಾಗಿದೆ. ಅವುಗಳ ಕುರಿತ ಕೂಡಲೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಮರಗಳು ದುರ್ಬಲಗೊಂಡಿದ್ದರೆ ಅವಳನ್ನು ತೆರವು ಮಾಡುವ ಮೊದಲು ಸ್ಥಳೀಯ ಜನಪ್ರತಿನಿಧಿಗಳ ಜೊತೆಗೆ ಚರ್ಚೆ ನಡೆಸಬೇಕು.ಗುರುದತ್ತ ಹೆಗಡೆ, ಜಿಲ್ಲಾಧಿಕಾರಿ
ಮಹಾನಗರ ಪಾಲಿಕೆ ಆಯುಕ್ತೆ ಕವಿತಾ ಯೋಗಪ್ಪನವರ್ ಸೇರಿದಂತೆ ಅರಣ್ಯಾಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ ⇓
ನಮ್ಮೂರ ಹೆಮ್ಮೆ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ, ಹೆಸರು ನೋಂದಣಿಗೆ ಮನವಿ
LATEST NEWS
- ಭದ್ರಾವತಿಯ ತರೀಕೆರೆ ರಸ್ತೆಯಲ್ಲಿ ಅಗ್ನಿ ಅವಘಡ, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಆಹುತಿ

- ಕಲ್ಲು ಬಂಡೆ ಬಿದ್ದು ಕೃಷಿಕ ಸ್ಥಳದಲ್ಲೇ ಸಾವು

- ಹೆಗಲತ್ತಿಯಲ್ಲಿ ನಾಗಯಕ್ಷೆ ದೇವಾಲಯದ 12ನೇ ವಾರ್ಷಿಕೋತ್ಸವ, ಇವತ್ತು ಪಲ್ಲಕ್ಕಿ ಉತ್ಸವ

- ಶಿವಮೊಗ್ಗ ಜಿಲ್ಲೆಯಲ್ಲಿ ರಣ ಬಿಸಿಲು, ತಾಪಮಾನ ಹೆಚ್ಚಳ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ಉಷ್ಣಾಂಶ?

- ತುಂಗಾ ಚಾನಲ್ ಬಳಿ ಸ್ಕೂಟಿ ನಿಲ್ಲಿಸಿಕೊಂಡಿದ್ದವರ ಮೇಲೆ ಪೊಲೀಸ್ ದಾಳಿ, ಒಬ್ಬ ಎಸ್ಕೇಪ್, ಮತ್ತೊಬ್ಬ ಅರೆಸ್ಟ್

About The Editor
ನಿತಿನ್ ಆರ್.ಕೈದೊಟ್ಲು





