ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA NEWS, 21 SEPTEMBER 2024 : ಈದ್ ಮಿಲಾದ್ ಮೆರವಣಿಗೆ ಹಿನ್ನೆಲೆ ಶಿವಮೊಗ್ಗ ನಗರ (City) ಹಸಿರುಮಯವಾಗಿದೆ. ಎಲ್ಲೆಡೆ ಹಸಿರು ಧ್ವಜಗಳು ರಾರಾಜಿಸುತ್ತಿವೆ. ವಿವಿಧೆಡೆ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ.
ಸೆ.22ರಂದು ಶಿವಮೊಗ್ಗ ನಗರದಲ್ಲಿ ಈದ್ ಮೆರವಣಿಗೆ ಆಯೋಜಿಸಲಾಗಿದೆ. ಹಾಗಾಗಿ ಮುಸ್ಲಿಂ ಸಮುದಾಯದ ವತಿಯಿಂದ ನಗರದಾದ್ಯಂತ ಅಲಂಕಾರ ಮಾಡಲಾಗಿದೆ.
ಎಲ್ಲೆಲ್ಲಿ ಹೇಗಿದೆ ಅಲಂಕಾರ?
ಅಮೀರ್ ಅಹಮದ್ ಸರ್ಕಲ್ ಹಸಿರುಮಯವಾಗಿದೆ. ಸರ್ಕಲ್ ಸುತ್ತಲು ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ಮಧ್ಯದಲ್ಲಿ ಮೆಕ್ಕಾ ಮದೀನ ಮಾದರಿಯ ಅಲಂಕಾರ ಮಾಡಲಾಗಿದೆ.

ಇನ್ನು, ಕೆ.ಆರ್.ಪುರಂ, ಎಂ.ಕೆ.ಕೆ ರಸ್ತೆಯಲ್ಲಿ ವಿದ್ಯುತ್ ದಿಪಾಲಂಕಾರ ಮಾಡಲಾಗಿದೆ. ಅಲ್ಲದೆ ರಸ್ತೆಯ ಪ್ರವೇಶದಲ್ಲಿ ಕಮಾನು ನಿರ್ಮಿಸಲಾಗಿದೆ. ನೆಹರು ರಸ್ತೆ, ಬಿ.ಹೆಚ್.ರಸ್ತೆಯಲ್ಲಿ ಹಸಿರು ಧ್ವಜ, ಬಂಟಿಂಗ್ಸ್ಗಳನ್ನು ಹಾಕಲಾಗಿದೆ.

ಅಲಂಕಾರ ಕಣ್ತುಂಬಿಕೊಳ್ಳಲು ಮುಸ್ಲಿಂ ಸಮುದಾಯದವರು ಕುಟುಂಬ ಸಹಿತ ಸರ್ಕಲ್ ಬಳಿ ಆಗಮಿಸುತ್ತಿದ್ದಾರೆ. ಫೋಟೊ, ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂಭ್ರಮಿಸುತ್ತಿದ್ದಾರೆ.

ಇದನ್ನೂ ಓದಿ » ಶಿವಮೊಗ್ಗದಿಂದ ಮತ್ತೊಂದು ನಗರಕ್ಕೆ ವಿಮಾನಯಾನ, ದಿನಾಂಕ ಫಿಕ್ಸ್
LATEST NEWS
- ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

- ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

- ಮಾರ್ಚ್ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

- ಸಹ್ಯಾದ್ರಿ ಕಾಲೇಜಿನಲ್ಲಿ ಸಹ್ಯಾದ್ರಿ ಸಿರಿ, ಹೇಗಿತ್ತು ವಿದ್ಯಾರ್ಥಿಗಳ ಸಂಭ್ರಮ?

- ಸಕ್ರೆಬೈಲು ಕಾಡಿನಲ್ಲಿ ಎರಡು ಕ್ಯಾಮರಾ ಕಳ್ಳತನ, ಅಡವಿ ಮಧ್ಯೆ ಕ್ಯಾಮರಾ ಇಟ್ಟಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು















