ಶಿವಮೊಗ್ಗ ದಸರಾಗೆ ತಾರಾ ಮೆರಗು, ನಟಿ ಉಮಾಶ್ರೀ, ಭೀಮಾ ಖ್ಯಾತಿಯ ಪ್ರಿಯಾ ಕಣ್ತುಂಬಿಕೊಂಡ ಜನ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

DASARA NEWS, 4 OCTOBER 2024 : ಶಿವಮೊಗ್ಗ ದಸರಾದಲ್ಲಿ ಇವತ್ತು ಚಲನಚಿತ್ರ (Cinema) ದಸರಾಗೆ ಚಾಲನೆ ಸಿಕ್ಕಿದೆ. ನಟಿ, ಮಾಜಿ ಸಚಿವೆ ಉಮಾಶ್ರೀ ಕಾರ್ಯಕ್ರಮ ಉದ್ಘಾಟಿಸಿದರು. ಭೀಮಾ ಸಿನಿಮಾ ಖ್ಯಾತಿಯ ನಟಿ ಪ್ರಿಯಾ ಶಠಮರ್ಷಣ್‌ ಕಾರ್ಯಕ್ರಮದ ಹೈಲೈಟ್‌ ಆಗಿದ್ದರು.

ಡಾ. ಅಂಬೇಡ್ಕರ್‌ ಭವನದಲ್ಲಿ ದಸರಾ ಚಲನಚಿತ್ರೋತ್ಸವಕ್ಕೆ ಚಾಲನೆ ನೀಡಲಾಯಿತು. ನಾಯಕ ನಟ, ರಂಗಭೂಮಿ ಕಲಾವಿದ ಅವಿನಾಶ್‌ ಶಠಮರ್ಷಣ್‌, ಚಲನಚಿತ್ರ ಸಾಹಿತಿ ಡಾ. ವಿ.ನಾಗೇಂದ್ರ ಪ್ರಸಾದ್‌ ಅವರು ಭಾಗವಹಿಸಿದ್ದರು.

ಯಾರೆಲ್ಲ ಏನೇನು ಹೇಳಿದರು?

» ಉಮಾಶ್ರೀ, ನಟಿ, ಮಾಜಿ ಸಚಿವೆ

ಶಿಕ್ಷಣ ಮತ್ತು ಸಾಮಾಜಿಕವಾಗಿ ಶಿವಮೊಗ್ಗದ ಜನರು ವಿಶೇಷ ಮನಸ್ಥಿತಿ ಹೊಂದಿದ್ದಾರೆ. ಚಿತ್ರಮಂದಿರಗಳಲ್ಲಿ ಸಿನಿಮಾ ವೀಕ್ಷಿಸುವ ಅನುಭವ ಬೇರೆ. ಮನೆಯಲ್ಲಿ ಶಿಳ್ಳೆ, ಚಪ್ಪಾಳೆ ಬೀಳುವುದಿಲ್ಲ. ಹಾಗಾಗಿ ಚಿತ್ರಮಂದಿರಗಳಲ್ಲಿ ಸಿನಿಮಾ ನೋಡುವಂತಾಗಬೇಕು. ಉತ್ತಮ ಚಿತ್ರಗಳನ್ನು ನೀಡಿದರೆ ಪ್ರೇಕ್ಷಕರು ಖಂಡಿತ ವೀಕ್ಷಿಸುತ್ತಾರೆ. ಕನ್ನಡದ ಮಕ್ಕಳಿಗೆ ರಂಗಭೂಮಿ, ಕನ್ನಡ ಸಿನಿಮಾ ವೀಕ್ಷಿಸುವಂತೆ ಮಾಡಬೇಕು. ಬರಿ ನೆಟ್‌ಫ್ಲಿಕ್ಸ್, ಅಮೇಜಾನ್ ಪ್ರೈಮ್‌ನಲ್ಲಿ ಪರ ಭಾಷೆ ಸಿನಿಮಾ ಮಾತ್ರ ವೀಕ್ಷಿಸುವಂತೆ ಆಗಬಾರದು‌. ಕನ್ನಡದ ಸಾಂಸ್ಕೃತಿಕ ನೆಲೆಗಟ್ಟನ್ನು ತಿಳಿಸುವಂತೆ ಆಗಬೇಕು.

Shimoga Dasara Cinema Dasara

» ಪ್ರಿಯಾ ಶಠಮರ್ಷಣ್‌, ಭೀಮಾ ಖ್ಯಾತಿಯ ನಟಿ

ಮೈಸೂರು ನನ್ನ ತವರು. ಶಿವಮೊಗ್ಗ ಗಂಡನ ಮನೆ. ಎರಡೂ ಕಡೆ ಸಡಗರದ ದಸರಾ ನಡೆಯುತ್ತದೆ. ಇದು ಅತ್ಯಂತ ಖುಷಿ. ಶಿವಮೊಗ್ಗದ ಜನರು ನಿರ್ಭಯವಾಗಿ ಮಾತನಾಡುತ್ತಾರೆ. ಪಕ್ವತೆಗು ಹೆಸರಾಗಿದೆ.

ಇದೇ ವೇಳೆ ನಟಿ ಶಠಮರ್ಷಣ್‌ ಅವರು ಭೀಮಾ ಸಿನಿಮಾ ಡೈಲಾಗ್‌ ಮತ್ತು ರಂಗಗೀತೆ ಹಾಡಿ ಸಭೀಕರನ್ನು ರಂಜಿಸಿದರು.

Shimoga Dasara Cinema Dasara

» ಅವಿನಾಶ್‌ ಶಠಮರ್ಷಣ್‌, ನಟ, ರಂಗಭೂಮಿ ಕಲಾವಿದ

ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಹುಟ್ಟಿದವನು ನಾನು. ಇಲ್ಲಿಯೇ ಓಡಾಡಿಕೊಂಡು ಇದ್ದೆ. ಭಾಷೆ, ಕಲೆ, ಸಾಹಿತ್ಯದಲ್ಲಿ ಮೈಸೂರು, ಶಿವಮೊಗ್ಗದಲ್ಲಿ ಒಂದೇ ಬಗೆಯ ಒಲವಿದೆ. ಶಿವಮೊಗ್ಗ ಅಂದರೆ ನನಗೆ ಕೋಟೆ ದೇಗುಲ, ಆಂಜನೇಯ ಸದಾ ನೆನಪಾಗುತ್ತದೆ.

Shimoga Dasara Cinema Dasara

ಕಾರ್ಯಕ್ರಮದ ಬಳಿಕ ಚಲನಚಿತ್ರ ಮತ್ತು ಸಾಹಿತ್ಯ ಕುರಿತು ಸಿನಿಮಾ ಸಾಹಿತಿ ಡಾ. ವಿ.ನಾಗೇಂದ್ರ ಪ್ರಸಾದ್‌ ಅವರು ಸಂವಾದ ಕಾರ್ಯಕ್ರಮ ನಡೆಸಿಕೊಟ್ಟರು. ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು, ಸಾರ್ವಜನಿಕರು ಸಂವಾದದಲ್ಲಿ ಭಾಗವಹಿಸಿದ್ದರು.

Shimoga Dasara Cinema Dasara

ಶಾಸಕ ಎಸ್‌.ಎನ್.ಚನ್ನಬಸಪ್ಪ ಅಧ್ಯಕ್ಷತೆ ವಹಿಸಿದ್ದರು. ಶಾಖಾಹಾರಿ ಸಿನಿಮಾ ನಿರ್ಮಾಪಕ ರಾಜೇಶ್‌ ಕೀಳಂಬಿ, ನಿರ್ದೇಶಕ ಸಂದೀಪ್‌ ಸುಂಕದ್‌, ಪಾಲಿಕೆ ಆಯುಕ್ತೆ ಕವಿತಾ ಯೋಗಪ್ಪನವರ್‌, ತಹಶೀಲ್ದಾರ್‌ ಗಿರೀಶ್‌ ಸೇರಿದಂತೆ ಹಲವರು ಇದ್ದರು.

ಇದನ್ನೂ ಓದಿ » ಶಿವಮೊಗ್ಗ ದಸರಾಗೆ ವೈಭವದ ಚಾಲನೆ, ಹೇಗಿತ್ತು ಉದ್ಘಾಟನೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 4, 2024

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

BREAKING NEWS – ಶಿವಮೊಗ್ಗದ ಸಿಂಹಧಾಮದಲ್ಲಿ ನೀರಾನೆ ದಾಳಿ ಡಾಕ್ಟರ್‌ ಸಾವು

BREAKING NEWS – ಶಿವಮೊಗ್ಗದ ಸಿಂಹಧಾಮದಲ್ಲಿ ನೀರಾನೆ ದಾಳಿ ಡಾಕ್ಟರ್‌ ಸಾವು

ಡಿ.ಬಿ.ಹಳ್ಳಿ ಕ್ರಾಸ್‌ನಲ್ಲಿ ಅಪಘಾತ, ಮಹಿಳೆಯ ಕೈ ಮೂಳೆ ಕಟ್‌, ಆಗಿದ್ದೇನು?

ಡಿ.ಬಿ.ಹಳ್ಳಿ ಕ್ರಾಸ್‌ನಲ್ಲಿ ಅಪಘಾತ, ಮಹಿಳೆಯ ಕೈ ಮೂಳೆ ಕಟ್‌, ಆಗಿದ್ದೇನು?

ಕೋಟೆ ದೇಗುಲದಲ್ಲಿ ದೇವರಿಗೆ ಮಹಾವಿಷ್ಣು ಅಲಂಕಾರ, ಪಂಚಾಂಗ ಶ್ರವಣ, ಇವತ್ತು ಯಾವ ಅಲಂಕಾರ ಇರಲಿದೆ?

ಕೋಟೆ ದೇಗುಲದಲ್ಲಿ ದೇವರಿಗೆ ಮಹಾವಿಷ್ಣು ಅಲಂಕಾರ, ಪಂಚಾಂಗ ಶ್ರವಣ, ಇವತ್ತು ಯಾವ ಅಲಂಕಾರ ಇರಲಿದೆ?

ಶಿವಮೊಗ್ಗದಲ್ಲಿ ಯುವಕನ ಮೇಲೆ ಬಿಯರ್‌ ಬಾಟಲಿಯಿಂದ ಅಟ್ಯಾಕ್‌, ಕಾರಣವೇನು?

ಶಿವಮೊಗ್ಗದಲ್ಲಿ ಯುವಕನ ಮೇಲೆ ಬಿಯರ್‌ ಬಾಟಲಿಯಿಂದ ಅಟ್ಯಾಕ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಜಾಸ್ತಿಯಾಗಲಿದೆ ಬಿಸಿಲು, ರಾತ್ರಿ ವೇಳೆ ಮುಂದುವರೆಯುತ್ತಾ ತಂಪು?

ಶಿವಮೊಗ್ಗ ಜಿಲ್ಲೆಯಲ್ಲಿ ಜಾಸ್ತಿಯಾಗಲಿದೆ ಬಿಸಿಲು, ರಾತ್ರಿ ವೇಳೆ ಮುಂದುವರೆಯುತ್ತಾ ತಂಪು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಉಷಾ ನರ್ಸಿಂಗ್‌ ಹೋಂ ಬಳಿ ಅಂಬ್ಯುಲೆನ್ಸ್‌ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಬಳಿ ಅಂಬ್ಯುಲೆನ್ಸ್‌ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

Leave a Comment