ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 30 MAY 2024
SHIMOGA : ಹೊಂಗಿರಣ ಸಂಸ್ಥೆ ವತಿಯಿಂದ ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಜೂನ್ 1ರಂದು ಸಂಜೆ 7ಕ್ಕೆ ‘ದನಾ ಕಾಯೋರ ದೊಡ್ಡಾಟ ಮತ್ತು ಶ್ರೀ ಕೃಷ್ಣ ಸಂಧಾನ’ ಹಾಸ್ಯ ನಾಟಕ (Comedy Drama) ಪ್ರದರ್ಶನ ಆಯೋಜಿಸಲಾಗಿದೆ. ಕಾಮಿಡಿ ಕಿಲಾಡಿ ಸೀಸನ್ 3ರ ಫೈನಲಿಸ್ಟ್ ಆಗಿದ್ದ ಚಂದ್ರಶೇಖರ್ ಹಿರೇಗೋಣಿಗೆರೆ ನಿರ್ದೇಶನ ಮಾಡಿದ್ದಾರೆ ಎಂದು ರಂಗ ನಿರ್ದೇಶಕ ಸಾಸ್ವೆಹಳ್ಳಿ ಸತೀಶ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಾಸ್ವೆಹಳ್ಳಿ ಸತೀಶ್, ಖ್ಯಾತ ಕಿರುತೆರೆ ನಟ ಚಂದ್ರಶೇಖರ ಶಾಸ್ತ್ರಿ ಸೇರಿದಂತೆ ಕಿರುತೆರೆ, ಹಿರಿತೆರೆಯ ಕಲಾವಿದರು ಈ ನಾಟಕದಲ್ಲಿ ಅಭಿನಯಿಸಿದ್ದಾರೆ. ಈಗಾಗಲೆ ಈ ಹಾಸ್ಯ ನಾಟಕ 95 ಪ್ರದರ್ಶನ ಕಂಡಿದೆ. ಶಿವಮೊಗ್ಗದಲ್ಲಿನ ಪ್ರದರ್ಶನಕ್ಕೆ ಪ್ರತಿಯೊಬ್ಬರಿಗೆ 50 ರೂ. ಟಿಕೆಟ್ ನಿಗದಿಗೊಳಿಸಲಾಗಿದೆ. ಗೋಪಿ ಸರ್ಕಲ್ನ ಶ್ರೀನಿಧಿ ಕಾಂಪ್ಲೆಕ್ಸ್ನಲ್ಲಿರುವ ಕ್ರೀಡಾ ಲೋಕದಲ್ಲಿ ಟಿಕೆಟ್ಗಳು ದೊರೆಯಲಿವೆ ಎಂದು ತಿಳಿಸಿದರು.
ಇನ್ನು, ದ್ವಿತೀಯ ಪಿಯುಸಿಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ತಂಡದ ಕಲಾವಿದರಾದ ಕೆ.ಸಿ.ಚುಕ್ಕಿ ಮತ್ತು ನಾದ ಹಾಲಸ್ವಾಮಿ, ರಂಗಭೂಮಿ ವಿಷಯದಲ್ಲಿ ಪಿಹೆಚ್ಡಿ ಪಡೆದ ಜಿ.ಆರ್.ಲವ, ಡಿಲಿಟ್ ಪದವಿ ಪಡೆದ ಗಣೇಶ ಕೆಮಚನಾಲ ಅವರನ್ನು ಸನ್ಮಾನಿಸಲಾಗುತ್ತದೆ ಎಂದು ಸಾಸ್ವೆಹಳ್ಳಿ ಸತೀಶ್ ತಿಳಿಸಿದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ‘ಶೆಟ್ಟರ ಸಂತೆ’, ವಿವಿಧ ತಿಂಡಿ, ತಿನಿಸು, ಡ್ರೆಸ್ ಮೆಟೀರಿಯಲ್ ಪ್ರದರ್ಶನ, ಮಾರಾಟ, ಎಲ್ಲಿ? ಯಾವಾಗ?
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






