ಚಕ್ರವರ್ತಿ ಸೂಲಿಬೆಲೆ ವಿರುದ್ಧ ಶಿವಮೊಗ್ಗದಲ್ಲಿ ಮಹಿಳೆಯಿಂದ ಠಾಣೆಗೆ ದೂರು | 3 ಫಟಾಫಟ್‌ ನ್ಯೂಸ್‌

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 24 AUGUST 2023

ಚಕ್ರವರ್ತಿ ಸೂಲಿಬೆಲೆ ವಿರುದ್ಧ ಮಹಿಳೆ ದೂರು

complaint against chakravati sulibele

SHIMOGA : ಫೇಸ್‌ಬುಕ್‌ನಲ್ಲಿ (Facebook) ಅವಹೇಳನ ಮಾಡಿದ FATAFAT-NEWS-1ಆರೋಪ ಸಂಬಂಧ ಚಕ್ರವರ್ತಿ ಸೂಲಿಬೆಲೆ (Chakravathi Sulibele) ವಿರುದ್ಧ ಮಹಿಳೆಯೊಬ್ಬರು (Woman) ಶಿವಮೊಗ್ಗದ ವಿನೋಬನಗರ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ. ಕೆಪಿಸಿಸಿ ಸಾಮಾಜಿಕ ಜಲಾತಾಣ ವಿಭಾಗದ ಸೌಗಂಧಿಕಾ.ಎಸ್‌.ಆರ್‌ ಅವರಿಗೆ ವೈಯಕ್ತಿಕ ತೇಜೋವಧೆ ಮಾಡಲಾಗಿದೆ ಎಂದು ದೂರಿನಲ್ಲಿ ಆಪಾದಿಸಲಾಗಿದೆ. ಈ ಹಿನ್ನೆಲೆ ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತೆಯರೊಂದಿಗೆ ಠಾಣೆಗೆ ತೆರಳಿ ದೂರು ಸಲ್ಲಿಸಿದ್ದಾರೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಇದನ್ನೂ ಓದಿ – ನಿಧಿ ಆಸೆ, ಬೆಂಗಳೂರಿನ ವ್ಯಕ್ತಿಗೆ ಶಿವಮೊಗ್ಗದಲ್ಲಿ ಲಕ್ಷ ಲಕ್ಷ ರೂ. ವಂಚನೆ, ಹೇಗಾಯ್ತು ಮೋಸ?

FATAFAT-MORE-NEWS

ಎನ್‌ಇಪಿ ರದ್ದು ವಿರುದ್ಧ ಪ್ರತಿಭಟನೆ

abvp protest in Shimoga

SHIMOGA : ಹೊಸ ಶಿಕ್ಷಣ ನೀತಿ (NEP) ರದ್ದುಗೊಳಿಸಿ ರಾಜ್ಯ FATAFAT-NEWS-2ಸರ್ಕಾರ ಕರ್ನಾಟಕದ ವಿದ್ಯಾರ್ಥಿಗಳನ್ನು ಕತ್ತಲೆಗೆ ದೂಡುತ್ತಿದೆ ಎಂದು ಆರೋಪಿಸಿ ABVP ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಎಬಿವಿಪಿ ಕಾರ್ಯಕರ್ತರು, ಮುಂದೆ ದೇಶಾದ್ಯಂತ ಎನ್‌ಇಪಿ ಶಿಕ್ಷಣ ವ್ಯವಸ್ಥೆ ಜಾರಿಗೆ ಬರಲಿದೆ. ಎನ್‌ಇಪಿ ರದ್ದುಗೊಳಿಸಿದರೆ, ಐಐಟಿ, ಐಐಎಂ ಸೇರಿದಂತೆ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಅಧ್ಯಯನಕ್ಕೆ ತೆರಳಲು ರಾಜ್ಯದ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಲಿದೆ. ಎನ್‌ಇಪಿಯನ್ನು ರಾಜಕೀಯ ಅಸ್ತ್ರ ಮಾಡಿಕೊಳ್ಳುವುದು ಸರಿಯಲ್ಲ ಎಂದು ಆರೋಪಿಸಿದರು.

ಇದನ್ನೂ ಓದಿ – ಹೊಳೆಹೊನ್ನೂರು ಗಾಂಧಿ ಪ್ರತಿಮೆ ಧ್ವಂಸ ಕೇಸ್‌, ಚಿತ್ರದುರ್ಗದ ಇಬ್ಬರು ಅರೆಸ್ಟ್‌, ಆರೋಪಿಗಳ ಹಿನ್ನೆಲೆ ಏನು?

FATAFAT-MORE-NEWS

ಪಾಲಿಕೆ ವತಿಯಿಂದ ಕೊಟ್ಟಿಗೆ ತೆರವು ಕಾರ್ಯಾಚರಣೆ

palike officials at vinobanagara

SHIMOGA : ಮಹಾನಗರ ಪಾಲಿಕೆ (Mahanagara Palike) ಜಾಗದಲ್ಲಿ ಅರಣ್ಯ ಇಲಾಖೆ ನಿವೃತ್ತ FATAFAT-NEWS-3ನೌಕರರೊಬ್ಬರು ನಿರ್ಮಿಸಿಕೊಂಡಿದ್ದ ಕೊಟ್ಟಿಗೆಯನ್ನು ತೆರವು ಮಾಡಲಾಯಿತು. ವಿನೋಬನಗರ (Vinobanagara) 60 ಅಡಿ ರೆಸ್ತೆಯ 8ನೇ ತಿರುವಿನಲ್ಲಿ ಪೊಲೀಸರ ರಕ್ಷಣೆಯಲ್ಲಿ ಜೆಸಿಬಿ ಮೂಲಕ ಕೊಟ್ಟಿಗೆ ತೆರವುಗೊಳಿಸಲಾಯಿತು. ಅರಣ್ಯ ಇಲಾಖೆ ನಿವೃತ್ತ ನೌಕರ ಬೀರಪ್ಪ ಎಂಬುವವರು ಕೊಟ್ಟಿಗೆ ನಿರ್ಮಿಸಿಕೊಂಡಿದ್ದರು. ಇದರಲ್ಲಿ ಮೂರು ಹಸುಗಳನ್ನು ಸಾಕಿಕೊಂಡಿದ್ದರು. ಪಾಲಿಕೆ ಹಲವು ಬಾರಿ ನೊಟೀಸ್‌ ನೀಡಿದ್ದರು ಕೊಟ್ಟಿಗೆ ತೆರವುಗೊಳಿಸಿರಲಿಲ್ಲ. ಈ ಹಿನ್ನೆಲೆ ಅಧಿಕಾರಿಗಳು ಪೊಲೀಸ್‌ ಭದ್ರತೆಯಲ್ಲಿ ಇವತ್ತು ತೆರವು ಕಾರ್ಯಾಚರಣೆ ಮಾಡಿದರು.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment