SHIVAMOGGA LIVE NEWS | 23 MAY 2024
SHIMOGA : ಪ್ರಯಾಣಿಕರನ್ನು ಹತ್ತಿಸಿಕೊಳ್ಳುವ ವಿಚಾರದಲ್ಲಿ ಖಾಸಗಿ ಬಸ್ ಸಿಬ್ಬಂದಿ ಮಧ್ಯೆ ಗಲಾಟೆಯಾಗಿದ್ದು, ಕಂಡಕ್ಟರ್ (CONDUCTOR) ಒಬ್ಬರಿಗೆ ಜೀವ ಬೆದರಿಕೆ ಒಡ್ಡಲಾಗಿದೆ ಎಂದು ಆರೋಪಿಸಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗದ ಖಾಸಗಿ ಬಸ್ ನಿಲ್ದಾಣದಲ್ಲಿ ಘಟನೆ ಸಂಭವಿಸಿದೆ.
ಶಿವಮೊಗ್ಗ – ಆಗುಂಬೆ (Agumbe) ಮಾರ್ಗದ ಎರಡು ಬಸ್ಸುಗಳ ಸಿಬ್ಬಂದಿ ಮಧ್ಯೆ ಗಲಾಟೆಯಾಗಿದೆ. ಬೆಳಗ್ಗೆ 4.33ಕ್ಕೆ ಒಂದು ಬಸ್ ಈ ಮಾರ್ಗದಲ್ಲಿ ಹೊರಡಬೇಕಿತ್ತು. ಬೆಳಗ್ಗೆ 5 ಗಂಟೆಗೆ ಮತ್ತೊಂದು ಬಸ್ ಹೊರಡಬೇಕಿತ್ತು. ಬೆಳಗ್ಗೆ 4.33ರ ಖಾಸಗಿ ಬಸ್ ಹೊರಡುವ ಮೊದಲೇ 5 ಗಂಟೆಯ ಬಸ್ ನಿಲ್ದಾಣದ ಪ್ರವೇಶಿಸಿ ಪ್ರಯಾಣಿಕರನ್ನು ಹತ್ತಿಸಿಕೊಳ್ಳುತ್ತಿತ್ತು. ಬೆಳಗ್ಗೆ 4.33ರ ಬಸ್ಸಿನ ಕಂಡಕ್ಟರ್ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆ ಬೆಳಗ್ಗೆ 4.33ರ ಬಸ್ಸಿನ ಕಂಡಕ್ಟರ್ ನಂದನ್ ಕುಮಾರ್ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.
ಇದನ್ನೂ ಓದಿ – RCBಗೆ ಪರ ಯುವತಿಯರ ಘೋಷಣೆ, ಜರ್ಸಿ ನಂಬರ್ ಟ್ಯಾಟೋ ಹಾಕಿಸಿಕೊಂಡ ವಿದ್ಯಾರ್ಥಿನಿ
ಚಾಲಕ ನಾಗೇಶ್, ಕಂಡಕ್ಟರ್ ಹನುಮಂತ, ಅಭಿ ಶೆಣೈ, ಆದರ್ಶ ಎಂಬುವವರ ವಿರುದ್ಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200