ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | CONGRESS | 10 ಮೇ 2022
ಕೇಂದ್ರ ಹಾಗೂ ರಾಜ್ಯ ಸರ್ಕಾರದ ಭ್ರಷ್ಟಾಚಾರ, ದುರಾಡಳಿತ ಖಂಡಿಸಿ ಇವತ್ತು ಶಿವಮೊಗ್ಗ ನಗರದಲ್ಲಿ ಜನ ದನಿ ಪ್ರತಿಭಟನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಸೇರಿ ರಾಜ್ಯ ಮಟ್ಟದ ಅನೇಕ ನಾಯಕರು ಇದರಲ್ಲಿ ಭಾಗವಹಿಸಲಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಎಸ್. ಸುಂದರೇಶ್ ತಿಳಿಸಿದರು.
ಇವತ್ತು ಬೆಳಗ್ಗೆ 10.30ಕ್ಕೆ ಅಶೋಕ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಗಲಿದೆ. ಬಿ.ಎಚ್.ರಸ್ತೆ, ನೆಹರು ರಸ್ತೆ, ಗೋಪಿ ವೃತ್ತ ಮೂಲಕ ಬಾಲರಾಜ ಅರಸ್ ರಸ್ತೆಯ ಭೋವಿ ಸಮಾಜದ ಹಾಸ್ಟೆಲ್ ಆವರಣಕ್ಕೆ ತಲುಪಲಾಗುವುದು. ಅಲ್ಲಿ ನಡೆಯುವ ಸಮಾವೇಶದಲ್ಲಿ 25 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ಹೇಳಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್, ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ, ಕಿಮ್ಮನೆ ರತ್ನಾಕರ್, ಶಾಸಕ ಬಿ.ಕೆ.ಸಂಗಮೇಶ್ವರ್, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಮಾಜಿ ಶಾಸಕರಾದ ಕೆ.ಬಿ.ಪ್ರಸನ್ನಕುಮಾರ್, ಎಚ್.ಎಂ. ಚಂದ್ರಶೇಖರಪ್ಪ, ಬೇಳೂರು ಗೋಪಾಲಕೃಷ್ಣ, ಮುಖಂಡರಾದ ಮಂಜುನಾಥ ಗೌಡ ಸೇರಿ ಹಲವರು ಪಾಲ್ಗೊಳ್ಳಲಿದ್ದಾರೆ.
ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಆರೋಪಿಯಾಗಿದ್ದರೂ ಅವರನ್ನು ಈವರೆಗೂ ಬಂಧಿಸಿಲ್ಲ. ಕೂಡಲೇ ಅವರನ್ನು ಬಂಧಿಸಬೇಕು. ಪಿಎಸ್ಐ ನೇಮಕಾತಿ ಹಗರಣದಲ್ಲಿ ಸಿಐಡಿ ತನಿಖೆಯಲ್ಲಿ ಬಗೆದಷ್ಟು ಅಕ್ರಮಗಳು ಹೊರಬರುತ್ತಿದ್ದು, ಕೇವಲ ಮಧ್ಯವರ್ತಿಗಳನ್ನು ಬಂಧಿಸಿದರೆ ಸಾಲದು. ಹಗರಣದ ರೂವಾರಿಗಳು ವಿಧಾನಸೌಧದಲ್ಲಿಯೇ ಇದ್ದಾರೆ. ಅವರ ವಿರುದ್ಧವೂ ಕ್ರಮ ಜರುಗಿಸಬೇಕು. ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಒತ್ತಾಯಿಸಿದರು.
ಪಾಲಿಕೆ ಪ್ರತಿಪಕ್ಷ ನಾಯಕಿ ಯಮುನಾ ರಂಗೇಗೌಡ, ಸದಸ್ಯರಾದ ರೇಖಾ ರಂಗನಾಥ್, ಮೆಹಕ್ ಷರೀಫ್, ಪ್ರಮುಖರಾದ ಇಸ್ಮಾಯಿಲ್ ಖಾನ್, ಚಂದ್ರಭೂಪಾಲ್, ಎಸ್. ರವಿಕುಮಾರ್, ಚಂದ್ರಶೇಖರ್, ಎಂ. ಚಂದನ್, ಪ್ರವೀಣ್ ಕುಮಾರ್ ಇತರರಿದ್ದರು.
ಇದನ್ನೂ ಓದಿ – ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















