ಶಿವಮೊಗ್ಗ: ನಗರದಲ್ಲಿ ಬಟ್ಟೆ ಅಂಗಡಿ (shop) ಮತ್ತು ಜ್ಯೂಸ್ ಸೆಂಟರ್ನಲ್ಲಿ ಬೆಂಕಿ ಹೊತ್ತುಕೊಂಡಿದ್ದು ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಹೋಗಿವೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಶಿವಮೊಗ್ಗದ ಕರ್ನಾಟಕ ಸಂಘ ಸಮೀಪ ತಗಡು ಶೀಟ್ಗಳನ್ನು ಬಳಸಿ ನಿರ್ಮಿಸಿದ್ದ ಮಳಿಗೆಯಲ್ಲಿ ಇಂದು ಸಂಜೆ ಬೆಂಕಿ ಹೊತ್ತುಕೊಂಡಿದೆ. ಅಂಗಡಿಯಲ್ಲಿದ್ದ ಬಟ್ಟೆ ಸಂಪೂರ್ಣ ಸುಟ್ಟು ಹೋಗಿದೆ. ಜ್ಯೂಸ್ ಸೆಂಟರ್ನಲ್ಲಿದ್ದ ರೆಫ್ರಿಜರೇಟರ್, ಮಿಕ್ಸಿ ಸೇರಿದಂತೆ ಹಲುವು ವಸ್ತುಗಳು ಆಹುತಿಯಾಗಿವೆ.
ಇನ್ನು, ಅಂಗಡಿಯಲ್ಲಿ ಸಣ್ಣ ಅಡುಗೆ ಸಿಲಿಂಡರ್ ಇತ್ತು. ಅದರಲ್ಲಿ ಗ್ಯಾಸ್ ಖಾಲಿಯಾಗಿತ್ತು ಎಂದು ಅಂಗಡಿ ಮಾಲೀಕರು ತಿಳಿಸಿದ್ದಾರೆ. ಅದೃಷ್ಟವಶಾತ್ ಅಪಾಯ ತಪ್ಪಿದೆ. ಮಾಹಿತಿ ತಿಳಿಯುತ್ತಿದ್ದಂತೆ ಶಿವಮೊಗ್ಗದ ಅಗ್ನಿಶಾಮಕ ಸಿಬ್ಬಂದಿ ಕೂಡಲೆ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದರು. ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

“ನಾನು ಮತ್ತು ಸಹೋದರ ಸೇರಿ ಕಳೆದ ಒಂದು ವರ್ಷದಿಂದ ಈ ಅಂಗಡಿ ನಡೆಸುತ್ತಿದ್ದೇವೆ. ಹಿಂಭಾಗದಲ್ಲಿ ಕಸ ಸುರಿದು ಅದಕ್ಕೆ ಬೆಂಕಿ ಹಚ್ಚುತ್ತಾರೆ. ಇದೆ ಬೆಂಕಿ ನಮ್ಮ ಅಂಗಡಿಗೆ ಆವರಿಸಿದೆ. ಹಿಂದೆಯು ಹಲವು ಬಾರಿ ಇಲ್ಲಿ ಕಸ ಸುರಿಯಬೇಡಿ, ಬೆಂಕಿ ಹಚ್ಚಬೇಡಿ ಎಂದು ತಿಳಿಸಿದ್ದೆವು. ಆದರೂ ಇವತ್ತು ಬೆಂಕಿ ಹಚ್ಚಿದ್ದಾರೆ.”

ಇದನ್ನೂ ಓದಿ » ಭದ್ರಾ ಎಡದಂಡೆಯಲ್ಲಿ ಒಂದೇ ಕುಟುಂಬದ ನಾಲ್ವರು ನಾಪತ್ತೆ
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು





