ಮೆಗ್ಗಾನ್ ಆಸ್ಪತ್ರೆ ಮುಂದೆ ಆಂಬುಲೆನ್ಸ್ ಚಾಲಕರ ಮಧ್ಯೆ ಗಲಾಟೆ, ಪೊಲೀಸ್ ಠಾಣೆ ಮೆಟ್ಟಿಲೇರಿದ ಕೇಸ್

ಶಿವಮೊಗ್ಗ
LIVE

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 ಡಿಸೆಂಬರ್ 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ರೋಗಿಯನ್ನು ಕರೆದೊಯ್ಯುವ ವಿಚಾರವಾಗಿ ಇಬ್ಬರು ಆಂಬುಲೆನ್ಸ್ ಚಾಲಕರ ಮಧ್ಯೆ ಗಲಾಟೆಯಾಗಿದ್ದು, ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದೆ.

AVvXsEichXaELYeDOhFU0n9XstiInpkhsI4y9y5uB VImqATyx1h3CLRA4zsRrFRxoiVo U462f0MYCBVD

ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಮುಂಭಾಗ ಘಟನೆ ಸಂಭವಿಸಿದೆ. ಖಾಸಗಿ ಆಂಬಲೆನ್ಸ್ ಚಾಲಕರಾದ ಸಮೀರ್ ಮತ್ತು ಅಮರೇಶ್ ಎಂಬುವವರ ಮಧ್ಯೆ ಗಲಾಟೆಯಾಗಿದೆ.

ಬಾಡಿಗೆ ವಿಚಾರವಾಗಿ ಇಬ್ಬರ ಮಧ್ಯೆ ಗಲಾಟೆಯಾಗಿದ್ದು, ಸಮೀರ್ ಎಂಬಾತ ಮರದ ಪೀಸ್ ತೆಗೆದುಕೊಂಡು ಅಮರೇಶ್ ಮೇಲೆ ಹಲ್ಲೆ ಮಾಡಿದ್ದಾನೆ. ಅಲ್ಲದೆ ಕೊಲೆ ಬೆದರಿಕೆಯನ್ನು ಒಡ್ಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಹಲ್ಲೆ ಮತ್ತು ಕೊಲೆ ಬೆದರಿಕೆ ಸಂಬಂಧ ಅಮರೇಶ್, ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ABOUT ME NEW FINAL FINAL

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment