ಶಿವಮೊಗ್ಗಕ್ಕೆ ಗೀತಾ ಶಿವರಾಜ್‌ ಕುಮಾರ್‌, ಅದ್ಧೂರಿ ಮೆರವಣಿಗೆಗೆ ಪ್ಲಾನ್‌, ಎಲ್ಲಿಂದ ನಡೆಯಲಿದೆ ರ‍್ಯಾಲಿ?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 19 MARCH 2024

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

SHIMOGA : ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಕಾವು ಪಡೆಯುತ್ತಿದೆ. ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜ್‌ ಕುಮಾರ್‌ ಅವರು ಅಖಾಡಕ್ಕೆ ಧುಮುಕಲು ಸಿದ್ಧತೆ ನಡೆಸಿದ್ದಾರೆ. ಮಾ.20ರಂದು ಗೀತಾ ಶಿವರಾಜ್‌ ಕುಮಾರ್‌ ಅವರು ಶಿವಮೊಗ್ಗಕ್ಕೆ ಆಗಮಿಸುತ್ತಿದ್ದಾರೆ. ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲು ಸಿದ್ಧತೆ ನಡೆಸಲಾಗಿದೆ.

ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಕಾಂಗ್ರೆಸ್‌ ಪಕ್ಷದ ಜಿಲ್ಲಾಧ್ಯಕ್ಷ ಹೆಚ್‌.ಎಸ್.ಸುಂದರೇಶ್‌, ಮಾ.20ರಂದು ಬೆಳಗ್ಗೆ 10 ಗಂಟೆಗೆ ಪಕ್ಷದ ಅಭ್ಯರ್ಥಿ ಗೀತಾ ಶಿವರಾಜ್‌ ಕುಮಾರ್‌ ಅವರು ಭದ್ರಾವತಿಯ ಬಾರಂದೂರಿನಲ್ಲಿ ಸ್ವಾಗತಿಸಲಾಗುತ್ತದೆ. ಅಲ್ಲಿಂದ ಅದ್ಧೂರಿ ರಾಲಿ ನಡೆಸಲಾಗುತ್ತದೆ. ಬೆಳಗ್ಗೆ 11.30ಕ್ಕೆ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಭೆ ಆಯೋಜಿಸಲಾಗಿದೆ. ಗೀತಾ ಶಿವರಾಜ್‌ ಕುಮಾರ್‌ ಅವರೊಂದಿಗೆ ಸಚಿವ ಮಧು ಬಂಗಾರಪ್ಪ, ನಟ ಶಿವರಾಜ್‌ ಕುಮಾರ್‌ ಅವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಸುಳ್ಳು, ಸತ್ಯದ ನಡುವಿನ ಚುನಾವಣೆ

‘ಈ ಬಾರಿ ಕ್ಷೇತ್ರದಲ್ಲಿ ಸುಳ್ಳು ಮತ್ತು ಸತ್ಯದ ನಡುವಿನ ಚುನಾವಣೆಯಾಗಿದೆ. ಗ್ಯಾರಂಟಿ ಯೋಜನೆಗಳಿಂದಾಗಿ ನಾವು ಗೆಲ್ಲುತ್ತೇವೆ. ಶಿವಮೊಗ್ಗದಲ್ಲಿ ನಡೆದ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮಕ್ಕೆ ನಿಗದಿತ ಜನ ಸೇರಿಲ್ಲ. ಹಣ ಕೊಟ್ಟು ಜನರನ್ನು ಕರೆಯಿಸಲಾಗಿತ್ತು. ಆದರೂ ಕಾರ್ಯಕ್ರಮ ಯಶಸ್ವಿಯಾಗಿಲ್ಲ. ಇನ್ನು, ಈಶ್ವರಪ್ಪ ಬಂಡಾಯದಿಂದ ಕಾಂಗ್ರೆಸ್‌ಗೆ ಲಾಭವಾಗಲಿದೆ. ಈ ಬಾರಿ ಗೀತಾ ಶಿವರಾಜ್‌ ಕುಮಾರ್‌ ಅವರು ಗೆಲುವು ಸಾಧಿಸುತ್ತಾರೆ’ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಆಯನೂರು ಮಂಜುನಾಥ್‌, ಪ್ರಸನ್ನ ಕುಮಾರ್‌, ಚಂದ್ರ ಭೂಪಾಲ್‌ ಸೇರಿದಂತೆ ಹಲವರು ಇದ್ದರು.

 ಇದನ್ನೂ ಓದಿ ಯಾರೂ ಇಲ್ಲದಾಗ ಮನೆಯಲ್ಲಿ ಕಾಣಿಸಿತು ಹೊಗೆ, ಬೆಂಕಿ ನಂದಿಸಿ ಒಳ ಹೋದ ಮಾಲೀಕರಿಗೆ ಕಾದಿತ್ತು ಶಾಕ್

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment