SHIMOGA NEWS, 17 NOVEMBER 2024 : ಶಿವಮೊಗ್ಗ ರಂಗಾಯಣವು (Rangayana) ಕರ್ನಾಟಕ ಸುವರ್ಣ ಸಂಭ್ರಮದ ಪ್ರಯುಕ್ತ ನ.17ರಿಂದ 19ರವರೆಗೆ ‘ಕಾಲೇಜು ರಂಗೋತ್ಸವ 2024-25’ ಮತ್ತು ಬಿ.ಇಡಿ ಪ್ರಶಿಕ್ಷಣಾರ್ಥಿಗಳಿಗಾಗಿ ‘ಶಿಕ್ಷಣದಲ್ಲಿ ರಂಗಕಲೆ’ ಕಮ್ಮಟ ಆಯೋಜಿಸಿದೆ.
ಮೊದಲ ಹಂತದಲ್ಲಿ ಶಿವಮೊಗ್ಗ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳ ಮೂರು ಕಾಲೇಜು ತಂಡಗಳಿಂದ ಪ್ರತಿದಿನ ಮಧ್ಯಾಹ್ನ 3 ಮತ್ತು ಸಂಜೆ 6.30ಕ್ಕೆ ಸುವರ್ಣ ಸಂಸ್ಕೃತಿ ಭವನದಲ್ಲಿ ನಾಟಕ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ.
![]() |
ನ.17ರಂದು ವಿಧಾನಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಕಮ್ಮಟ ಉದ್ಘಾಟಿಸಲಿದ್ದಾರೆ. ವಿಧಾನಪರಿಷತ್ ಸದಸ್ಯೆ ಬಲ್ಕಿಷ್ ಬಾನು, ಡಯಟ್ ಉಪನ್ಯಾಸಕ ಜಿ.ವಿ.ಹರಿಪ್ರಸಾದ್, ಶಿವಮೊಗ್ಗ ರಂಗಾಯಣದ ನಿರ್ದೇಶಕ ಪ್ರಸನ್ನ ಡಿ. ಸಾಗರ ಪಾಲ್ಗೊಳ್ಳಲಿದ್ದಾರೆ.
ಇದನ್ನೂ ಓದಿ » ಸರ್ಕಾರಿ ನೌಕರರ ಸಂಘದ ಚುನಾವಣೆ, ಫಲಿತಾಂಶ ಪ್ರಕಟ, ಷಡಾಕ್ಷರಿ ಬಣಕ್ಕೆ ಭರ್ಜರಿ ಗೆಲುವು
Rangayana
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200