ಶಿವಮೊಗ್ಗ: ಸದಾ ಶೈಕ್ಷಣಿಕ ಒತ್ತಡದಲ್ಲಿದ್ದ ವಿದ್ಯಾರ್ಥಿಗಳು (College students) ಸಂಚಾರಿ ಪೊಲೀಸರಾಗಿ ಬದಲಾಗಿದ್ದರು. ವಿವಿಧ ವೃತ್ತಗಳಿಗೆ ತೆರಳಿ ಸಂಚಾರ ನಿಯಂತ್ರಣಕ್ಕಾಗಿ ಪೊಲೀಸ್ ಸಿಬ್ಬಂದಿ ಜೊತೆ ಶ್ರಮಿಸಿದರು.
ಇದನ್ನೂ ಓದಿ – ಶಿವಮೊಗ್ಗ ಸಮೀಪ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್ಸು, ಅದೃಷ್ಟವಶಾತ್ ಪ್ರಯಾಣಿಕರು ಪಾರು, ಆಗಿದ್ದೇನು?
ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ರಾಷ್ಟ್ರೀಯ ಶಿಕ್ಷಣ ಸಮಿತಿ, ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜು, ಕಮಲಾ ನೆಹರು ಮಹಿಳಾ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ 37 ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ – 2026 ಅಂಗವಾಗಿ ಸರಣಿ ಕಾನೂನು ಅರಿವು ಕಾರ್ಯಕ್ರಮ ಇಂತಹ ವಿಶೇಷ ಸನ್ನಿವೇಶಕ್ಕೆ ಸಾಕ್ಷಿಯಾಗಿತ್ತು.

ಎ.ಟಿ.ಎನ್.ಸಿ.ಸಿ ಹಾಗೂ ಕಮಲಾ ನೆಹರು ಕಾಲೇಜಿನ ಎನ್.ಸಿ.ಸಿ ಹಾಗೂ ರೇಂಜರ್ಸ್ ರೋವರ್ಸ್ ವಿದ್ಯಾರ್ಥಿಗಳು ಸಂಚಾರಿ ಪೊಲೀಸರಾಗಿ ಮಹಾವೀರ ವೃತ್ತದಲ್ಲಿ ನಿಂತು ಕೈ ಸಂಕೇತಗಳನ್ನು ತೋರಿಸುತ್ತ ಸಂಚಾರ ದಟ್ಟಣೆ ನಿಯಂತ್ರಿಸಿದರು. ಬಿತ್ತಿ ಪತ್ರಗಳನ್ನು ಪ್ರದರ್ಶಿಸಿ ವಾಹನ ಸವಾರರಲ್ಲಿ ಜಾಗೃತಿ ಮೂಡಿಸಿದರು. ಜೀಬ್ರಾ ಲೈನ್ ದಾಟಿದ ಸವಾರರಿಗೆ, ವೃತ್ತದಲ್ಲಿ ಸರಿಯಾಗಿ ನಿಲ್ಲುವ ಬಗೆ ವಿವರಿಸುತ್ತಾ, ಅವಸರವೇ ಅಪಘಾತಕ್ಕೆ ಕಾರಣವೆಂದು ತಿಳಿಹೇಳಿದರು.
ಎ.ಟಿ.ಎನ್.ಸಿ ಕಾಲೇಜು ವಿಶೇಷ ಕರ್ತವ್ಯಾಧಿಕಾರಿ ಡಾ.ಆರ್.ಎಂ.ಜಗದೀಶ್ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ವಕೀಲರಾದ ಸಾದ್ವಿ ಕಾಮತ್, ಸಂಚಾರಿ ಪೊಲೀಸ್ ಠಾಣೆ ಸಿಬ್ಬಂದಿ ವಿ.ಎಚ್.ಮುನೇಶಪ್ಪ ಸಂಚಾರ ನಿಯಂತ್ರಣಕ್ಕಾಗಿ ಪೋಲಿಸರು ಬಳಸುವ ವಿವಿಧ ಕೈ ಸಂಕೇತಗಳ ಪ್ರಾತ್ಯಕ್ಷಿಕೆ ನೀಡಿದರು.











