ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಡಿಸೆಂಬರ್ 2021
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಶಿವಮೊಗ್ಗದಲ್ಲಿ ಇವತ್ತು ಬಟ್ಟೆ ಅಂಗಡಿಗಳನ್ನು ಬಂದ್ ಮಾಡಲಾಗುತ್ತಿದೆ. ನಗರದಾದ್ಯಂತ ಇರುವ ಇನ್ನೂರಕ್ಕೂ ಹೆಚ್ಚು ಜವಳಿ ಮಳಿಗೆಗಳನ್ನು ಮಧ್ಯಾಹ್ನದವರೆಗೆ ಬಂದ್ ಮಾಡಿ, ಪ್ರತಿಭಟನೆ ನಡೆಸಲು ಮಾಲೀಕರು ನಿರ್ಧರಿಸಿದ್ದಾರೆ.
ಬಟ್ಟೆಗಳ ಮೇಲೆ ಶೇ. 5ರಿಂದ 12ಕ್ಕೆ ಜಿಎಸ್ಟಿ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ ಜವಳಿ ವರ್ತಕರು ಡಿ.16ರಂದು ಮಧ್ಯಾಹ್ನದವರೆಗೆ ಅಂಗಡಿಗಳನ್ನು ಬಂದ್ ಮಾಡಿ ಬೃಹತ್ ಪ್ರತಿಭಟನೆ ನಡೆಸುವುದಾಗಿ ಜವಳಿ ವರ್ತಕರ ಸಂಘದ ಅಧ್ಯಕ್ಷ ಟಿ.ಆರ್.ವೆಂಕಟೇಶಮೂರ್ತಿ ತಿಳಿಸಿದರು.

2022ರ ಜ.1ರಿಂದ ಕೇಂದ್ರ ಸರ್ಕಾರ ಜನಸಾಮಾನ್ಯರ ಅಗತ್ಯ ವಸ್ತು ಬಟ್ಟೆಗಳ ಮೇಲೆ ಶೇ.12 ಜಿಎಸ್ಟಿ ವಿಧಿಸಲು ನಿರ್ಧರಿಸಿದೆ. ಅಗತ್ಯ ವಸ್ತುಗಳ ಪಟ್ಟಿಯಲ್ಲಿರುವ ಜವಳಿ ಮೇಲೆ ಜಿಎಸ್ಟಿ ಹೆಚ್ಚಿಸಿರುವುದು ಅನ್ಯಾಯದ ಪರಮಾವಧಿ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಕಳೆದೆರಡು ವರ್ಷ ಲಾಕ್ಡೌನ್ನಿಂದ ಜವಳಿ ವರ್ತಕರು ವ್ಯಾಪಾರವಿಲ್ಲದೇ ಹೈರಾಣಾಗಿದ್ದಾರೆ. ಬದುಕು ದುಸ್ತರವಾಗಿದೆ. ಇಂತಹ ಸಂದರ್ಭ ಗಾಯದ ಮೇಲೆ ಬರೆ ಎಳೆದಂತೆ ಜಿಎಸ್ಟಿ ಏರಿಕೆ ಮಾಡುತ್ತಿರುವುದು ಸರಿಯಲ್ಲ. ಜಿಎಸ್ಟಿ ಏರಿಕೆಯಿಂದ ತೆರಿಗೆ ತಪ್ಪಿಸುವ ಅನ್ಯ ಮಾರ್ಗಗಳಿಗೂ ದಾರಿಯಾಗಲಿದೆ. ತೆರಿಗೆ ಹೆಚ್ಚಳ ಮಾಡಿದರೆ ಗ್ರಾಹಕರಿಗೆ ಹೊರೆಯಾಗಲಿದೆ ಎಂದು ಎಚ್ಚರಿಕೆ ನೀಡಿದರು.
ಪ್ರಧಾನ ಕಾರ್ಯದರ್ಶಿ ಪಿ.ವಿ. ಪ್ರಭಾಕರ್ ಮಾತನಾಡಿ, ಸಂಘದ ಸದಸ್ಯತ್ವ ಪಡೆದಿರುವ ನಗರದ 200 ಜವಳಿ ಅಂಗಡಿಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನಾ ಮೆರವಣಿಗೆ ರಾಮಣ್ಣ ಶ್ರೇಷ್ಠಿಪಾರ್ಕ್ನಿಂದ ಗಾಂಧಿಬಜಾರ್, ನೆಹರೂ ರಸ್ತೆ, ದುರ್ಗಿಗುಡಿ, ಕುವೆಂಪು ರಸ್ತೆ, ಶಿವಮೂರ್ತಿ ವೃತ್ತ ಮೂಲಕ ಜಿಲ್ಲಾಧಿಕಾರಿ ಕಚೇರಿ ತಲುಪಿ ಮನವಿ ನೀಡಲಾಗುವುದು ಎಂದರು.
ಅನಿಲ್ಕುಮಾರ್ ಶೆಟ್ಟಿ, ಭಾಸ್ಕರ್, ಪ್ರಮೋದ್, ಹರೀಶ್ ಮತ್ತಿತರರು ಸುದ್ದಿಗೋಷ್ಠಿಯಲ್ಲಿದ್ದರು.

LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು






