ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 22 JANUARY 2021
ಕಲ್ಲಗಂಗೂರು ಕಲ್ಲು ಕ್ವಾರೆಯಲ್ಲಿ ಸ್ಪೋಟ ಸಂಭವಿಸಿದ ಪ್ರಕರಣ ಸಂಬಂಧ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಸೇರಿ ಏಳು ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಸಲಾಗಿದೆ.
ಸ್ಥಳೀಯರಾದ ಸಂದೀಪ್ ಎಂಬುವವರು ಈ ದೂರು ಸಲ್ಲಿಸಿದ್ದಾರೆ. ನಿಯಮ ಬಾಹಿರವಾಗಿ ಕಲ್ಲು ಕ್ವಾರೆ, ಕ್ರಷರ್ ನಡೆಸುತ್ತಿರುವ ಸಂಬಂಧ ಸಂದೀಪ್ ಅವರು 2013ರಲ್ಲಿ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಪ್ರಕರಣ ಸಂಬಂಧ ವಿಚಾರಣೆ ನಡೆಯುತ್ತಿದೆ. ಜನವರಿ 29ಕ್ಕೆ ಅಂತಿಮ ವಿಚಾರಣೆಗೆ ದಿನಾಂಕ ನಿಗದಿಯಾಗಿತ್ತು.
ಸ್ಫೋಟದ ಬೆನ್ನಿಗೆ ದೂರು
ಕಲ್ಲಗಂಗೂರಿನಲ್ಲಿ ಸ್ಪೋಟ ಸಂಭವಿಸುತ್ತಿದ್ದಂತೆ ಏಳು ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಸಲಾಗಿದೆ. 2013ರ ಪ್ರಕರಣಕ್ಕೆ ಇವರ ಹೆಸರನ್ನು ಸೇರಿಸಿಕೊಳ್ಳಬೇಕು ಎಂದು ಲೋಕಾಯುಕ್ತಕ್ಕೆ ದೂರು ಸಲ್ಲಿಸಲಾಗಿದೆ.
ಯಾರೆಲ್ಲ ಅಧಿಕಾರಿಗಳ ಮೇಲೆ ಕೇಸ್?
ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು, ತಹಶೀಲ್ದಾರ್ ನಾಗರಾಜ್, ಪರಿಸರ ಅಧಿಕಾರಿ ಹರಿಶಂಕರ್, ಹಿರಿಯ ಭೂ ವಿಜ್ಞಾನಿ ರಾಂಜಿ ನಾಯ್ಕ, ಭೂ ವಿಜ್ಞಾನಿ ಜ್ಯೋತಿ, ಉಪ ಪರಿಸರ ಅಧಿಕಾರಿ ಶಿಲ್ಪಾ ಅವರ ವಿರುದ್ಧ ದೂರು ಸಲ್ಲಿಸಲಾಗಿದೆ.
ಸಂದೀಪ್ ಹೇಳಿಕೆಯ ವಿಡಿಯೋ ರಿಪೋರ್ಟ್
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಬೆಳಗ್ಗೆ ಲೇಔಟ್ಗೆ ಬಂದ ಲೆಕ್ಚರರ್ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

About The Editor
ನಿತಿನ್ ಆರ್.ಕೈದೊಟ್ಲು
















