ಶಿವಮೊಗ್ಗ ಲೈವ್.ಕಾಂ | SHIMOGA | 24 ಅಕ್ಟೋಬರ್ 2019
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಅಪಘಾತದಲ್ಲಿ ಮೃತಪಟ್ಟ ಪೇದೆಗೆ ಪರಿಹಾರ ನೀಡುವಲ್ಲಿ ವಿಫಲವಾದ ಕಾರಣ ನ್ಯಾಯಾಲಯದ ಆದೇಶದ ಮೇರೆಗೆ ನಗರದ ಕೆಆರ್’ಐಡಿಎಲ್ (ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮ) ಕಚೇರಿಯ ಸ್ಥಿರಾಸ್ತಿಯನ್ನು ಜಪ್ತಿ ಮಾಡಲಾಯಿತು.

ಕೆಎಸ್ಆರ್ಪಿ ಪೇದೆ ಶಾಮ್ಸನ್ ಎಂಬುವರು 2010ರಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಕೆಆರ್ಐಡಿಎಲ್’ಗೆ ಸೇರಿದ ವಾಹನ ಡಿಕ್ಕಿಯಾಗಿ ಶಾಮ್ಸನ್ ಮೃತಪಟ್ಟಿದ್ದರು.
2013ರಲ್ಲಿ ವಿಚಾರಣೆ ನಡೆಸಿದ ನಗರದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 13 ಲಕ್ಷ ರೂ. ಪರಿಹಾರ ನೀಡುವಂತೆ ಆದೇಶ ಮಾಡಿತ್ತು. ಆದರೂ ಕೆಆರ್’ಐಡಿಎಲ್ ಅಧಿಕಾರಿಗಳು ಪರಿಹಾರ ನೀಡರಲಿಲ್ಲ.
ಕುಟುಂಬಸ್ಥರು ಮತ್ತೆ ನ್ಯಾಯಾಲಯದ ಮೊರೆ ಹೋದ ಪರಿಣಾಮ ಆಸ್ತಿ ಜಪ್ತಿಗೆ ಸೂಚಿಸಿತ್ತು. ಅದರಂತೆ ಬುಧವಾರ ನ್ಯಾಯಾಲಯದ ಸಿಬ್ಬಂದಿಯೊಂದಿಗೆ ತೆರಳಿ ಕಂಪ್ಯೂಟರ್, ಖುರ್ಚಿ, ಟೇಬಲ್ ಸೇರಿ ಪೀಠೋಪಕರಣ ಜಪ್ತು ಮಾಡಲಾಯಿತು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | shivamoggalive@gmail.com
LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





