SHIVAMOGGA LIVE NEWS | 1 OCTOBER 2023
SHIMOGA : ಈದ್ ಮಿಲಾದ್ ಮೆರವಣಿಗೆ ಹಿನ್ನಲೆ ರಾಗಿಗುಡ್ಡದಲ್ಲಿ ಅಳವಡಿಸಿದ್ದ ಕಟೌಟ್ (Cut Out) ವಿಚಾರವಾಗಿ ಗೊಂದಲದ ಉಂಟಾಗಿತ್ತು. ವಿಚಾರ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಸಾರ್ವಜನಿಕರಿಗೆ ಮನವರಿಕೆ ಮಾಡಿ, ಪರಿಸ್ಥಿತಿ ತಿಳಿಗೊಳಿಸಿದರು.
ರಾಗಿಗುಡ್ಡ ಮುಖ್ಯರಸ್ತೆಯಲ್ಲಿ ಅಳವಡಿಸಿದ್ದ ಕಟೌಟ್ (Cut Out) ವಿಚಾರವಾಗಿ ಗೊಂದಲ ಸೃಷ್ಟಿಯಾಗಿ ಜನ ಗುಂಪುಗೂಡಿದ್ದರು. ನೂರಕ್ಕು ಹೆಚ್ಚು ಜನರು ಶಿವಮೊಗ್ಗ – ಹೊನ್ನಾಳಿ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದರು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಶಾಂತಗೊಳಿಸಿದರು.
ಜಿಲ್ಲಾ ರಕ್ಷಣಾಧಿಕಾರಿ ಹೇಳಿದ್ದೇನು?
ಸ್ಥಳಕ್ಕೆ ಭೇಟಿ ನೀಡಿದ್ದ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಮುಖಂಡರ ಜೊತೆ ಚರ್ಚೆ ನಡೆಸಿ ಸಮಾಧಾನಪಡಿಸಿದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಶಾಂತಿನಗರದಲ್ಲಿ ಟಿಪ್ಪು ಸುಲ್ತಾನ್ ಕಟೌಟ್ ವಿಚಾರವಾಗಿ ಗೊಂದಲವಿತ್ತು. ಸ್ವಲ್ಪ ವಿವಾದಾತ್ಮಕ ಇದ್ದುದರಿಂದ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡಿದ್ದಾರೆ. ಅದಕ್ಕೆ ಗೊಂದಲ ಉಂಟಾಗಿ ಜನ ಸೇರಿದ್ದರು. ನಾನೇ ಸ್ಥಳಕ್ಕೆ ಬಂದು ಅವರ ಮುಖಂಡರ ಜೊತೆ ಮಾತಾಡಿದ್ದೇನೆ ಎಂದರು.
ಇದನ್ನೂ ಓದಿ – ಈದ್ ಮಿಲಾದ್ ಮೆರವಣಿಗೆ, ಶಿವಮೊಗ್ಗದಲ್ಲಿ ಅದ್ಧೂರಿ ಸಿದ್ಧತೆ, ಎಲ್ಲೆಲ್ಲಿ ಹೇಗಿದೆ ಅಲಂಕಾರ?
ಕೆಲವರಿಗೆ ಇಂತಹ ಕಟೌಟ್ ಹಾಕಬಾರದು ಎಂಬುದು ಗೊತ್ತಿರಲಿಲ್ಲ. ಅವರಿಗೆ ಈ ಬಗ್ಗೆ ಮನವರಿಕೆ ಮಾಡಲಾಗಿದೆ. ಅವರು ಕೂಡ ಒಪ್ಪಿಕೊಂಡಿದ್ದಾರೆ. ಸದ್ಯ ಯಾವುದೇ ಸಮಸ್ಯೆ ಇಲ್ಲ. ಪರಿಸ್ಥಿತಿ ಶಾಂತವಾಗಿದೆ ಎಂದು ತಿಳಿಸಿದರು.
ಸಾರ್ವಜನಿಕರು ಯಾವುದೇ ವಂದತಿಗೆ ಕಿವಿಕೊಡಬಾರದು. ಈದ್ ಮಿಲಾದ್ ಹಬ್ಬದ ಮೆರವಣಿಗೆ ಹಿನ್ನೆಲೆ ಎಲ್ಲಾ ತಯಾರಿ ಮಾಡಿಕೊಂಡಿದ್ದೇವೆ. 15 ದಿನದಿಂದ ನಗರದಲ್ಲಿ ಬಂದೋಬಸ್ತ್ ಕೈಗೊಳ್ಳಲಾಗಿದೆ. 2 ಆರ್ಎಎಫ್ ಕಂಪನಿ, 5 ಕೆಎಸ್ಆರ್ಪಿ ತುಕಡಿ, 12 ಡಿಎಆರ್ ತುಕಡಿ, 2500 ಪೊಲೀಸರು ಬಂದೋಬಸ್ತ್ಗೆ ನಿಯೋಜನೆ ಮಾಡಲಾಗಿದೆ ಎಂದು ತಿಳಿಸಿದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200