ಶಿವಮೊಗ್ಗ LIVE
ಶಿವಮೊಗ್ಗ: ಆಯುಷ್ ವೈದ್ಯರ ಪ್ರಮಾಣ ಪತ್ರ ವಿತರಿಸುವ ವೇಳೆ ಮಹಿಳೆ ಧರಿಸಿದ್ದ ಹಿಜಾಬ್ನ್ನು ಸಾರ್ವಜನಿಕ ವೇದಿಕೆಯಲ್ಲಿ ಎಳೆದು ಅವಮಾನ ಮಾಡಿದ ಬಿಹಾರ ಮುಖ್ಯಮಂತ್ರಿ (Bihar CM) ನಿತೀಶ್ ಕುಮಾರ್ ವಿರುದ್ಧ ಕೂಡಲೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಡಳಿತದ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ಬಿಹಾರ ಸಿಎಂ ಧಾರ್ಮಿಕ ವಸ್ತ್ರವನ್ನು ಎಳೆದಿದ್ದಾರೆ. ಇದು ದೇಶಾದ್ಯಂತ ಆಕ್ರೋಶ ಮತ್ತು ಆತಂಕಕ್ಕೆ ಕಾರಣವಾಗಿದೆ. ಇದು ಮಹಿಳೆಯ ಗೌರವ, ಸ್ವಾತಂತ್ರ್ಯ ಹಾಗೂ ಧಾರ್ಮಿಕ ಹಕ್ಕುಗಳ ಮೇಲೆ ಆದ ಗಂಭೀರ ದಾಳಿಯಾಗಿದೆ ಎಂದು ಕಾರ್ಯಕರ್ತರು ತಿಳಿಸಿದರು.

ಘಟನೆ ಕುರಿತು ರಾಷ್ಟ್ರಪತಿ ಸ್ವತಂತ್ರ ತನಿಖೆಗೆ ಆದೇಶಿಸಬೇಕು. ಸಿಎಂ ನಿತೀಶ್ ಕುಮಾರ್ ಸಾರ್ವಜನಿಕವಾಗಿ ಮಹಿಳೆಯ ಕ್ಷಮೆ ಯಾಚಿಸುವಂತೆ ಸೂಚಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಇದನ್ನೂ ಓದಿ » ಜಾಮೀನು ಮಂಜೂರಾಗಿ 24 ದಿನದ ಬಳಿಕ ಬುರುಡೆ ಚಿನ್ನಯ್ಯಗೆ ಶಿವಮೊಗ್ಗ ಜೈಲಿನಿಂದ ಬಿಡುಗಡೆ
ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಸಯ್ಯದ್ ವಾಹಿದ್ ಅಡ್ಡು, ಪ್ರಮುಖರಾದ ರಮೇಶ್ ಶಂಕರಘಟ್ಟ, ಕಲೀಂ ಪಾಷಾ, ಕಿರಣ್ ಫರ್ನಾಂಡಿಸ್, ಶಿವಾನಂದ, ಸ್ಟೆಲ್ಲಾ ಮಾರ್ಟಿನ್, ರಿಯಾಜ್, ಶಮೀಮ್ ಬಾನು ಮತ್ತಿತರರಿದ್ದರು.
LATEST NEWS
- ಮಾಚೇನಹಳ್ಳಿ ಸುತ್ತಮುತ್ತ ಜನವರಿ 17ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

- ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್

- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





