ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 3 ಡಿಸೆಂಬರ್ 2021
ಮಹಿಳಾ ಅಧಿಕಾರಿಯೊಬ್ಬರಿಗೆ ರಾತ್ರಿಯಲ್ಲ ಕರೆ ಮಾಡಿ ಅವಾಚ್ಯವಾಗಿ ನಿಂದಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿ ನಾಪತ್ತೆಯಾಗಿದ್ದು, ಪೊಲೀಸರು ತಲಾಷ್ ನಡೆಸುತ್ತಿದ್ದಾರೆ.
ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯೊಬ್ಬರಿಗೆ ಚಿತ್ರಪ್ಪ ಎಂಬಾತ ರಾತ್ರಿಯಲ್ಲ ಕರೆ ಮಾಡುತ್ತಿದ್ದಾರೆ. ವಾಟ್ಸಪ್ ಡಿಪಿಯಲ್ಲಿ ಮಹಿಳಾ ಅರಣ್ಯಾಧಿಕಾರಿ ಫೋಟೊ ಹಾಕಿ ಅವಮಾನ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಏನಿದು ಪ್ರಕರಣ? ದೂರಿನಲ್ಲಿ ಏನಿದೆ?
ಆನೆ ತುಳಿದು ಬೆಳೆ ಹಾನಿಯಾಗಿದೆ. ತಮಗೆ ಪರಿಹಾರಿ ಕೊಡಿಸಿ ಎಂದು ಚಿತ್ರಪ್ಪ ಎಂಬುವವರು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗೆ ಕರೆ ಮಾಡಿದ್ದಾರೆ. ತಡರಾತ್ರಿಯಲ್ಲ ಕರೆ ಮಾಡಿ ಪರಿಹಾರಕ್ಕೆ ಆಗ್ರಹಿಸಿದ್ದಾರೆ. ಅಲ್ಲದೆ ಅಸಭ್ಯವಾಗಿಯೂ ಮಾತನಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಎಸಿಎಫ್ ಕಚೇರಿಗೂ ಚಿತ್ರಪ್ಪ ಪದೇ ಪದೇ ಭೇಟಿ ನೀಡಿ, ಏಕ ವಚನದಲ್ಲಿ ಮಾತನಾಡಿ ಅವಮಾನ ಮಾಡುತ್ತಿದ್ದರು. ಅಲ್ಲದೆ ಚಿತ್ರಪ್ಪ ತಮ್ಮ ವಾಟ್ಸಪ್’ನಲ್ಲಿ ಮಹಿಳಾ ಎಸಿಎಫ್ ಫೋಟೋ ಹಾಕಿಕೊಂಡಿದ್ದರು. ಇದರಿಂದ ತಮ್ಮ ಕೌಟುಂಬಿಕ ಜೀವನ ಮತ್ತು ಸರ್ಕಾರಿ ಕರ್ತವ್ಯ ನಿರ್ವಹಣೆಗೆ ತೊಂದರೆ ಉಂಟಾಗುತ್ತಿದೆ ಎಂದು ಆರೋಪಿಸಿ ಮಹಿಳಾ ಎಸಿಎಫ್ ದೂರಿನಲ್ಲಿ ತಿಳಿಸಿದ್ದಾರೆ
ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯ ಪತ್ತೆ ಕಾರ್ಯ ನಡೆಯುತ್ತಿದೆ.

LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






