SHIMOGA NEWS, 21 SEPTEMBER 2024 : ಈದ್ ಮಿಲಾದ್ ಮೆರವಣಿಗೆ ಹಿನ್ನೆಲೆ ಶಿವಮೊಗ್ಗ ನಗರ (City) ಹಸಿರುಮಯವಾಗಿದೆ. ಎಲ್ಲೆಡೆ ಹಸಿರು ಧ್ವಜಗಳು ರಾರಾಜಿಸುತ್ತಿವೆ. ವಿವಿಧೆಡೆ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ.
ಸೆ.22ರಂದು ಶಿವಮೊಗ್ಗ ನಗರದಲ್ಲಿ ಈದ್ ಮೆರವಣಿಗೆ ಆಯೋಜಿಸಲಾಗಿದೆ. ಹಾಗಾಗಿ ಮುಸ್ಲಿಂ ಸಮುದಾಯದ ವತಿಯಿಂದ ನಗರದಾದ್ಯಂತ ಅಲಂಕಾರ ಮಾಡಲಾಗಿದೆ.
ಎಲ್ಲೆಲ್ಲಿ ಹೇಗಿದೆ ಅಲಂಕಾರ?
ಅಮೀರ್ ಅಹಮದ್ ಸರ್ಕಲ್ ಹಸಿರುಮಯವಾಗಿದೆ. ಸರ್ಕಲ್ ಸುತ್ತಲು ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ಮಧ್ಯದಲ್ಲಿ ಮೆಕ್ಕಾ ಮದೀನ ಮಾದರಿಯ ಅಲಂಕಾರ ಮಾಡಲಾಗಿದೆ.
ಇನ್ನು, ಕೆ.ಆರ್.ಪುರಂ, ಎಂ.ಕೆ.ಕೆ ರಸ್ತೆಯಲ್ಲಿ ವಿದ್ಯುತ್ ದಿಪಾಲಂಕಾರ ಮಾಡಲಾಗಿದೆ. ಅಲ್ಲದೆ ರಸ್ತೆಯ ಪ್ರವೇಶದಲ್ಲಿ ಕಮಾನು ನಿರ್ಮಿಸಲಾಗಿದೆ. ನೆಹರು ರಸ್ತೆ, ಬಿ.ಹೆಚ್.ರಸ್ತೆಯಲ್ಲಿ ಹಸಿರು ಧ್ವಜ, ಬಂಟಿಂಗ್ಸ್ಗಳನ್ನು ಹಾಕಲಾಗಿದೆ.
ಅಲಂಕಾರ ಕಣ್ತುಂಬಿಕೊಳ್ಳಲು ಮುಸ್ಲಿಂ ಸಮುದಾಯದವರು ಕುಟುಂಬ ಸಹಿತ ಸರ್ಕಲ್ ಬಳಿ ಆಗಮಿಸುತ್ತಿದ್ದಾರೆ. ಫೋಟೊ, ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂಭ್ರಮಿಸುತ್ತಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗದಿಂದ ಮತ್ತೊಂದು ನಗರಕ್ಕೆ ವಿಮಾನಯಾನ, ದಿನಾಂಕ ಫಿಕ್ಸ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200