SHIVAMOGGA LIVE NEWS | 7 FEBRUARY 2024
SHIMOGA : ಎಸ್ಸೆಸ್ಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೇಳಾಪಟ್ಟಿಯನ್ನು ಇರಿಸಿಕೊಂಡು, ಮತೀಯ ಭಾವನೆ ಕೆರಳಿಸುವಂತೆ ಫೇಸ್ಬುಕ್ನಲ್ಲಿ ಪೋಸ್ಟ್ ಪ್ರಕಟಿಸಲಾಗಿದೆ ಎಂದು ಆರೋಪಿಸಿ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎನ್ಎಸ್ಯುಐ ಸಂಘಟನೆ ವತಿಯಿಂದ ದೂರು ನೀಡಲಾಗಿದೆ.
ಮಾ.1ರಂದು ಶುಕ್ರವಾರ ಮಧ್ಯಾಹ್ನ ವಿಜ್ಞಾನ ವಿಷಯದ ಪರೀಕ್ಷೆಯನ್ನು ನಿಗದಿಪಡಿಸಲಾಗಿದೆ. ಈ ಕುರಿತು ಚಕ್ರವರ್ತಿ ಸೂಲಿಬೆಲೆ, ತಮ್ಮ ಫೇಸ್ಬುಕ್ನಲ್ಲಿ, ಮತೀಯ ಭಾವನೆ ಕೆರಳಿಸುವಂತೆ ಪೋಸ್ಟ್ ಪ್ರಕಟಿಸಿದ್ದಾರೆ. ಈ ಮೂಲಕ ಸಮಾಜದಲ್ಲಿ ಅಶಾಂತಿಗೆ ಕಾರಣವಾಗುತ್ತಿದ್ದಾರೆ. ಈ ಹಿನ್ನೆಲೆ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜಯನಗರ ಪೊಲೀಸ್ ಠಾಣೆಯಲ್ಲಿ ಇನ್ಸ್ಪೆಕ್ಟರ್ಗೆ ದೂರು ಸಲ್ಲಿಸಿದ್ದಾರೆ.
ಎನ್ಎಸ್ಯುಐ ಜಿಲ್ಲಾಧ್ಯಕ್ಷ ವಿಜಯ ಕುಮಾರ್, ಕಾರ್ಯಾಧ್ಯಕ್ಷ ರವಿ ಕುಮಾರ್, ಚರಣ, ಹರ್ಷಿತ್, ಪ್ರಮುಖರಾದ ಚೇತನ್, ಜಿ.ಡಿ.ಮಂಜುನಾಥ್ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ – ಹಣಗೆರೆ ರಸ್ತೆಯಲ್ಲಿ ಚಿರತೆ ಮೃತದೇಹ ಪತ್ತೆ, ಅಪಘಾತಕ್ಕೆ ಬಲಿ ಶಂಕೆ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200