SHIVAMOGGA LIVE NEWS | COBRA| 08 ಮೇ 2022
ಶಿವಮೊಗ್ಗ ಜಿಲ್ಲಾಧಿಕಾರಿ ಅವರ ಮನೆಯ ಕಾಂಪೌಂಡ್’ನಲ್ಲಿ ನಾಗರಹಾವು ಪ್ರತ್ಯಕ್ಷವಾಗಿದೆ. ಇದನ್ನು ಗಮನಿಸಿದ ಸಹಾಯಕರು ಕೂಡಲೆ ಸ್ನೇಕ್ ಕಿರಣ್ ಅವರಿಗೆ ಕರೆ ಮಾಡಿ ಹಾವನ್ನು ಸೆರೆ ಹಿಡಿಸಿದ್ದಾರೆ.
ನೆಹರೂ ಸ್ಟೇಡಿಯಂ ಹಿಂಭಾಗ ಜಿಲ್ಲಾಧಿಕಾರಿ ಅವರ ಸರ್ಕಾರಿ ಬಂಗಲೆ ಇದೆ. ಈ ಬಂಗಲೆಯ ಕಾಂಪೌಂಡ್’ನಲ್ಲಿ ನಾಗರ ಹಾವು ಪ್ರತ್ಯಕ್ಷವಾಗಿದೆ. ಕೂಡಲೆ ಉರಗ ರಕ್ಷಕ ಸ್ನೇಕ್ ಕಿರಣ್ ಅವರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.
ಸ್ನೇಕ್ ಕಿರಣ್ ಅವರು ನಾಗರ ಹಾವನ್ನು ಸೆರೆ ಹಿಡಿದಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳ ನೆರವಿನೊಂದಿಗೆ ಹಾವನ್ನು ಕಾಡಿಗೆ ಬಿಡಲಾಯಿತು.
ಇದನ್ನೂ ಓದಿ – ವಿಮಾನ ನಿಲ್ದಾಣಕ್ಕೆ ಹೆಚ್ಚುವರಿ 25 ಎಕರೆ, MRS ಸರ್ಕಲ್’ನಿಂದ ರಸ್ತೆ ಅಗಲೀಕರಣ, ಅಲಂಕಾರಿಕ ದೀಪ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200