ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 MARCH 2021
ನಮ್ಮೊಲುಮೆ ನಾಗರಿಕ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸತತ ಮೂರು ಗಂಟೆ ಸಂಗೀತ ಕಾರ್ಯಕ್ರಮವನ್ನು ವೀಕ್ಷಿಸಿದರು.
ಇದನ್ನೂ ಓದಿ | ಸಿಎಂ ಯಡಿಯೂರಪ್ಪಗೆ ಶಿವಮೊಗ್ಗದಲ್ಲಿ ನಮ್ಮೊಲುಮೆ, ಬೆಳ್ಳಿ ಕಾಮಧೇನು ನೀಡಿ ಅಭಿನಂದನೆ
ಫ್ರೀಡಂ ಪಾರ್ಕ್ನಲ್ಲಿ ಸನ್ಮಾನ ಕಾರ್ಯಕ್ರಮದ ಬಳಿಕ ಗಾಯಕರಾದ ವಿಜಯ್ ಪ್ರಕಾಶ್ ಮತ್ತು ರಾಜೇಶ್ ಕೃಷ್ಣನ್ ಅವರ ತಂಡದಿಂದ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿತ್ತು. ರಾತ್ರಿ 8 ಗಂಟೆ ಹೊತ್ತಿಗೆ ಶುರುವಾದ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಯಡಿಯೂರಪ್ಪ ವೀಕ್ಷಿಸಿದರು. ರಾತ್ರಿ 11 ಗಂಟೆವರೆಗೂ ಸಿಎಂ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಹಾಡುಗಳನ್ನು ಕೇಳಿ ಖುಷಿ ಪಟ್ಟರು.
ಮುಖದಲ್ಲಿ ನಗು ತರಿಸಿದ ನಿರೂಪಣೆ
ಕಿರುತೆರೆಯ ಖ್ಯಾತ ನಿರೂಪಕಿ ಅನುಶ್ರೀ ಅವರ ನಿರೂಪಣೆ, ಆಗಾಗ ಅವರ ಜೋಕ್ಗಳಿಗೆ ಸಿಎಂ ಯಡಿಯೂರಪ್ಪ ಹಸನ್ಮುಖಿಯಾಗುತ್ತಿದ್ದರು. ಕೆಲವು ಹಾಡುಗಳಿಗೆ ಚಪ್ಪಾಳೆಯನ್ನೂ ತಟ್ಟಿದರು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಜನರ ಡಾನ್ಸ್ ಮಾಡುತ್ತಿದ್ದದ್ದನ್ನು ತಿರುಗಿ ನೋಡಿಕು ಖುಷಿ ಪಟ್ಟರು.
ಸೆಲ್ಫಿಗೆ ಮುಗಿಬಿದ್ದ ಜನರು
ದೊಡ್ಡ ಸಂಖ್ಯೆಯಲ್ಲಿ ಸೇರಿದ್ದ ಜನರು ಸಿಎಂ ಜೊತೆ ಸೆಲ್ಫಿಗೆ ಮುಗಿಬಿದ್ದರು. ಸೆಕ್ಯೂರಿಟಿಯ ನಡುವೆಯು ಸಿಎಂ ಬಳಿಗೆ ಬರುತ್ತಿದ್ದ ಹಲವರು, ಅವರೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡು, ಸಿಎಂಗೆ ಹಸ್ತಲಾಘವ ನೀಡುತ್ತಿದ್ದರು. ಸೆಲ್ಫಿ ಕೇಳಿ ಬಂದವರೊಂದಿಗೆ ಸಿಎಂ ನಗುಮೊಗದೊಂದಿಗೆ ಪೋಸ್ ಕೊಡುತ್ತಿದ್ದರು.

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






